68ನೇ ಕನ್ನಡ ರಾಜ್ಯೋತ್ಸವವನ್ನು ಸಾಂಸ್ಕೃತಿಕವಾಗಿ ಆಚರಿಸಿದ ಕುವೆಂಪು ನಗರದ ನಿವಾಸಿಗಳು! » Dynamic Leader
January 22, 2025
ಬೆಂಗಳೂರು

68ನೇ ಕನ್ನಡ ರಾಜ್ಯೋತ್ಸವವನ್ನು ಸಾಂಸ್ಕೃತಿಕವಾಗಿ ಆಚರಿಸಿದ ಕುವೆಂಪು ನಗರದ ನಿವಾಸಿಗಳು!

ಬೆಂಗಳೂರು: ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ರಾಮಮೂರ್ತಿ ನಗರ ವ್ಯಾಪ್ತಿಯ ಕುವೆಂಪು ನಗರದಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಎಂದಿನಂತೆ ಈ ವರ್ಷವೂ ಅದ್ದೂರಿಯಾಗಿ ಆಚರಿಸಲಾಯಿತು. ಅದೂ ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷ ಪೂರ್ಣಗೊಂಡ ಈ ವಿಶೇಷ ಸಂದರ್ಭದ ಹಿನ್ನೆಲೆಯಲ್ಲಿ ಬಡಾವಣೆಯ ನಿವಾಸಿಗಳೆಲ್ಲರೂ ಒಂದೆಡೆ ಸೇರಿ ಸಂಭ್ರಮಿಸಿ, ಸಿಹಿ ಹಂಚುವ ಮೂಲಕ ಸಾಂಸ್ಕೃತಿಕವಾಗಿ ಕೊಂಡಾಡಿದ್ದು ವಿಶೇಷವೆನಿಸಿತು.

ಕನ್ನಡ ಧ್ವಜದ ಸುತ್ತಲೂ ಮಕ್ಕಳೆಲ್ಲರೂ ನಿಂತು ದೇಶ ಭಕ್ತಿ ಗೀತೆಗಳನ್ನು ಮತ್ತು ನಾಡ ಗೀತೆಗಳನ್ನು ಮಧುರವಾದ ಧ್ವನಿಯಲ್ಲಿ ಹಾಡಿದ್ದು ಮನಸೆಳೆಯಿತು. ಕುವೆಂಪುನಗರ ಹೌಸ್ ಓನರ್ಸ್ ವೆಲ್ಫೇರ್ ಅಸೋಸಿಯೇಷನ್ ವತಿಯೊಂದ ಏರ್ಪಡಿಸಿದ್ದ ಈ ಕಾರ್ಯಕ್ರಮದಲ್ಲಿ ಸಂಘದ ಎಲ್ಲಾ ಪದಾಧಿಕಾರಿಗಳು, ಸದಸ್ಯರುಗಳು ಮತ್ತು ಬಡಾವಣೆಯ ನಿವಾಸಿಗಳೆಲ್ಲರೂ ಭಾಗವಹಿಸಿದ್ದರು.

ಇದನ್ನೂ ಓದಿ: ಜಾತಿವಾರು ಜನಗಣತಿ: “ಸುಳ್ಳುಗಳನ್ನು ಹರಡುವ ಬದಲು ಉತ್ತರಿಸಿ..” – ಅಮಿತ್ ಶಾ ಅವರನ್ನು ಪ್ರಶ್ನಿಸಿದ ತೇಜಸ್ವಿ ಯಾದವ್!

Related Posts