ದೆಹಲಿ ವಿಧಾನಸಭೆಗೆ ಮಾಸ್ಕ್ ಧರಿಸಿ ಆಕ್ಸಿಜನ್ ಸಿಲಿಂಡರ್ ನೊಂದಿಗೆ ಪ್ರವೇಶಿಸಿದ ಬಿಜೆಪಿ ಶಾಸಕರು! » Dynamic Leader
October 22, 2024
ದೇಶ

ದೆಹಲಿ ವಿಧಾನಸಭೆಗೆ ಮಾಸ್ಕ್ ಧರಿಸಿ ಆಕ್ಸಿಜನ್ ಸಿಲಿಂಡರ್ ನೊಂದಿಗೆ ಪ್ರವೇಶಿಸಿದ ಬಿಜೆಪಿ ಶಾಸಕರು!

ನವದೆಹಲಿ: ದೆಹಲಿಯಲ್ಲಿ ವಾಯು ಮಾಲಿನ್ಯ ನಿಯಂತ್ರಿಸುವಲ್ಲಿ ಆಮ್ ಆದ್ಮಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಬಿಜೆಪಿ ಶಾಸಕರು ಇಂದು ದೆಹಲಿ ವಿಧಾನಸಭೆಗೆ ಮಾಸ್ಕ್ ಧರಿಸಿ ಆಕ್ಷಿಜೆನ್ ಸಿಲಿಂಡರ್ ನೊಂದಿಗೆ ಬಂದಿದ್ದರು.

ದೆಹಲಿಯಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಕಾರಣದಿಂದಾಗಿ ಅನೇಕ ಜನರು ಉಸಿರಾಟದ ತೊಂದರೆ ಮತ್ತು ಹೃದಯದ ತೊಂದರೆಗಳಿಂದ ಬಳಲುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ದೆಹಲಿ ವಿಧಾನಸಭೆ ನಡೆಯಿತು. ಆಗ ಬಿಜೆಪಿ ಶಾಸಕರು ಮುಖ ಕವಚದೊಂದಿಗೆ ಕೈಯಲ್ಲಿ ಸಣ್ಣ ಆಮ್ಲಜನಕ ಸಿಲಿಂಡರ್ ಹಿಡಿದು ವಿಧಾನಸಭೆಗೆ ಬಂದು ಕೋಲಾಹಲವನ್ನು ಎಬ್ಬಿಸಿದರು.

ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯವನ್ನು ನಿಯಂತ್ರಿಸಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದಿರುವುದನ್ನುಖಂಡಿಸಲು ಸಿಲಿಂಡರ್ ಸಮೇತ ವಿಧಾನಸಭೆಗೆ ಬಂದಿರುವುದಾಗಿ ಅವರು ಹೇಳಿದರು.

ದೆಹಲಿಯ ಸಮೀಪವಿರುವ ಪಂಜಾಬ್ ರಾಜ್ಯದಲ್ಲಿ ಕೋಲುಗಳನ್ನು ಸುಡುವುದರಿಂದ ವಾಯುಮಾಲಿನ್ಯ ಪರಿಸ್ಥಿತಿಯು ಹದಗೆಟ್ಟಿದೆ. ಇಂತಹ ಪರಿಸ್ಥಿತಿಯಲ್ಲಿ ಸಾಮಾನ್ಯ ಜನರು ನಡೆದುಕೊಂಡು ಹೋಗಲು ಸಹ ಸಾಧ್ಯವಿಲ್ಲ. ಕೋಲು ಸುಡುವುದರಿಂದ ವಾಯು ಗುಣಮಟ್ಟ ಸೂಚ್ಯಂಕ (AQI) ಮಟ್ಟಕ್ಕೆ ಏರಿಕೆಯಾಗಿದೆ.

ಚಳಿಗಾಲ ಆರಂಭವಾಗುತ್ತಿದ್ದಂತೆ ದೆಹಲಿಯ ಗಾಳಿಯ ಗುಣಮಟ್ಟ ಪ್ರತಿವರ್ಷವು ಅಪಾಯಕಾರಿ ಮಟ್ಟ ತಲುಪುತ್ತದೆ. ದೆಹಲಿಯ ಸುತ್ತಲಿನ ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ರಾಜಸ್ಥಾನದಲ್ಲಿ ಗೋಧಿ ಬೆಳೆದ ನಂತರ ಹುಲ್ಲುಗಳನ್ನು ಸುಡುವುದರಿಂದ, ಸಾರಿಗೆಯಿಂದ ಹೊರಸೂಸುವಿಕೆ, ಇತರ ಕೈಗಾರಿಕೆಗಳ ಹೊರಗಿನ ಕಲ್ಲಿದ್ದಲು ಸ್ಥಾವರಗಳು, ತೆರೆದ ಜಾಗದಲ್ಲಿ ಕಸವನ್ನು ಸುಡುವುದು ಮತ್ತು ಧೂಳಿನಿಂದ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿದೆ.

ಇದನ್ನು ನಿಯಂತ್ರಿಸಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಯಾವುದೇ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂಬುದು ಬಿಜೆಪಿಯವರ ಆರೋಪವಾಗಿದೆ. ಅದಕ್ಕಾಗಿ ಈ ರೀತಿಯ ವಿನೂತನವಾದ, ಜನರ ಗಮನ ಸೆಳೆಯುವ ಗುರುತರವಾದ ಪ್ರತಿಭಟನೆಗಳನ್ನು ಬಿಜೆಪಿ ಪಕ್ಷವು ಮಾಡುತ್ತಿದೆ.

Related Posts