ಮಾನ್ವಿಯಲ್ಲಿ ಮೆರೆದಾಡುವ ಮಹಾನೀಯರು! ಚುನಾವಣೆ ಒಂದು ನೋಟ » Dynamic Leader
October 22, 2024
ರಾಜಕೀಯ

ಮಾನ್ವಿಯಲ್ಲಿ ಮೆರೆದಾಡುವ ಮಹಾನೀಯರು! ಚುನಾವಣೆ ಒಂದು ನೋಟ

ವರದಿ: ರಾಮು, ನೀರಮಾನ್ವಿ

ಮಾನ್ವಿ: ರಾಯಚೂರು ಜಿಲ್ಲೆ, ಮಾನ್ವಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯು ದಿನದಿಂದ ದಿನಕ್ಕೆ ಹಲವಾರು ರೀತಿಯ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಮಾನ್ವಿ ಕ್ಷೇತ್ರದಲ್ಲಿ, ಅಧಿಕಾರದ ಚುಕ್ಕಾಣಿ ಹಿಡಿಯಲು ಸದರಿ ಜನಾಂಗದಲ್ಲಿಯೇ ತೀವ್ರ ಪೈಪೋಟಿ ನೆಡೆಯುತ್ತಿದೆ. ಜೆಡಿಎಸ್ ನಿಂದ ಹಾಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರಿಗೆ ಈ ಬಾರಿಯೂ ಜೆಡಿಎಸ್ ಟಿಕೆಟ್ ನೀಡುವುದು ಖಚಿತವಾಗಿದೆ. ಅವರು ಮತ್ತೊಮ್ಮೆ ಆರಿಸಿ ಬರಲು ತೆರೆಮರೆಯಲ್ಲಿ ಕಸರತ್ತು ಮಾಡಿಕೊಂಡು ಬರುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯ ಪಂಚರತ್ನ ಯಾತ್ರೆಯ ಎಫೆಕ್ಟು ಇವರಿಗೆ ಕೈ ಕೊಡುವುದೇ ಎಂದು ಕಾದು ನೋಡೋಣ.

ಕಾಂಗ್ರೆಸ್ ನಲ್ಲಿ ಗೊಂದಲದ ವಾತಾವರಣ ಇದೆ. ಆ ಪಕ್ಷದಿಂದ ಜಿ.ಹಂಪಯ್ಯ ನಾಯಕ, ಶರಣಪ್ಪ ನಾಯಕ ಗುಡದಿನ್ನಿ, ರಾಜ ವಸಂತ್ ನಾಯಕ, ದೇವದುರ್ಗದ ಮಾಜಿ ಸಂಸದರಾದ ಬಿ.ವಿ.ನಾಯಕ ಮುಂತಾದವರು ತಮ್ಮದೇ ಆದ ರಾಜಕೀಯ ಪ್ರಭಾವವನ್ನು ಬಳಸಿಕೊಂಡು ಟಿಕೆಟ್ ಗಾಗಿ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಈ ಬಾರಿ ಕಾಂಗ್ರೆಸ್ ಯಾರಿಗೆ ಟಿಕೆಟ್ ನೀಡಲಿದೆ ಎಂಬ ಗುಟ್ಟನ್ನು ಬಿಟ್ಟುಕೊಡದೆ, ಆಕಾಂಕ್ಷಿಗಳನ್ನು ತುದಿಕಾಲಮೇಲೆ ನಿಲ್ಲುವಂತೆ ಮಾಡಿದೆ. ಬಿಜೆಪಿ ಪಕ್ಷದಲ್ಲಿ ಮಾಜಿ ಶಾಸಕರಾದ ಗಂಗಾಧರ ನಾಯಕ, ಮಾನಪ್ಪ ನಾಯಕ, ಮ್ಯಾಕಲ್ ಅಯ್ಯಪ್ಪ ನಾಯಕ ಸೇರಿದಂತೆ ಹಾಲಿ ಸಚಿವರಾದ ಶ್ರೀರಾಮುಲು ಹಾಗೂ ದೇವದುರ್ಗ ಶಾಸಕರಾದ ಶಿವನಗೌಡ ನಾಯಕ ಅವರು ಟಿಕೆಟ್ ಗಾಗಿ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಅಮ್ ಅದ್ಮಿ ಪಕ್ಷದಿಂದ ರಾಜ ಶ್ಯಾಮ್ ಸುಂದರ್ ನಾಯಕ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ. ಇನ್ನು ಜನಾರ್ದನ ರೆಡ್ಡಿಯ ಕರ್ನಾಟಕ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯು ಕೂಡ ಕಣದಲ್ಲಿ ಇರಬಹುದು ಎಂದು ಹೇಳಲಾಗುತ್ತಿದೆ. ಅಲ್ಲದೆ ಕಳೆದ ಬಾರಿ ಪಕ್ಷೇತರರಾಗಿ ಸ್ಪರ್ಧಿಸಿದ ಡಾ.ತನುಶ್ರೀ ಕೂಡ ಕಾಂಗ್ರೆಸ್ ಟಿಕೆಟ್ ಗಾಗಿ ಹರಸಾಹಸ ಪಡುತ್ತಿರುವುದು ಗುಟ್ಟಾಗಿ ಏನು ಉಳಿದಿಲ್ಲ. ಒಂದು ವೇಳೆ ಕಾಂಗ್ರೆಸ್ ಟಿಕೆಟ್ ಕೊಡದಿದ್ದರೆ ಹಿಂದಿನಂತೆ; ಮುಂದೆಯೂ ಪಕ್ಷೇತರರಾಗಿ ಸ್ಪರ್ಧಿಸುವುಸು ನಿಶ್ಚಿತ.

ಈ ಕ್ಷೇತ್ರದಲ್ಲಿ ಗೆಲ್ಲುವ ಅಭ್ಯರ್ಥಿ ಯಾರು?
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಹಂಪಯ್ಯ ನಾಯಕ, ಬಿಜೆಪಿಯಿಂದ ಶರಣಪ್ಪ ನಾಯಕ, ಜೆಡಿಎಸ್ ನಿಂದ ರಾಜಾ ವೆಂಕಟಪ್ಪ ನಾಯಕ, ಪಕ್ಷೇತರ ಅಭ್ಯರ್ಥಿ ಎಂ.ಈರಣ್ಣನವರ ಸೊಸೆ ಡಾ.ತನುಶ್ರೀ ಅವರ ಮದ್ಯ ತೀವ್ರ ಸ್ವರೂಪದ ಪೈಪೋಟಿ ಇತ್ತು. ಆದರೆ ಎಲ್ಲವನ್ನು ಹಿಮ್ಮೆಟ್ಟಿಸಿ ಗೆದ್ದ ನಿಂತವರು ಜೆಡಿಎಸ್ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ. ಆದರೇ ಆಗಿನ ಪರಿಸ್ಥಿತಿಯೇ ಬೇರೆಯದಾಗಿತ್ತು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಚುನಾವಣೆಯಲ್ಲಿ ಎಂ.ಈರಣ್ಣನವರು ತಮ್ಮ ಮಡದಿಯನ್ನು ಅಧ್ಯಕ್ಷೆಯಾಗಿ ಮಾಡಲು ಶತಃ ಪ್ರಯತ್ನ ಮಾಡುತ್ತಿರುವ ಸಂದರ್ಭದಲ್ಲಿ, ರಾಯಚೂರು ಜಿಲ್ಲಾ ಮುಖಂಡರು ಅದಕ್ಕೆ ಎಳ್ಳು ನೀರು ಬಿಟ್ಟು, ರಾಜಕೀಯ ಗಂದ ಗಾಳಿ ಗೊತ್ತಿಲ್ಲದ ಬಿಜೆಪಿ ಪಕ್ಷದ ಅದಿ ವೀರಲಕ್ಷ್ಮಿ ಎನ್ನುವ ಅಭ್ಯರ್ತಿಯನ್ನು ತಂದು ವಾಮ ಮಾರ್ಗದಲ್ಲಿ ಗೆಲ್ಲಿಸಿಕೊಂಡರು. ಇದರಿಂದ ಕೆಂಡಾಮಂಡಲರಾದ ಎಂ.ಈರಣ್ಣ, ಅಧ್ಯಕ್ಷರ ಚುನಾವಣೆಯಲ್ಲಿ ಕುತಂತ್ರ ಮಾಡಿದ ಕಾಂಗ್ರೆಸ್ ಪಕ್ಷದ ನಾಯಕರಿಗೆ ತಕ್ಕ ಪಾಠವನ್ನು ಕಲಿಸಬೇಕೆನ್ನುವ ಜಿದ್ದಿಗೆ ಬಿದ್ದು, ಸೊಸೆ ಡಾ.ತನುಶ್ರೀಯನ್ನು ಪಕ್ಷೇತರ ಅಭ್ಯರ್ತಿಯಾಗಿ ಕಣಕ್ಕೆ ಇಳಿಸಿ, ಕಾಂಗ್ರೆಸ್ ಸೋಲಿಸುವಲ್ಲಿ ಯಶಶ್ವಿಯಾದರು. ಆದ್ದರಿಂದ ಜೆಡಿಎಸ್ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ ಗೆಲುವು ಸುಲುಭವಾಗಿತ್ತು. ಆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ನಾಲ್ಕನೇ ಸ್ಥಾನಕ್ಕೆ ಕಳುಹಿಸಿದ ಕೀರ್ತಿ ಎಂ.ಈರಣ್ಣನವರಿಗೆ ಸಲ್ಲುತ್ತದೆ.

ಎಂ.ಈರಣ್ಣ

ಕಳೆದ ಬಾರಿ ನೆಡದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಹಂಪಯ್ಯ ನಾಯಕ, ಜೆಡಿಎಸ್ ನಿಂದ ರಾಜ ವೆಂಕಟಪ್ಪ ನಾಯಕ, ಬಿಜೆಪಿಯಿಂದ ಮೊದಲಿಗೆ ಮಾನಪ್ಪ ನಾಯಕಗೆ ಟಿಕೆಟ್ ಘೋಷಿಸಿ, ನಂತರ ಶರಣಪ್ಪ ನಾಯಕ ಗುಡದಿನ್ನಿ ಅವರಿಗೆ ನೀಡಲಾಯಿತು. ಶರಣಪ್ಪ ನಾಯಕ ಈಗ ಕಾಂಗ್ರೆಸ್ ನಲ್ಲಿ ಇದ್ದಾರೆ. ಮುಂಬರುವ ಚುನಾವಣೆಯಲ್ಲಿ ಎಂ.ಈರಣ್ಣ ಹಾಗೂ ಅವರ ಸೊಸೆ ಡಾ.ತನುಶ್ರೀಯ ಪಾತ್ರ ನಿರ್ನಾಯಕವಾಗಿರುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ಕಳೆದ ಬಾರಿ ಇದ್ದಂತ ವಾತವಾರಣ ಈಗಿಲ್ಲ. ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ. ಇದರಿಂದಾಗಿ ಈ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಎನ್ನುವುದು ಯಾಕ್ಷ ಪ್ರಶ್ನೆಯಾಗಿದೆ. ಟಿಕೆಟ್ ಹಂಚಿಕೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಗೊಂದಲವಿದೆ. ಇವರೆಡರ ಮದ್ಯ ಎಂ.ಈರಣ್ಣನವರ ನೆಡೆ ಗುಪ್ಪವಾಗಿದೆ. ಹಾಗಾದರೆ ಗೆಲ್ಲುವ ಅಭ್ಯರ್ತಿ ಯಾರು ಎಂಬುದು ರಾಯಚೂರಿನಲ್ಲಿ ಮಾತ್ರವಲ್ಲ ಮಾನ್ವಿಯಲ್ಲೂ ಪ್ರತಿಧ್ವನಿಸುತ್ತಿದೆ.

Related Posts