ಲೇಖನ Archives » Dynamic Leader
October 18, 2024
Home Archive by category ಲೇಖನ

ಲೇಖನ

ಲೇಖನ

ಡೈನಾಮಿಕ್ ಲೀಡರ್‌ನಲ್ಲಿ ಇದುವರೆಗೂ ಪ್ರಕಟಣೆಗೊಂಡ ಸಾಮಾಜಿಕ ಕಾರ್ಯಕರ್ತ ಹಾಗೂ ಪತ್ರಕರ್ತ ಖಾಸಿಂ ಸಾಬ್ ಅವರ ಬರಹ / ಭಾಷಣ / ಹೇಳಿಕೆಗಳ ಸಂಗ್ರಹವನ್ನು ಮರು ಓದಿಗಾಗಿ ಎಲ್ಲಾ ಲಿಂಕ್‌ಗಳನ್ನು ಒಂದೆಡೆ ನಿಮಗಾಗಿ ಸಂಗ್ರಹಿಸಿ ಕೊಡಲಾಗಿದೆ; ತಪ್ಪದೆ ಓದಿ.

ಹಿಂದಿನ ಮೀಸಲಾತಿಯನ್ನು ರದ್ದುಗೊಳಿಸಿ ಮುಸ್ಲಿಮರನ್ನು EWS ವರ್ಗಕ್ಕೆ ಸೇರಿಸಿ ಮುಖ್ಯಮಂತ್ರಿ ಬೊಮ್ಮಾಯಿ ಧರ್ಮ ದ್ವೇಷದ ಕ್ರಮ; ಕರ್ನಾಟಕ ಮುಸ್ಲಿಂ ಯುನಿಟಿ ಖಂಡನೆ!

ದಿನಾಂಕ: 25-03-2023
ಬೆಂಗಳೂರು: ಹಿಂದುಳಿದ ವರ್ಗದಲ್ಲಿ ಮುಸ್ಲಿಮರಿಗೆ ಸಂವಿಧಾನ ಬದ್ಧವಾಗಿ ನೀಡಿರುವ ಶೇಕಡಾ 4ರ ಮೀಸಲಾತಿಯನ್ನು ಏಕಾ ಏಕಿ ರದ್ದು ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಮುಸ್ಲಿಂ ದ್ವೇಷವನ್ನು ಬಹಿರಂಗಪಡಿಸಿದ್ದಾರೆ. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ದಲಿತರಿಗಿಂತಲೂ ಹಿಂದುಳಿದಿರುವ ಮುಸ್ಲಿಮರ ಮೀಸಲಾತಿ ಬದಲಾವಣೆ; ನ್ಯಾಯ ಸಮ್ಮತವೆ.!?

ದಿನಾಂಕ: 27-03-2023
ಹಿಂದುಳಿದ ವರ್ಗದಲ್ಲಿ ಮುಸ್ಲಿಮರಿಗೆ ಸಂವಿಧಾನಬದ್ಧವಾಗಿ ನೀಡಿರುವ ಶೇ.4ರ ಮೀಸಲಾತಿಯನ್ನು ಏಕಾ ಏಕಿ ರದ್ದು ಮಾಡಿ ಬದಲಾಯಿಸುವ ಮೂಲಕ ಬಿಜೆಪಿ ನೇತೃತ್ವದ ಕರ್ನಾಟಕ ಸರ್ಕಾರ ಮುಸ್ಲಿಮರ ಕುರಿತಾದ ತಮ್ಮ ಮಲತಾಯಿ ಧೋರಣೆಯನ್ನು ಹಿಜಾಬ್, ಅಝ, ಗೋಹತ್ಯೆ ನಿಷೇದಗಳ ನಂತರದ ಮುಸ್ಲಿಮ್ ವಿರೋಧಿ ನಿಲುವುಗಳ ಮುಂದುವರಿವಿಕೆಯನ್ನು ಮತ್ತೊಮ್ಮೆ ಬಹಿರಂಗಪಡಿಸಿದೆ. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ಬಿ.ಝಡ್.ಜಮೀರ್ ಅಹಮದ್ ಖಾನ್ ರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ: ಕರ್ನಾಟಕ ಮುಸ್ಲಿಮ್ ಯುನಿಟಿ!

ದಿನಾಂಕ: 14-05-2023
ಈ ಭಾರಿ ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ ಬಹಳ ಮುತುವರ್ಜಿಯಿಂದ ತಮ್ಮ ಮತಗಳನ್ನು ಚಲಾಯಿಸಿದ್ದಾರೆ. ಮುಸ್ಲಿಂ ಸಮುದಾಯವು ಇತಿಹಾಸದಲ್ಲಿ ಇಷ್ಟೊಂದು ಭರ್ಜರಿಯಾಗಿ ಕಾಂಗ್ರೆಸ್ಸಿಗೆ ಅತಿಹೆಚ್ಚು ಮತ ಚಲಾಯಿಸಿರುವುದು ಇದೇ ಮೊದಲು. ಕಾಂಗ್ರೆಸ್ಸಿನೊಂದಿಗೆ ಮುಸ್ಲಿಂ ಸಮುದಾಯಕ್ಕೆ ಬಹಳಷ್ಟು ನಿರೀಕ್ಷೆಗಳಿವೆ. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ಕರ್ನಾಟಕ ಮುಸ್ಲಿಮ್ ಯುನಿಟಿಯ ರಾಜ್ಯಾಧ್ಯಕ್ಷರಾಗಿ ಜಬ್ಬಾರ್ ಕಲಬುರ್ಗಿ ಆಯ್ಕೆ: ಖಾಸಿಂ ಸಾಬ್

ದಿನಾಂಕ: 20-06-2023
ಕರ್ನಾಟಕ ಮುಸ್ಲಿಮ್ ಯುನಿಟಿಯ ರಾಜ್ಯ ಕಾರ್ಯಕಾರಿ ಸಮಿತಿಯು ಪುನರ್ ರಚನೆಯಾಗಿದ್ದು, ಜನಾಬ್ ಜಬ್ಬಾರ್ ಕಲಬುರ್ಗಿ ಅವರನ್ನು ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಎಂದು ಕೆ.ಎಂ.ಯುನ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಖಾಸಿಂ ಸಾಬ್ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ಶಾಂತಿ ಕದಡುವ ಹೇಳಿಕೆಯ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ! ಶೇಕಬ್ಬ-KMU

ದಿನಾಂಕ: 03-07-2023
ರಾಜ್ಯದಲ್ಲಿ ಈಗ ಸೌಹಾರ್ದತೆ ನೆಲೆಸಿದೆ; ಅದನ್ನು ಹಾಳು ಮಾಡುವವರು ಯಾರೇ ಆಗಲಿ, ಯಾವುದೇ ಸಮುದಾಯವಾಗಲಿ, ಅವರ ವಿರುದ್ಧ ಕ್ರಮಕೈಗೊಳ್ಳಲು ಹಿಂಜರಿಕೆ ಬೇಡ.
(ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಮುಖಾಂತರ ಕರ್ನಾಟಕ ಮುಸ್ಲಿಮ್ ಯುನಿಟಿ ಪತ್ರ!

ದಿನಾಂಕ: 06-07-2023
ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಮುಸ್ಲಿಮ್ ಸಮುದಾಯದ ಸಾಮಾಜಿಕ-ಆರ್ಥಿಕ-ಉದ್ಯೋಗ ಕ್ಷೇತ್ರಗಳಲ್ಲಿನ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ 2023-24ರ ಬಜೆಟ್ ನಲ್ಲಿ, ಸಾಮಾಜಿಕ ನ್ಯಾಯದ ಯೋಜನೆಗಳನ್ನು ಘೋಷಣೆ ಮಾಡಲು ಕರ್ನಾಟಕ ಮುಸ್ಲಿಮ್ ಯುನಿಟಿ ಮನವಿ ಮಾಡಿದೆ. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ಮುಸ್ಲಿಮರು ಸರ್ಕಾರದ ಎಲ್ಲಾ ಯೋಜನೆಗಳ ಪಾಲುದಾರರು ಆಗಬೇಕು! ಕರ್ನಾಟಕ ಮುಸ್ಲಿಮ್ ಯೂನಿಟಿ (KMU)

ದಿನಾಂಕ: 31-07-2023
ಕರ್ನಾಟಕ ಮುಸ್ಲಿಮ್ ಯೂನಿಟಿ (KMU) ಬಾಗಲಕೋಟೆ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಹಾಗೂ ಮುಸ್ಲಿಮರ ಐಕ್ಯತಾ ಸಮಾವೇಶವು ಬಾಗಲಕೋಟೆ ಜಿಲ್ಲೆಯ ಹುನುಗುಂದ ನಗರದಲ್ಲಿ ಅದ್ದೂರಿಯಾಗಿ ನಡೆಯಿತು. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ತನ್ವೀರ್ ಪೀರಾ ರವರ ಕುರಿತು ಯತ್ನಾಳರ ತೇಜೋವದೆ ಹೇಳಿಕೆಯನ್ನು KMU ತೀವ್ರವಾಗಿ ಖಂಡಿಸುತ್ತದೆ: ಎ.ಖಾಸಿಂ ಸಾಬ್

ದಿನಾಂಕ: 07-12-2023
ವಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 4 ರಂದು ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಭಾಗಿಯಾಗಿದ್ದರು. ಅಲ್ಲಿನ ಒಂದು ಚಿತ್ರವೊಂದನ್ನು ಇಟ್ಟುಕೊಂಡು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ‘ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ಐಸಿಸ್ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ’ ಎಂದು ಆರೋಪಿಸಿ ಸಂಚಲನ ಮೂಡಿಸಿದರು. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ಭಾರತದ ಮೊದಲ ದಲಿತ ಪ್ರಧಾನಿ? ತೊಡಕು ಮತ್ತು ಸಾಧ್ಯತೆಗಳು: ಒಂದು ನೋಟ

ದಿನಾಂಕ: 23-12-2023
ಸಾವಿರಾರು ವರ್ಷಗಳ ಕಾಲದಿಂದ ವರ್ಣ ಜಾತಿಯ ಕಾರಣಕ್ಕಾಗಿ ಸಾಮಾಜಿಕ ನ್ಯಾಯ ಹಾಗೂ ಅಧಿಕಾರದ ಎಲ್ಲಾ ಅವಕಾಶಗಳಿಂದ ವಂಚಿತರಾಗಿರುವ ದಲಿತರು, ನಾಗರಿಕ ಹಕ್ಕುಗಳು ಮತ್ತು ಹಳ್ಳಿಯಿಂದ ದಿಲ್ಲಿಯವರೆಗಿನ ಎಲ್ಲಾ ರಾಜಕೀಯ ಅವಕಾಶಗಳಿಂದ ಇಂದಿಗೂ ವಂಚಿತರಾಗಿದ್ದಾರೆ. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ಮಾನ್ಯ ಬಿ.ಕೆ.ಹರಿಪ್ರಸಾದ್ ಅವರಿಗೆ ಒಂದು ಬಹಿರಂಗ ಪತ್ರ: ಖಾಸಿಂ ಸಾಬ್ ಎ

ದಿನಾಂಕ: 04-01-2024
ಕಾಂಗ್ರೆಸ್ಸಿನ ಹಿರಿಯ ಮುಖಂಡರು, ಪೆರಿಯಾರ್ ವಾದಿಗಳು, ಜಾತ್ಯತೀತ ಸಿದ್ಧಾಂತಃ ನಂಬಿರುವ ನೀವು ಇತ್ತೀಚಿಗೆ ಒಂದು ಹೇಳಿಕೆಯನ್ನು ನೀಡಿದ್ದೀರಾ. “ಅಯೋಧ್ಯೆಗೆ ರಾಮಮಂದಿರ ಉದ್ಘಾಟನೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ಕೊಡಬೇಕು; ಗೋಧ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರೂ ಆಗಬಹುದು” ಎನ್ನುವುದು ನಿಮ್ಮ ಹೇಳಿಕೆಯಾಗಿತ್ತು. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಕೊಲೆ ಖಂಡನೀಯ! ಖಾಸಿಂ ಸಾಬ್

ದಿನಾಂಕ: 19-04-2024
ಬೆಂಗಳೂರು: ಹುಬ್ಬಳ್ಳಿಯಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಫಯಾಜ್‌ ಎಂಬ ಯುವಕ ನೇಹಾ ಎಂಬ ಯುವತಿಯನ್ನು ತಾನು ಓದುತ್ತಿರುವ ಕಾಲೇಜಿನ ಆವರಣದಲ್ಲಿಯೆ ಇರಿದು ಕೊಂದಿದ್ದಾನೆ. ಇಬ್ಬರೂ ಪರಿಚಿತರಿದ್ದರೂ ಹುಡುಗಿ ಮದುವೆಗೆ ಒಪ್ಪಲಿಲ್ಲ ಎಂಬುದೇ ಕೊಲೆಗೆ ಕಾರಣ ಎನ್ನಲಾಗಿದೆ ಎಂದು ಕರ್ನಾಟಕ ಮುಸ್ಲಿಂ ಯುನಿಟಿಯ ಪ್ರಧಾನ ಕಾರ್ಯದರ್ಶಿ ಖಾಸಿಂ ಸಾಬ್ ಹೇಳಿದ್ದಾರೆ. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ಹಜ್ರತ್ ಅಸ್ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಕೂರತ್ ರವರ ನಿಧನಕ್ಕೆ ಕೆಎಂಯು ಸಂತಾಪ!

ದಿನಾಂಕ: 08-07-2024
ಉಳ್ಳಾಲದ ತಾಜುಲ್ ಉಲಮಾ ಉಳ್ಳಾಲ ತಂಙಳ್ ರವರ ಸುಪುತ್ರರು, ಇಸ್ಲಾಂ ಧಾರ್ಮಿಕ ಪಂಡಿತರ ಕುಟುಂಬದ ನೇತಾರರು, ಹಲವಾರು ಮಸೀದಿಗಳ ಖಾಝಿಗಳು, ಗೌರವಾಧ್ಯಕ್ಷರು, ಆದ್ಯಾತ್ಮಿಕ ಗುರುಗಳು, ಸಾವಿರಾರು ಧಾರ್ಮಿಕ ಮುಖಂಡರ ಮಾರ್ಗದರ್ಶಿಗಳು, ತಮ್ಮ ಒಟ್ಟು ಜೀವಿತ ಅವಧಿಯನ್ನು ಸಮಾಜಕ್ಕಾಗಿ ಮುಡುಪಾಗಿ ಇಟ್ಟಿದ್ದ ಹಜ್ರತ್ ಅಸ್ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಕೂರತ್ ರವರು ನಮ್ಮೆಲ್ಲರನ್ನು ಅಗಲಿದ್ದಾರೆ. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

Part-1: ಕರ್ನಾಟಕದ ಮದರಸಗಳಲ್ಲಿ ಕನ್ನಡ ಕಲಿಸಬಾರದೆ..!? – ಖಾಸಿಂ ಸಾಬ್ ಎ.

ದಿನಾಂಕ: 22-07-2024
ನವೀನ್ ಸೂರಿಂಜೆ., ಕರ್ನಾಟಕದ ಮದರಸ – ಕನ್ನಡ ಕಲಿಕೆ – ಕೋಮುವ್ಯಾದಿ ನುಸುಳುವಿಕೆ ಕುರಿತು ನಿಮ್ಮ ನೀಲುವನ್ನು ಬದಲಾವಣೆ ಮಾಡಿಕೊಳ್ಳಲು, ನೀವು ಇತ್ತೀಚೆಗೆ ಪ್ರಕಟಿಸಿದ ಎರಡು ಲೇಖನಗಳ ಎರಡು ಭಾಗಗಳಿಗೆ ನನ್ನ ಪ್ರಶ್ನೆ – ಪ್ರತಿಕ್ರಿಯೆಗಳು! (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

Part-2: ಕರ್ನಾಟಕದ ಮದರಸಗಳಲ್ಲಿ ಕನ್ನಡ ಕಲಿಕೆಯ ದಾಳಿ: ನವೀನ್ ಸೂರಿಂಜೆಯವರ ಎರಡನೇಯ ಲೇಖನಕ್ಕೆ ಪ್ರತಿಕ್ರಿಯೆ!

ದಿನಾಂಕ: 24-07-2024
ಕಾಂ.ನವೀನ್ ಸೂರಿಂಜೆ ಅವರೇ, ನೀವು ಅಥವಾ ಈಗಿನ ‘ಕನ್ನಡ ಅಭಿವೃದ್ಧಿ ಪ್ರಾಧಿಕಾರದ – ಮದರಸಗಳಲ್ಲಿ ಕನ್ನಡಕಲಿಕೆ’ ನಿಲುವನ್ನು ಒಪ್ಪದಿರುವ ಎಡಪಂತಿಯ ಅಥವಾ ಜಾತ್ಯತೀತ ಕಾಂಗ್ರೆಸ್ಸಿಗರ ಗಮನಕ್ಕೆ ಈ ಒಂದು ಪ್ರತಿಕ್ರಿಯೆ! (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ವಕ್ಫ್ ಬೋರ್ಡ್ ಸ್ವತಂತ್ರವನ್ನು ಮೋಟಕುಗೊಳಿಸುವ ಕೇಂದ್ರ ಸರಕಾರದ ಯೋಜನೆಗೆ KMU ವಿರೋಧ!

ದಿನಾಂಕ: 06-08-2024
“ಮೂಲತಃ ಬಿಜೆಪಿಯು ಯಾವಾಗಲೂ ವಕ್ಫ್ ಬೋರ್ಡ್ ವಿರುದ್ಧವಾಗಿದೆ. ಇದರ ಮುಂದುವರಿದು ಈಗ ವಕ್ಫ್ ಮಂಡಳಿಯ ಹಕ್ಕುಗಳನ್ನು ಕಿತ್ತುಕೊಳ್ಳಲು ಮೋದಿ ಸರ್ಕಾರ ಮುಂದಾಗಿದೆ. ಬಿಜೆಪಿ ವಕ್ಫ್ ಬೋರ್ಡ್ ಅನ್ನು ರದ್ದುಪಡಿಸಲು ಬಯಸುತ್ತದೆ!”- ಕರ್ನಾಟಕ ಮುಸ್ಲಿಂ ಯುನಿಟಿ. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ಇಸ್ಮಾಯಿಲ್ ತಮಟಗಾರರ ಮನೆಯ ಮೇಲಿನ ದಾಳಿಗೆ ಕರ್ನಾಟಕ ಮುಸ್ಲಿಂ ಯುನಿಟಿ ತೀವ್ರ ಖಂಡನೆ!

ದಿನಾಂಕ: 17-08-2024
“ಇಸ್ಮಾಯಿಲ್ ತಮಟಗಾರ ಮೇಲೆ ಈ ಹಿಂದೆಯೂ ಸಹ ಹತ್ಯೆಗೆ ಯತ್ನ ನಡೆದಿದ್ದು, ಇವರ ಹಾಗೂ ಇವರ ಕುಟುಂಬಕ್ಕೆ ಜೀವ ಭಯ ಇರುವುದರಿಂದ ಸೂಕ್ತ ರಕ್ಷಣೆ ಒದಗಿಸಬೇಕು” – ಕರ್ನಾಟಕ ಮುಸ್ಲಿಂ ಯುನಿಟಿ. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ಸಿಎಂ ವಿರುದ್ಧದ ರಾಜ್ಯಪಾಲರ ಪ್ರಾಸಿಕ್ಯೂಷನ್ ಜಾರಿ ಸಂಸದೀಯ ಪ್ರಜಾಪ್ರಭುತ್ವದ ವಿರುದ್ಧವಾಗಿದೆ; ಇದು ಖಂಡನೀಯ: ಖಾಸಿಂ ಸಾಬ್

ದಿನಾಂಕ: 18-08-2024
“ನೇರ ಭಾಗಿಯಾಗದ ಆರ್ಥಹೀನ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರನ್ನು ಯೋಜಿಸಿ ಸಿಲುಕಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಘಿ ಪ್ರೇರಿತ ಪಕ್ಷಗಳು ಹೊರಟಿವೆ. ಇದು ಜಾತಿ ಹಾಗೂ ಕೋಮು ಭ್ರಷ್ಟರ ನಡೆಯಾಗಿದೆ” ಎಂದು ಕರ್ನಾಟಕ ಮುಸ್ಲಿಂ ಯುನಿಟಿ (KMU)ಯ ರಾಜ್ಯ ಪ್ರಧಾನ ಕಾರ್ಯದರ್ಶಿ ಖಾಸಿಂ ಸಾಬ್ ಹೇಳಿದ್ದಾರೆ. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ಒಬಿಸಿ ಮುಸ್ಲಿಂ 2B ಮೀಸಲಾತಿಯನ್ನು ಮರುಸ್ಥಾಪಿಸಬೇಕು; 4% ಮೀಸಲಾತಿಯನ್ನು ಶೇ.8ಕ್ಕೆ ಹೆಚ್ಚಿಸಬೇಕು: ಕರ್ನಾಟಕ ಮುಸ್ಲಿಂ ಯುನಿಟಿ

ದಿನಾಂಕ: 24-08-2024
ಕರ್ನಾಟಕ ಮುಸ್ಲಿಮರ ಪ್ರಮುಖ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಸೂಕ್ತ ಹಾಗೂ ಶೀಘ್ರವಾಗಿ ಈಡೇರಿಸಲು ಒತ್ತಾಯಿಸಿ ಇದೇ ಆಗಸ್ಟ್ 22 ರಂದು ಕರ್ನಾಟಕ ಮುಸ್ಲಿಂ ಯುನಿಟಿ ವತಿಯಿಂದ ಬೆಂಗಳೂರಿನಲ್ಲಿ ಮುಸ್ಲಿಂ ಮುಖಂಡರ ಚಿಂತನಾ ಸಭೆಯನ್ನು ಆಯೋಜಿಸಲಾಗಿತ್ತು. (ಮುಂದುವರಿದ ಸುದ್ಧಿಗಾಗಿ ಫೋಟೋ ಕ್ಲಿಕ್ ಮಾಡಿ)

ಲೇಖನ

ಪ್ರವಚನ: ಪೆರಿಯಾರ್
ಕನ್ನಡಕ್ಕೆ: ಡಿ.ಸಿ.ಪ್ರಕಾಶ್

‘ದಲಿತರ ಪ್ರಗತಿಗಾಗಿ ದುಡಿಯುತ್ತಿದ್ದೇವೆ’ ಎಂದು ಅಂದುಕೊಂಡು, ‘ಅವರಿಗಾಗಿ ದುಡಿಯುತ್ತಿದ್ದೇವೆ’ ಎಂದು ಹೇಳಿಕೊಂಡು ತಿರುಗಾಡುವುದೆಲ್ಲವೂ ಅವರನ್ನು ವಂಚಿಸಲಿಕ್ಕಾಗಿಯೇ ಎಂಬುದು ನನ್ನ ಅಭಿಪ್ರಾಯ. ಅಂದರೆ, ಯುರೋಪಿಯನ್ನರು ಭಾರತದ ಒಳಿತಿಗಾಗಿಯೇ ಭಾರತವನ್ನು ಆಳುತ್ತಿದ್ದಾರೆ ಎಂಬಂತಿದೆ. ಇದರಲ್ಲಿ ಬೇರೇನು ವಿಶೇಷತೆಯಿಲ್ಲ.

ನಮ್ಮ ದೇಶದಲ್ಲಿ ‘ದಲಿತ’ ಎಂಬ ಜಾತಿಯ ಹೆಸರು ಇರುವುದರಿಂದಲೇ ‘ಶೂದ್ರ’ ಎಂಬ ಜಾತಿಯ ಹಸರೂ ನಮ್ಮಲ್ಲಿದೆ. ‘ದಲಿತ’ ಎಂಬ ಜಾತಿ ಹೆಸರಿಗಿಂತ ‘ಶೂದ್ರ’ ಎಂಬ ಜಾತಿಯ ಹೆಸರೇ ಅವಹೇಳನಕಾರಿಯಾದದ್ದು. ಹಿಂದೂ ಶಾಸ್ತ್ರದ ಪ್ರಕಾರ, ದಲಿತ ಮಹಿಳೆಯರಲ್ಲಿ ಪತಿವ್ರತೆಯರೂ, ಪರಿಪೂರ್ಣ ತಾಯಿ, ತಂದೆಗೆ ಜನಿಸಿದವರೂ ಇರಬಹುದು. ಶೂದ್ರರಲ್ಲಿ ಹಾಗಿರಲು ಸಾಧ್ಯವಿಲ್ಲ. ಏಕೆಂದರೆ ‘ಶೂದ್ರಳು’ ಎಂದರೆ ದಾಸಿ, ವೇಶ್ಯೆಯ ಮಗಳು ಎಂಬುದು ಇದರರ್ಥ. ‘ಶೂದ್ರ’ ಎಂದರೆ ದಾಸಿಯ ಮಗ, ವೇಶ್ಯೆಯ ಮಗ ಎಂದರ್ಥ. ಇದನ್ನು ಒಪ್ಪದವನು ಹಿಂದೂ ಆಗಲಾರ ಎಂಬುದು ಶಾಸ್ತ್ರದ ನಿಯಮ.

ಆದ್ದರಿಂದ, ‘ಶೂದ್ರ’ ಎಂದು ಕರೆಯಲ್ಪಡುವ ನನ್ನಂತವರು, ‘ದಲಿತ’ ಎಂದು ಕರೆಸಿಕೊಳ್ಳುವವರ ಪ್ರಗತಿಗಾಗಿ ದುಡಿಯುತ್ತಿದ್ದೇನೆ ಎಂದು ಹೇಳಿಕೊಳ್ಳುವುದೆಲ್ಲವೂ ನಮ್ಮನ್ನು ‘ಶೂದ್ರ’ ಎಂದು ಯಾರೂ ಭಾವಿಸಬಾರದು ಎಂಬುದಕ್ಕಾಗಿಯೇ ಹೊರತು ಇದರಲ್ಲಿ ಬೇರೇನೂ ಇಲ್ಲ. ಹಾಗಾಗಿ, ನಾನು ನನಗಾಗಿ ಶ್ರಮಿಸುತ್ತಿರುವುದು ನಿಮ್ಮ ದೃಷ್ಟಿಯಲ್ಲಿ ನಿಮಗಾಗಿ ಶ್ರಮಿಸುತ್ತಿರುವುದಾಗಿ ತೋರುತ್ತದೆ. ನಿನ್ನನ್ನು ಕೀಳಾಗಿ ಕಾಣುವ ಮಹಿಳೆಯರು ಮತ್ತು ಪುರುಷರು, ತಮ್ಮನ್ನು ಇತರರು ನಿಮಗಿಂತ ಕೀಳಾಗಿ ಕಾಣುತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ. ಇತರರನ್ನು ಕೀಳಾಗಿ ಭಾವಿಸುವ ಅಜ್ಞಾನದಿಂದಾಗಿ, ತಮ್ಮನ್ನು ಮತ್ತವರು ಕೀಳಾಗಿ ಭಾವಿಸುವುದು ತಮಗೆ ಹೀನವಾಗಿ ಕಾಣುವುದಿಲ್ಲ.

ಈ ಹಿನ್ನೆಲೆಯಲ್ಲಿ, ನಿಮ್ಮಲ್ಲಿನ ತಪ್ಪುಗಳನ್ನು ಪತ್ತೆಹಚ್ಚಿ, “ನಿಮ್ಮ ದೇಹದಲ್ಲಿ ದುರ್ವಾಸನೆ ಬೀಸುತ್ತಿದೆ; ನೀವು ಸ್ನಾನ ಮಾಡುವುದಿಲ್ಲ; ಬಟ್ಟೆ ಒಗೆಯುವುದಿಲ್ಲ; ನೀವು ಗೋಮಾಂಸ ತಿನ್ನುತ್ತೀರಿ; ನೀವು ಮದ್ಯಪಾನ ಮಾಡುತ್ತೀರಿ; ಇದನ್ನು ಬಿಟ್ಟುಬಿಡಿ” ಎಂದು ಉಪದೇಶ ಮಾಡುತ್ತಾರೆ.

ನೀವು ಬಟ್ಟೆ ಒಗೆಯದೆ, ಸ್ನಾನ ಮಾಡದೆ ಇರುವುದಕ್ಕೆ ಯಾರು ಹೊಣೆ ಎಂದು ಅವರು ಭಾವಿಸುತ್ತಿಲ್ಲ. ನಿಮಗೆ ಕುಡಿಯಲು ನೀರೇ ಇಲ್ಲದಿರುವಾಗ ಸ್ನಾನ ಮಾಡುವುದಾದರೂ ಹೇಗೆ! ಕೊಳಕು ಮತ್ತು ವಾಸನೆ ನಿಮ್ಮ ಜೊತೆಯಲ್ಲಿ ಹುಟ್ಟಿದ್ದೇ ಎಂದು ನಾನು ನಿಮ್ಮನ್ನು ಕೇಳುತ್ತೇನೆ.

ಸ್ನಾನ ಮಾಡಲು, ಬಟ್ಟೆ ಒಗೆಯಲು, ಹಲ್ಲುಜ್ಜಲು ನೀರು ಕೊಡದೆ, ಮಠಾಧೀಶರುಗಳನ್ನು, ಶಂಕರಾಚಾರ್ಯರನ್ನು ತಂದು ಮನೆಯಲ್ಲಿ ಕೂಡಿಹಾಕಿದರೆ ಅವರ ಬಟ್ಟೆ ಶುಚಿಯಾಗಿರುತ್ತದೆಯೇ! ಅವರ ಬಟ್ಟೆ ಸ್ವಚ್ಛವಾಗಿರುತ್ತದೆಯೇ? ಅವರ ದೇಹ ಮತ್ತು ಬಾಯಿ ದುರ್ವಾಸನೆ ಹೊಡೆಯುವುದಿಲ್ಲವೇ? ಯೋಚಿಸಿ ನೋಡಿ. ನೀವು ಒಬ್ಬರನ್ನು ಹಸಿವಿಗೆ ದೂಡಿ, ಅವನು ಸತ್ತ ಮೇಲೆ, “ಅವನು ಹಸಿವಿನಿಂದ ಸತ್ತಿದ್ದಾನೆ ಪಾಪಿ” ಎಂದು ಹೇಳಿದರೆ, ಆ ಪಾಪಿ ಯಾರೆಂದು ಯೋಚಿಸಿ ನೋಡಿ!

ಅಲ್ಲದೆ, ಗೋಮಾಂಸ ತಿಂದು ಮದ್ಯಪಾನ ಮಾಡುತ್ತಿರುವುದೇ ನೀವು ದಲಿತರಾಗಿರಲು ಕಾರಣ ಎಂದು ಹೇಳುವುದು ಸಮಂಜಸವಲ್ಲ. ಗೋಮಾಂಸ ತಿಂದು ಮದ್ಯ ಸೇವಿಸುವವರೆ ಇಂದು ಜಗತ್ತನ್ನು ಆಳುತ್ತಿದ್ದಾರೆ. ಅಲ್ಲದೆ, ನೀವು ಗೋಮಾಂಸ ತಿನ್ನುತ್ತಿರುವುದು ನಿಮ್ಮ ತಪ್ಪಲ್ಲ. ನಿಮಗೆ, ಇತರರಂತೆ ಸರಿಯಾಗಿ ಸಂಪಾದಿಸುವ, ಉದಾರವಾಗಿ ತಿನ್ನುವ, ಬೀದಿಯಲ್ಲಿ ನಡೆಯುವ, ಸ್ವತಂತ್ರವಾಗಿ ಎಲ್ಲಿಯಾದರೂ ಹೋಗಿ ದುಡಿದು ಸಂಪಾದಿಸುವ ಅವಕಾಶವನ್ನು ನೀಡದಿರುವುದರಿಂದ, ಸ್ವಲ್ಪ ಹಣಕ್ಕೆ ಹೆಚ್ಚು ಆಹಾರವಾಗಬಹುದಾದ ಗೋಮಾಂಸವನ್ನು ತಿನ್ನಬೇಕಾಯಿತು.

ಗೋಮಾಂಸವನ್ನು ಅನುಮತಿಸುವ ಧರ್ಮಗಳಿಗೆ ಸೇರಿದ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರಲ್ಲಿಯೂ ಕೆಲವರು ಸ್ವಲ್ಪ ಧಾರಾಳವಾಗಿ ಹಣ ಸಂಪಾದಿಸಲು ತೊಡಗಿದ ಕೂಡಲೇ “ನಮ್ಮಲ್ಲಿ ಗೋಮಾಂಸ ತಿನ್ನುವ ಪದ್ಧತಿ ಇಲ್ಲ” ಎಂದು ಹೇಳುತ್ತಾರೆ. ಆದ್ದರಿಂದ, ನಮ್ಮ ದೇಶದಲ್ಲಿ ದನದ ಮಾಂಸ ತಿನ್ನಲು ಬಡತನವೇ ಮುಖ್ಯ ಕಾರಣವಾಗಿದೆ. ಅಲ್ಲದೆ, ಮೇಕೆ, ಕೋಳಿ, ಮೀನು ಮತ್ತು ಹಂದಿ ಮಾಂಸಕ್ಕಿಂತ ದನದ ಮಾಂಸ ತಿನ್ನುವುದು ಅಷ್ಟುದೊಡ್ಡ ಪಾಪವಾಗಿದೆಯೇ?

ಕೋಳಿ, ಮೀನು ಮತ್ತು ಹಂದಿಗಳು ಲಾಲಾರಸ, ಹುಳುಗಳು, ಕೊಳಕು ಮತ್ತು ಮಲವನ್ನು ತಿನ್ನುತ್ತವೆ. ಹಾಗಿರುವಾಗ, ಇದನ್ನು ತಿನ್ನುವ ಉತ್ತರದ ಬ್ರಾಹ್ಮಣರಿಂದ ದಕ್ಷಿಣದ ಶೂದ್ರರವರೆಗೂ ಒಳ್ಳೆಯ ಜಾತಿ ಮತ್ತು ಸ್ಪರ್ಶಕ್ಕೆ ಅರ್ಹರಾಗಿರುವಾಗ! ಹುಲ್ಲು, ಹತ್ತಿ, ಹೊಟ್ಟು ತಿನ್ನುವ ಹಸುವಿನ ಮಾಂಸ ತಿಂದ ಮಾತ್ರಕ್ಕೆ ಮನುಷ್ಯ ಹೇಗೆ ಕೀಳಾಗುತ್ತಾನೆ? ಬದಲಾಗಿ, ದನದ ಮಾಂಸ ತಿನ್ನುವವರನ್ನು “ಮುಟ್ಟಬೇಡ; ಬೀದಿಯಲ್ಲಿ ನಡೆಯಬೇಡ; ಹೊಂಡದಲ್ಲಿ ನೀರು ಕುಡಿಯಬೇಡ; ಊರಿನೊಳಗೆ ಇರಬೇಡ” ಎನ್ನುತ್ತಾರ! ಇದು ನಿಜವಾದ ಕಾರಣವೇ ಅಲ್ಲ. ಇದು ಉದ್ದೇಶಪೂರ್ವಕವಾಗಿ, ಬೇಕೆಂದೇ ನಿಮ್ಮನ್ನು ಶೋಷಿಸಲು ಯೋಗ್ಯ ಬೇಜವಾಬ್ದಾರಿಯ ಕಾರಣವಾಗಿದೆ ಎಂಬುದು ನನ್ನ ಅಭಿಪ್ರಾಯ.

ಮದ್ಯಪಾನ ಮತ್ತು ಗೋಮಾಂಸವನ್ನು ತಿರಸ್ಕರಿಸುವುದನ್ನು ನಾನು ವಿರೋಧಿಸುತ್ತಿಲ್ಲ. ಮದ್ಯಪಾನ ಮತ್ತು ಗೋಮಾಂಸವನ್ನು ತ್ಯಜಿಸುವುದರಿಂದ ನಿಮ್ಮ ಜಾತಿ  ಮೇಲೇರುತ್ತದೆ ಎಂದು ಕೆಲವರು ಹೇಳುವ ಅಸಂಬದ್ಧ ಕಾರಣವನ್ನು ನಾನು ಒಪ್ಪಲಾರೆ. ನಿಮ್ಮ ಜಾತಿ ಮೇಲೇರಲು ಮದ್ಯ ಮತ್ತು ಗೋಮಾಂಸವನ್ನು ತ್ಯಜಿಸಿ ಎಂದು ನಾನು ಕೇಳುವುದಿಲ್ಲ. ಅದಕ್ಕಾಗಿ ನೀವು ತ್ಯಜಿಸುವ ಅಗತ್ಯವೂ ಇಲ್ಲ.

ನಮ್ಮ ದೇಶದಲ್ಲಿ, ತೆಂಗಿನಮರ ಮತ್ತು ತಾಳೆ ಮರಗಳಿಂದ ಸಿಗುವ ಸೇಂದಿ, ತಯಾರಿಸುವ ಸಾರಾಯಿ ಮತ್ತು ವಿದೇಶಗಳಿಂದ ಬರುವ ಮದ್ಯಪಾನಗಳು, ಚೆನ್ನೈ ಪ್ರಾಂತ್ಯದ 15.20 ಕೋಟಿ ರೂ.ಗಳ ವಹಿವಾಟಿನ ಎಲ್ಲ ರೀತಿಯ ಮದ್ಯಪಾನಗಳನ್ನು ನೀವೇ ಕುಡಿಯುತ್ತಿದ್ದಿರಾ? ಇದನ್ನು ಯಾರಾದರೂ ನಂಬುತ್ತಾರೆಯೇ? ಯಾರೂ ನಂಬುವುದಿಲ್ಲ. ಆದ್ದರಿಂದ ನೀವು, ಜಾತಿಯ ಉನ್ನತಿಯ ಉದ್ದೇಶದಿಂದ ಇವುಗಳನ್ನು ಬಿಡಲು ಬಯಸಿದರೆ, ಮೊದಲು ಇತರರು ಬಿಡಲಿ.

ಮದ್ಯವು ಮಾನವ ನೈತಿಕತೆಗೆ ವಿರುದ್ಧವಾಗಿದೆ ಎಂಬುದನ್ನು ನಾನು ಒಪ್ಪುತ್ತೇನೆ. ಮದ್ಯಪಾನ ನಿಷಧಕ್ಕಾಗಿ ನಾನೂ ಒಂದಿಷ್ಟು ಸೇವೆ ಸಲ್ಲಿಸಿದ್ದೇನೆ. ಆದರೆ ಜಾತಿ ಉನ್ನತಿಗಾಗಿ ಎಲ್ಲ ಜಾತಿಯವರು ಸೇವಿಸುವ ಮದ್ಯಕ್ಕೆ ಯಾವುದೇ ನಿಷೇಧವಿರುವುದಿಲ್ಲ. ಆದ್ದರಿಂದ, ಜಾತಿ ಔನ್ನತ್ಯಕ್ಕೆ ಮದ್ಯಪಾನ ನಿಶೇಧ, ಮಾಂಸಾಹಾರ ವರ್ಜನೆ ಅಗತ್ಯ ಎಂದು ಹೇಳುತ್ತಿರುವುದು ಉದ್ದೇಶಪೂರ್ವಕವಾಗಿ ಹೇಳುತ್ತಿರುವ ಸುಳ್ಳು.

ಆದರೂ, ನಿಮ್ಮಲ್ಲಿರುವ ಕೆಲವು ತಪ್ಪುಗಳನ್ನು ಹೇಳದೆ ಇರಲು ಆಗುತ್ತಿಲ್ಲ. ಅಂದರೆ, ನಿಮ್ಮ ಜಾತಿಗೆ ನೀವೇ ಅವಮಾನವನ್ನು ತಂದುಕೊಳ್ಳುತ್ತಿದ್ದೀರಿ. ಅನಗತ್ಯವಾಗಿ ಯಾರನ್ನು ಕಂಡರೂ ‘ಸ್ವಾಮಿ’ ಎಂದು ನಮಸ್ಕರಿಸುತ್ತೀರಿ. ನೀವು ಕೀಳು ಎಂಬ ಭಾವನೆ ನಿಮ್ಮ ರಕ್ತದಲ್ಲಿದೆ. ಅದು ಬದಲಾಗಬೇಕು. ನೀವು ಒಬ್ಬರನ್ನು ಕಂಡಾಗ, ಅವರ ಮತ್ತು ನಿಮ್ಮ ನಡುವಿನ ವ್ಯತ್ಯಾಸವೇನು ಎಂಬುದು ನಿಮ್ಮ ಮನಸ್ಸಿನಲ್ಲಿ ಉದ್ಭವಿಸಬೇಕು. ಸ್ವಾಭಿಮಾನದ ಬಗ್ಗೆ ಎಚ್ಚರವಿರದ ಜಾತಿಗಳನ್ನು ಬೆಳೆಸಿದರೂ ಮೇಲೇಳುವುದಿಲ್ಲ. ಅವನಿಗೆ ತಾನೊಬ್ಬ ಮನುಷ್ಯ ಎಂಬ ಭಾವನೆ ಮೊದಲು ಬರಬೇಕು.

ನೀವು ಇನ್ನು ಮುಂದೆ ಯಾರನ್ನೂ ‘ಸ್ವಾಮಿ’ ಎಂದು ಕರೆಯಬಾರದು. ಬೇಕಿದ್ದರೆ ‘ಸರ್’ ಎಂದು ಕರೆಯಿರಿ. ನೀವಾಗಿಯೇ ನುಸುಳಿಕೊಳ್ಳುವುದು, ದೂರವಾಗುವುದು ಮುಂತಾದ ದುರ್ಗುಣಗಳು ನಿಮ್ಮನ್ನು ಬಿಟ್ಟು ದೂರವಾಗಬೇಕು. ಆಗ ಮಾತ್ರ ನಿಮ್ಮನ್ನು ಸಮಾನವಾಗಿ ಪರಿಗಣಿಸಲಾಗುತ್ತದೆ.

Source: Thoughts of Periyar E.V.R-1
ತಮಿಳುನಾಡಿನ ಶಿವಗಂಗೈ ಜಿಲ್ಲೆ, ಸಿರಾವಯಲ್ ನಲ್ಲಿ ದಿನಾಂಕ: 07.04.1926 ರಂದು ಪೆರಿಯಾರ್ ಮಾಡಿದ ಪ್ರವಚನ: ದಿನಾಂಕ: 25.04.1926 ರಂದು ‘ಕುಡಿ ಅರಸು’ (Republic) ಪತ್ರಿಕೆಯಲ್ಲಿ ಪ್ರಕಟವಾಗಿದೆ.

ಲೇಖನ

ಡಿ.ಸಿ.ಪ್ರಕಾಶ್

ಮತದಾರರು ಈ ಬಾರಿ ಸರ್ಕಾರ ರಚಿಸುವಷ್ಟು ಬಹುಮತವನ್ನು ಬಿಜೆಪಿಗೆ ನೀಡಲಿಲ್ಲ. ಕೆಲವು ಪಕ್ಷಗಳ ಬೆಂಬಲದೊಂದಿಗೆ ನರೇಂದ್ರ ಮೋದಿ ಅವರು ಪ್ರಧಾನಿ ಕುರ್ಚಿಯ ಮೇಲೆ ಕುಳಿತಿದ್ದಾರೆ. ಈ ಪಕ್ಷಗಳು ಮೋದಿ ಹೇಳಿದ್ದನೆಲ್ಲ ಹಾಗೆಯೇ ಒಪ್ಪಿಕೊಳ್ಳುವ ಪಕ್ಷಗಳಲ್ಲ. ಬದಲಾಗಿ, ಬಿಜೆಪಿಯ ವಿಚಾರಗಳಿಗೆ ವಿರುದ್ಧವಾಗಿರುವ ಮತ್ತು ಅದನ್ನು ವಿರೋಧಿಸುವ ಪಕ್ಷಗಳಾಗಿವೆ.

ಇಂತಹ ‘ನೀತಿ ವೈರಿ’ಗಳ ಕರುಣೆಯಿಂದಲೇ ನರೇಂದ್ರ ಮೋದಿಯವರು ಪ್ರಧಾನಿ ಕುರ್ಚಿಯ ಮೇಲೆ ಕುಳಿತಿದ್ದಾರೆ. ಜಾತಿವಾರು ಜನಗಣತಿಯ ತತ್ವವು ಭಾರತದಾದ್ಯಂತ ಬೇಡಿಕೆಯಾಗಿ ಪ್ರತಿಧ್ವನಿಸುತ್ತಿದೆ. ಇದು ಕಾಂಗ್ರೆಸ್, ಡಿಎಂಕೆ ಸೇರಿದಂತೆ ‘ಇಂಡಿಯಾ’ ಮೈತ್ರಿ ಪಕ್ಷಗಳ ಬೇಡಿಕೆ ಮಾತ್ರವಲ್ಲ, ಬಹುಮತದ ಪಕ್ಷಗಳ ಬೇಡಿಕೆಯೂ ಆಗಿದೆ. “ಪ್ರಧಾನಿ ಮೋದಿಯವರು ಜಾತಿವಾರು ಜನಗಣತಿ ನಿಲ್ಲಿಸುವ ಕನಸು ಕಾಣುತ್ತಿದ್ದಾರೆ. ಆದರೆ ಜಾತಿವಾರು ಜನಗಣತಿಯನ್ನು ತಡೆಯಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ.

ಶೀಘ್ರದಲ್ಲೇ 90 ಪ್ರತಿಶತ ಭಾರತೀಯರು ಜಾತಿ ಆಧಾರಿತ ಜನಗಣತಿಯನ್ನು ಬೆಂಬಲಿಸಿ ಹೋರಾಡುತ್ತಾರೆ. ಪ್ರಸ್ತುತ ಕೇಂದ್ರ ಸರ್ಕಾರವು ಜಾತಿವಾರು ಜನಗಣತಿಗೆ ಆದೇಶಿಸದಿದ್ದರೆ, ನರೇಂದ್ರ ಮೋದಿಯವರು ಮುಂದಿನ ಪ್ರಧಾನಿ ಮಾಡುವುದನ್ನು ನೋಡುತ್ತಾರೆ” ಎಂದು ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ್ದಾರೆ. ಇದು ಬಿಜೆಪಿಯ ಮೈತಿ ಪಕ್ಷಗಳಿಗೂ ನಡುಕವನ್ನು ಹುಟ್ಟಿಸಿದೆ.

ಬಿಜೆಪಿಯ ಮಿತ್ರ ಪಕ್ಷ ಲೋಕ ಜನಶಕ್ತಿ ಪಕ್ಷ ಕೂಡ ಜಾತಿವಾರು ಜನಗಣತಿಗೆ ಬೆಂಬಲ ವ್ಯಕ್ತಪಡಿಸಿದೆ. “ದೇಶಾದ್ಯಂತ ಜಾತಿವಾರು ಜನಗಣತಿ ನಡೆಸುವುದು ಅಗತ್ಯವಾಗಿದೆ” ಎಂದು ಲೋಕ ಜನಶಕ್ತಿ ಪಕ್ಷದ ನಾಯಕ ಹಾಗೂ ಪ್ರಧಾನಿ ಮೋದಿ ಸಂಪುಟದಲ್ಲಿ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವರಾಗಿರುವ ಚಿರಾಗ್ ಪಾಸ್ವಾನ್ ಹೇಳಿದ್ದಾರೆ. “ಸರ್ಕಾರವು ಜಾರಿಗೊಳಿಸುವ ಯೋಜನೆಗಳು ವಿವಿಧ ವರ್ಗಗಳನ್ನು ಆಧರಿಸಿವೆ.

ಸರ್ಕಾರದ ಯೋಜನೆಗಳು ಸರಿಯಾದ ಜನರಿಗೆ ತಲುಪಲು ಜಾತಿವಾರು ಜನಗಣತಿಯ ಅಗತ್ಯವಿದೆ” ಎಂದು ಚಿರಾಗ್ ಪಾಸ್ವಾನ್ ಹೇಳಿದ್ದಾರೆ. “ಕೇಂದ್ರ ಸರ್ಕಾರವು ದೇಶಾದ್ಯಂತ ಜಾತಿವಾರು ಜನಗಣತಿ ನಡೆಸಬೇಕು” ಎಂದು ಲೋಕ ಜನಶಕ್ತಿ ಪಕ್ಷ ಸಂಕಲ್ಪ ಮಾಡಿದೆ. ಜನರನ್ನು ಸುಧಾರಿಸಲು ಸರ್ಕಾರಕ್ಕೆ ಜಾತಿ ಆಧಾರಿತ ಜನಸಂಖ್ಯೆಯ ಮಾಹಿತಿ ಅಗತ್ಯವಿದೆ” ಎಂಬುದನ್ನು ಚಿರಾಗ್ ಪಾಸ್ವಾನ್ ಒತ್ತಿ ಹೇಳುತ್ತಿದ್ದಾರೆ.

ಮೀಸಲಾತಿ ಎಂದು ಕರೆಯಲ್ಪಡುವ ಸಾಮಾಜಿಕ ನ್ಯಾಯವನ್ನು ತೊಡೆದುಹಾಕಲು ನೇರ ನೇಮಕಾತಿ ವ್ಯವಸ್ಥೆಯನ್ನು ಪರಿಚಯಿಸಲು ಕೇಂದ್ರ ಸರ್ಕಾರ ಪ್ರಯತ್ನಿಸಿತು. ಡಿಎಂಕೆ, ಶಿವಸೇನೆ (ಉದ್ಧವ್ ಠಾಕ್ರೆ) ಸೇರಿದಂತೆ ಪಕ್ಷಗಳ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಅದನ್ನು ಹಿಂಪಡೆಯಿತು. ಅದರ ಮಿತ್ರ ಪಕ್ಷ ಲೋಕ ಜನಶಕ್ತಿ ಕೂಡ ಇದನ್ನು ವಿರೋಧಿಸಿತ್ತು. ‘ಇದರಿಂದ ನನಗೆ ತುಂಬಾ ಚಿಂತೆಯಾಗಿದೆ’ ಎಂದು ಚಿರಾಗ್ ಪಾಸ್ವಾನ್ ಹೇಳಿದ್ದರು. ಮೈತ್ರಿ ಪಕ್ಷಗಳೇ ವಿರೋಧಿಸಿದಾಗ ಬಿಜೆಪಿಗೆ ಬೇರೆ ದಾರಿಯಿಲ್ಲದೆ ಹಿಂದಕ್ಕೆ ಸರಿಯಿತು.

ವಕ್ಫ್ ಬೋರ್ಡ್ ಕಾಯ್ದೆಯ ವಿಷಯದಲ್ಲೂ ಇದೇ ಆಗಿದೆ. ವಕ್ಫ್ ಬೋರ್ಡ್ ಆಕ್ಟ್-1995 ಅನ್ನು ವಕ್ಫ್ (ತಿದ್ದುಪಡಿ) ಮಸೂದೆ, 2024 ಎಂದು ಮರುನಾಮಕರಣ ಮಾಡಿದ್ದಾರೆ. ವಕ್ಫ್ ಬೋರ್ಡ್ ತಿದ್ದುಪಡಿ ಮಸೂದೆಯ ಪ್ರಕಾರ, ಆಸ್ತಿಗಳನ್ನು ನಿರ್ಧರಿಸುವ ವಕ್ಫ್ ಮಂಡಳಿಯ ಅಧಿಕಾರವನ್ನು ಬದಲಾಯಿಸಲಾಗಿದೆ. ಈ ಕಾಯಿದೆಯ ಸೆಕ್ಷನ್ 40 ಅನ್ನು ತೆಗೆದು ಹಾಕಲಾಗಿದೆ.

ಕೇಂದ್ರೀಯ ವಕ್ಫ್ ಕೌನ್ಸಿಲ್ ಎಂಬುದನ್ನು ರಚಿಸಿದ್ದಾರೆ. ಅದರಲ್ಲಿ ಮುಸ್ಲಿಮರು ಮಾತ್ರವಲ್ಲದೆ ಮುಸ್ಲಿಮೇತರರೂ ಇರುತ್ತಾರೆ. ವಕ್ಫ್ ಬೋರ್ಡ್ ಜಮೀನುಗಳನ್ನು ಕಡ್ಡಾಯವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೋಂದಣಿ ಮಾಡಬೇಕು. ಈ ಜಾಗ ವಕ್ಫ್ ಆಗಿದೆಯೇ ಇಲ್ಲವೇ ಎಂಬುದನ್ನು ಜಿಲ್ಲಾಧಿಕಾರಿಗಳು ನಿರ್ಧರಿಸುತ್ತಾರಂತೆ.

ಸಂವಿಧಾನದ 30ನೇ ವಿಧಿಯು ಅಲ್ಪಸಂಖ್ಯಾತ ಸಮುದಾಯಗಳಿಗೆ ತಮ್ಮ ಆಸ್ತಿಯನ್ನು ನಿರ್ವಹಿಸಲು ಅಧಿಕಾರ ನೀಡುತ್ತದೆ. ಅದನ್ನೇ ತೆಗೆದುಕೊಂಡು ಹೋಗಿ ಜಿಲ್ಲಾಧಿಕಾರಿಗಳಿಗೆ ನೀಡುವ ಕಾನೂನು ಬಾಹಿರ ಕಾನೂನು ಇದಾಗಿದೆ. ಇದಕ್ಕೆ ‘ಇಂಡಿಯಾ’ ಮೈತ್ರಿ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿ ಮೈತ್ರಿಕೂಟದ ಭಾಗವಾಗಿರುವ, ಮೋದಿ ಸ್ಥಾನವನ್ನು ಉಳಿಸುವ ಇಬ್ಬರು ಪ್ರಮುಖರಲ್ಲಿ ಒಬ್ಬರಾಗಿರುವ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದಾರೆ.

ಇಬ್ಬರಲ್ಲಿ ಮತ್ತೊಬ್ಬರಾದ ನಿತೀಶ್ ಕುಮಾರ್ ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ. “ಈ ಕಾನೂನು ಮುಸ್ಲಿಮರಿಗೆ ಭಯ ಹುಟ್ಟಿಸುತ್ತದೆ” ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. ಬಿಹಾರದಲ್ಲಿ ಶೇ.18ರಷ್ಟು ಮುಸ್ಲಿಮರಿದ್ದಾರೆ. ಅದಕ್ಕಾಗಿಯೇ ನಿತೀಶ್ ಭಯ ಪಡುತ್ತಿದ್ದಾರೆ. ನಿತೀಶ್ ಕುಮಾರ್ ಅವರ ಪಕ್ಷವು ಆರಂಭದಲ್ಲಿ ವಕ್ಫ್ ಕಾಯ್ದೆಯನ್ನು ಬೆಂಬಲಿಸಿತ್ತು. ಆ ಪಕ್ಷದ ಸಂಸದ ರಾಜೀವ್ ರಂಜನ್ ಸಂಸತ್ತಿನಲ್ಲಿ ಬೆಂಬಲಿಸಿ ಮಾತನಾಡಿದರು. ಇದು ಬಿಹಾರ ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿತು.

ನಿತೀಶ್ ಸಂಪುಟದಲ್ಲಿ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾಗಿರುವ ಮೊಹದ್ ಜಮಾ ಖಾನ್ (Mohd Zama Khan) ತಮ್ಮದೇ ಪಕ್ಷವನ್ನು ವಿರೋಧಿಸಿದರು. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಬಿಹಾರದ ಜಲಸಂಪನ್ಮೂಲ ಸಚಿವ ವಿಜಯಕುಮಾರ್ ಚೌಧರಿ ಕೂಡ ವಕ್ಫ್ ಕಾಯ್ದೆ ವಿರುದ್ಧ ವಾಗ್ದಾಳಿ ನಡೆಸಿದರು.

ನಿತೀಶ್ ಪಕ್ಷದ ಕೆಲ ಶಾಸಕರೂ ಕೈಜೋಡಿಸಿದರು. ನಿತೀಶ್ ಕುಮಾರ್ ಅವರ ಸಂಯುಕ್ತ ಜನತಾ ದಳದ ಕಾರ್ಯಾಧ್ಯಕ್ಷ ಸಂಜಯ್ ಝಾ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮೊಹದ್ ಜಮಾ ಖಾನ್ ಅವರು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರನ್ನು ಭೇಟಿಯಾಗಿ ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಈ ರೀತಿ ಗೊಂದಲದ ಉತ್ತುಂಗದಲ್ಲಿದೆ ಕೇಂದ್ರ ಬಿಜೆಪಿ ಸಮ್ಮಿಶ್ರ ಸರ್ಕಾರ.

ಲೇಖನ

ಡಾ.ಖಾಸಿಂ ಸಾಬ್ ಎ

“ಕರ್ನಾಟಕದಲ್ಲಿ ಒಂದು ಕೋಟಿ ಮುಸ್ಲಿಮರು ಈದ್ ಉಲ್ ಅಧಾವನ್ನು (ಬಕ್ರೀದ್) ಪ್ರತಿವರ್ಷ ಆಚರಿಸುತ್ತಾರೆ. ಕರ್ನಾಟಕದ ಒಟ್ಟು ಮುಸ್ಲಿಂ ಜನಸಂಖ್ಯೆ ಒಂದು ಕೋಟಿ. ಸರಿಸುಮಾರು 35 ಲಕ್ಷ ಕುಟುಂಬಗಳು!”

ರಾಜ್ಯದ ಶೇ.50ರಷ್ಟು ಮುಸ್ಲಿಮರು ರೂ.10 ಸಾವಿರದಿಂದ ರೂ.50 ಸಾವಿರ ಬೆಲೆಯ ಆಡು/ಕುರಿಗಳನ್ನು ಬಕ್ರೀದ್ ಹಬ್ಬಕ್ಕೆ ಕಡ್ಡಾಯವಾಗಿ ಕುರ್ಬಾನಿ (ದಾನ) ಕೊಡುತ್ತಾರೆ. ಪ್ರತಿ ಕುರಿ/ಮೇಕೆಗೆ ಸರಾಸರಿ ರೂ.20 ಸಾವಿರ ಬೆಲೆಯನ್ನು ಕೊಟ್ಟು ಕೊಂಡುಕೊಂಡರೂ (50 ಲಕ್ಷ × ರೂ.20000) 4 ಲಕ್ಷ ಕೋಟಿ ರೂಪಾಯಿಗಳ ವಹಿವಾಟು ಆಗುತ್ತದೆ.

ಕೋಮುವಾದಿಯೇತರ ಅಭಿವೃದ್ಧಿಯ ಆರ್ಥಿಕ ದೃಷ್ಟಿಕೋನದಿಂದ ಇದು ಯಾರಿಗೆ ಯಾವ ಜಾತಿ ಮತ್ತು ಧರ್ಮದವರಿಗೆ ಹೆಚ್ಚು ಪ್ರಯೋಜನವಾಗುತ್ತದೆ ಎಂಬುದನ್ನು ನೋಡಬೇಕಿದೆ. ಬಕ್ರೀದ್ ಹಬ್ಬಕ್ಕೆ ಬಳಕೆಯಾಗುವ ಕುರಿ/ಆಡು/ಮೇಕೆಗಳು ಬಹುರಾಷ್ಟ್ರೀಯ ಉತ್ಪನ್ನಗಳಲ್ಲ. ಬದಲಾಗಿ 100% ದೇಸಿ ಗ್ರಾಮೀಣ ಕುರುಬ, ಒಕ್ಕಲಿಗ ಇತರೆ ರೈತಾಪಿ ಸಮುದಾಯಗಳ ಸಾಕು ಪ್ರಾಣಿಗಳಾಗಿವೆ.

ಈ ಪ್ರಾಣಿಗಳನ್ನು ಸಾಕುವವರು ಹಾಗೂ ಮಾರುವವರು ನಮ್ಮ ಕರ್ನಾಟಕ ರಾಜ್ಯದ ಗ್ರಾಮೀಣ ಹಳ್ಳಿಗಳ ರೈತರು. (ವಿಶೇಷವಾಗಿ ಕುರುಬ ಸಮುದಾಯದ ರೈತರರು) ಇದರಿಂದ ರಾಜ್ಯದಲ್ಲಿ 20 ಲಕ್ಷ ರೈತಾಪಿ ಕುಟುಂಬಗಳು ನೇರ ಉದ್ಯೋಗ ಪಡೆಯುತ್ತವೆ. ಒಬ್ಬ ರೈತ ವರ್ಷಕ್ಕೆ ಸರಾಸರಿ 100 ಕುರಿಗಳನ್ನು ನಿರ್ವಹಿಸಿದರೆ, ಪ್ರತಿ ಕುಟುಂಬವು ವರ್ಷಕ್ಕೆ 20 ಲಕ್ಷಗಳನ್ನು ಗಳಿಸುತ್ತವೆ. ಇದು ಹೆಚ್ಚು ಕಮ್ಮಿ ಕರ್ನಾಟಕ ರಾಜ್ಯ ಸರಕಾರದ ಒಂದು ವರ್ಷದ ‘ಆಯವ್ಯಯ’ ಬಜೆಟ್ ಗೆ ಸಮ.

ಆದ್ದರಿಂದ, ಬಕ್ರೀದ್ ಹಬ್ಬ ಸ್ಥಳೀಯ ವ್ಯಾಪಾರ ವ್ಯವಹಾರಕ್ಕೆ ಅಪಾರವಾದ ಕೊಡುಗೆಯನ್ನು ನೀಡುತ್ತದೆ. ಮತ್ತು ರೈತರ ಸ್ವಾವಲಂಬಿ ಬದುಕುಗಳಿಗೆ ಬೆಂಬಲಕಾರಿಯೂ ಆಗಿದೆ. ಅಲ್ಲದೆ, ಸಾವಿರಾರು ಕೋಟಿ ರೂಪಾಯಿಗಳ ಆರ್ಥಿಕತೆ ಮತ್ತು ಸುಮಾರು 20 ಲಕ್ಷ ಸಣ್ಣ ರೈತರಿಗೆ ಉದ್ಯೋಗವನ್ನು ಒದಗಿಸುತ್ತದೆ. ರೈತರ ವ್ಯವಹಾರವು ಎಂದಿಗೂ ಧರ್ಮವನ್ನು ಆಧರಿಸಿಲ್ಲ. ಆದ್ದರಿಂದ ವಿವಿಧ ಸಮುದಾಯಗಳ ಎಲ್ಲಾ ರೈತರು ಇದರ ಪ್ರಯೋಜನವನ್ನು ಪಡೆಯುತ್ತಿದ್ದಾರೆ.

ಜೊತೆಗೆ, ಪ್ರತಿ ಕುರಿ/ಮೇಕೆಯ ಮಾಂಸವನ್ನು ಕನಿಷ್ಠ 100 ಜನ ಸೇವಿಸುತ್ತಾರೆ. ಆದ್ದರಿಂದ ಬಕ್ರೀದ್ ಹಬ್ಬವು ಭಾರತದಲ್ಲಿ ಸರಿಸುಮಾರು 40 ಕೋಟಿ ಜನರಿಗೆ ಆಹಾರವನ್ನು ಒದಗಿಸುತ್ತದೆ. ಈ ಹಬ್ಬದ ಜೊತೆಗೆ ಇದರಿಂದಾಗುವ ವ್ಯಾಪಾರ ದೃಷ್ಟಿಕೋನಗಳು ಮತ್ತು ಉದ್ಯೋಗದ ಹೆಚ್ಚಳವನ್ನೂ ನೋಡಬೇಕಿದೆ.

ಬಕ್ರೀದ್ ಹಬ್ಬದಂದು ನಡೆಯುವ ವಹಿವಾಟಿನಿಂದ ಆಗುವ ಉದ್ಯೋಗ ನಿರ್ಮಾಣ ಮತ್ತು ಜಿಡಿಪಿ ಬೆಳವಣಿಗೆಯ ಬಗ್ಗೆ ಸರಕಾರ ಗಂಭೀರವಾಗಿ ಪರಿಗಣಿಸಿ, ಇಂತಹ ಗ್ರಾಮೀಣ ಕೃಷಿಯಾಧಾರಿತ ವ್ಯಾಪಾರವನ್ನು ಉತ್ತೇಜಿಸಬೇಕಿದೆ. ಬಕ್ರೀದ್ ಹಬ್ಬದ ಪ್ರಯುಕ್ತ ಕುರಿ/ಮೇಕೆಗಳ ಈ ಒಂದು ತಿಂಗಳ ವ್ಯಾಪಾರದಿಂದ ಆಗುವ ಗಳಿಕೆಯಿಂದ ರೈತರು ಇಡೀ ವರ್ಷ ಬದುಕಬಲ್ಲರು ಎಂಬುದನ್ನು ನಾವೆಲ್ಲರೂ ಮನಗಾಣಬೇಕು.

ಲೇಖಕರು:
ಡಾ.ಖಾಸಿಂ ಸಾಬ್ ಎ.

ರಾಜ್ಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಮುಸ್ಲಿಂ ಯುನಿಟಿ.

ಲೇಖನ

ಡಿ.ಸಿ.ಪ್ರಕಾಶ್

ಬಿಜೆಪಿಯ ಮೇಲೆ ಅದರ ಮಾತೃ ಸಂಘಟನೆಯಾದ ಆರ್‌ಎಸ್‌ಎಸ್ ಅತೃಪ್ತದಲ್ಲಿದೆ ಎಂಬ ಸುದ್ದಿ ಪ್ರಕಟವಾಗುತ್ತಲೇ ಇದೆ!

ಇತ್ತೀಚೆಗೆ ಬಿಜೆಪಿ ಮತ್ತು ಅದರ ಸಂಘಟನೆಯಾದ ಆರ್‌ಎಸ್‌ಎಸ್ ನಡುವೆ ಸಂಘರ್ಷ ನಡೆಯುತ್ತಿದೆ. ಅದರಲ್ಲೂ 2024ರ ಲೋಕಸಭೆ ಚುನಾವಣೆ ವೇಳೆಗೆ ಈ ಸಂಘರ್ಷ ಹೆಚ್ಚಿರುವುದನ್ನು ಕಾಣಬಹುದು.

ಬಿಜೆಪಿ ಅಧಿಕಾರದಲ್ಲಿರುವುದರಿಂದ ಆರ್‌ಎಸ್‌ಎಸ್ ಸಂಘಟನೆಗೆ ಮನ್ನಣೆ ನೀಡದಿರುವುದು ಆರ್‌ಎಸ್‌ಎಸ್ ನಿರ್ವಾಹಕರಿಗಾಗಿ ಸಿಟ್ಟು ಹಾಗೂ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರು ಬಿಜೆಪಿಗೆ ಬೆಂಬಲವಾಗಿ ಚುನಾವಣಾ ಕೆಲಸ ಮಾಡಿಲ್ಲ ಎಂಬ ಸುದ್ದಿ ಹೊರಬಿದ್ದಿರುವಾಗಲೇ ಆರ್‌ಎಸ್‌ಎಸ್ ಸಂಘಟನೆಯ ಮುಖವಾಣಿಯಾದ ‘ಆರ್ಗನೈಸರ್’ನಲ್ಲಿ ಈ ಕುರಿತು ಲೇಖನ ಪ್ರಕಟವಾಗಿದೆ.

ಆರ್‌ಎಸ್‌ಎಸ್‌ನ ರತನ್ ಶಾರದಾ ಅವರು ಈ ಲೇಖನವನ್ನು ಬರೆದಿದ್ದಾರೆ. ‘ಮೋದಿ 3.0 – ತಪ್ಪುಗಳನ್ನು ಸರಿಪಡಿಸಲಿಕ್ಕಾಗಿ ಒಂದು ಸಂಭಾಷಣೆ’ ಎಂಬ ಶೀರ್ಷಿಕೆಯ ಲೇಖನದಲ್ಲಿ, ‘ಬಿಜೆಪಿ ನಾಯಕರು ಮತ್ತು ಆಡಳಿತಗಾರರಿಗೆ ಬೀದಿಯಲ್ಲಿ ಧ್ವನಿಸುವ ಜನರ ಕೂಗು ಕೇಳುವುದಿಲ್ಲ. ಬದಲಿಗೆ, ಪ್ರಧಾನಿ ಮೋದಿಯವರ ಜನಪ್ರಿಯತೆಯ ಬೆಳಕಿನಲ್ಲಿ ಅವರು ಬಿಸಿಲು ಕಾಯುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.

ಅಲ್ಲದೆ, ‘ಬಿಜೆಪಿ ನಾಯಕರು ತಮ್ಮ ಬಗ್ಗೆ ಅತಿಯಾದ ಆತ್ಮವಿಶ್ವಾದಲ್ಲಿದ್ದರು. ಆದರೆ ವಾಸ್ತವ ಏನೆಂಬುದನ್ನು ಚುನಾವಣಾ ಫಲಿತಾಂಶ ತೋರಿಸಿದೆ’ ಎಂದು ಲೇಖನದಲ್ಲಿ ಉಲ್ಲೇಖಿಸಲಾಗಿದೆ. ಇದನ್ನು ನೋಡಿದರೆ ಲೋಕಸಭೆ ಚುನಾವಣೆಯಲ್ಲಿ ಆರ್‌ಎಸ್‌ಎಸ್ ಸಂಘಟನೆ ಬಿಜೆಪಿ ಪರ ಕೆಲಸ ಮಾಡಿಲ್ಲ ಎಂಬ ವರದಿಗಳು ನಿಜ ಎಂಬುದನ್ನು ಈ ಲೇಖನ ಅಧಿಕೃತವಾಗಿ ಬಹಿರಂಗಪಡಿಸಿದೆ.

ಲೋಕಸಭೆ ಚುನಾವಣೆ ಫಲಿತಾಂಶದ ವೇಳೆ ಆರ್‌ಎಸ್‌ಎಸ್ ನಾಯಕ ಮೋಹನ್ ಭಾಗವತ್ ಅವರು ಕೆಲವು ಹೇಳಿಕೆಗಳನ್ನು ವ್ಯಕ್ತಪಡಿಸಿದ್ದರು. ಆ ವೇಳೆ ‘ನಿಜವಾದ ಸೇವಕರು ದುರಹಂಕಾರಿಯಾಗಿರುವುದಿಲ್ಲ’ ಎಂದು ಬಿಜೆಪಿ ಸದಸ್ಯರನ್ನು ಪರೋಕ್ಷವಾಗಿ ಟೀಕಿಸಿದ್ದರು.’ಆರ್ಗನೈಸರ್’ನಲ್ಲಿ ಪ್ರಕಟವಾಗಿರುವ ಲೇಖನದಲ್ಲಿ ‘ಚುನಾವಣಾ ಕೆಲಸಗಳಿಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸ್ವಯಂಸೇವಕರನ್ನು (ಆರ್‌ಎಸ್‌ಎಸ್ ಕಾರ್ಯಕರ್ತರು) ಸಂಪರ್ಕಿಸಿಲ್ಲ’ ಎಂದು ಉಲ್ಲೇಖಿಸಲಾಗಿದೆ.

ಲೋಕಸಭೆ ಚುನಾವಣೆ ನಡೆಯುತ್ತಿರುವಾಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಆರ್‌ಎಸ್‌ಎಸ್ ಮತ್ತು ಬಿಜೆಪಿ ನಡುವಿನ ಅಹಂಕಾರವನ್ನು (Ego) ಬಹಿರಂಗಪಡಿಸುವ ಕೆಲವು ಹೇಳಿಕೆಗಳನ್ನು ನೀಡಿದ್ದರು. ಅಂದರೆ, ‘ತನ್ನ ಸ್ವಂತ ಸಮಸ್ಯೆಗಳನ್ನು ಸುಲಭವಾಗಿ ನಿಭಾಯಿಸುವ ಸ್ಥಿತಿಯಲ್ಲಿ ಬಿಜೆಪಿ ಇದೆ. ಅದಕ್ಕೆ ಆರ್‌ಎಸ್‌ಎಸ್ ಬೇಡ’ ಎಂದು ಅವರು ಹೇಳಿದರು.

ಅಲ್ಲದೆ, ವಾಜಪೇಯಿ ಪ್ರಧಾನಿಯಾಗಿದ್ದ ಸಮಯ ಹಾಗೂ ಮೋದಿ ಪ್ರಧಾನಿಯಾಗಿದ್ದ ಸಮಯವನ್ನು ಹೋಲಿಕೆ ಮಾಡಿ ಕೆಲವು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ವಾಜಪೇಯಿ ಕಾಲದಲ್ಲಿ ಬಿಜೆಪಿ, ಆರ್‌ಎಸ್‌ಎಸ್ ಸಹಾಯ ಪಡೆಯುವ ಮಟ್ಟೆಕ್ಕೆ ಒಂದು ಸಣ್ಣ ಶಕ್ತಿಯಾಗಿತ್ತು. ಈಗ ಬಿಜೆಪಿ ಬೆಳೆದಿದೆ. ಯಾರ ಕೃಪಾಕಟಾಕ್ಷವೂ ಇಲ್ಲದೇ ಬಿಜೆಪಿ ಸ್ವಂತ ಬಲದಿಂದ ನಡೆಯುತ್ತಿದೆ’ ಎಂದು ಜೆ.ಪಿ.ನಡ್ಡಾ ಹೇಳಿದ್ದರು.

ಆದರೆ ಜೆ.ಪಿ.ನಡ್ಡಾ ಹೇಳಿದ್ದಕ್ಕೆ ವ್ಯತಿರಿಕ್ತವಾಗಿ ಲೋಕಸಭೆ ಚುನಾವಣೆ ಫಲಿತಾಂಶ ಬಂದಿದೆ. ಬಿಜೆಪಿ 370 ಮತ್ತು ಎನ್‌ಡಿಎ 400 ಸ್ಥಾನಗಳನ್ನು ಗೆಲ್ಲಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಆದರೆ ಬಿಜೆಪಿ ಗೆದ್ದಿರುವುದು 240 ಕ್ಷೇತ್ರಗಳಲ್ಲಿ ಮಾತ್ರ. ಸರ್ಕಾರ ರಚನೆಗೆ ಬೇಕಾದ 272 ಸಂಖ್ಯಾಬಲವನ್ನೂ ಬಿಜೆಪಿ ಮುಟ್ಟಲು ಸಾಧ್ಯವಾಗಲಿಲ್ಲ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಒಟ್ಟು 293 ಸ್ಥಾನಗಳನ್ನು ಮಾತ್ರ ಪಡೆದುಕೊಂಡಿದೆ. ಹೀಗಾಗಿ ಬಿಜೆಪಿ ನಾಯಕರು ಇದನ್ನು ಅರಿಯದೆ ತೇಲಾಡುತ್ತಿದ್ದಾರೆ ಎಂದು ಆರ್‌ಎಸ್‌ಎಸ್ ಕಡೆಯವರು ಹೇಳುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸುತ್ತಿರುವ ರಾಜಕೀಯ ವಿಮರ್ಶಕರು, “ಬಿಜೆಪಿ ಆರ್‌ಎಸ್‌ಎಸ್ ಹಿಡಿತದಲ್ಲಿರಬೇಕು. ಅವರ ರಾಜಕೀಯ ಅಜೆಂಡಾಗಳನ್ನು ಬಿಜೆಪಿ ಆಡಳಿತಗಾರರು ಈಡೇರಿಸಬೇಕು ಎಂದು ಆರ್‌ಎಸ್‌ಎಸ್ ನಿರೀಕ್ಷಿಸುತ್ತದೆ. ಆದರೆ ಬಿಜೆಪಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಬರುವಷ್ಟು ಬೆಳೆದಿರುವಾಗ ಬಿಜೆಪಿ ನಾಯಕರು, ಆರ್‌ಎಸ್‌ಎಸ್ ಸಂಘಟನೆಯ ಮೇಲೆ ಅವಲಂಬಿತರಾಗಿರಲು ಬಯಸುತ್ತಿಲ್ಲ. ಅದುವೇ ಸಮಸ್ಯೆಗೆ ಕಾರಣ” ಎಂದು ಹೇಳುತ್ತಾರೆ.

ಮಣಿಪುರ ರಾಜ್ಯದಲ್ಲಿ ಜನಾಂಗೀಯ ಸಂಘರ್ಷಗಳಿಂದ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರೂ, ಸಾವಿರಾರು ಮಂದಿ ಮನೆ ಕಳೆದುಕೊಂಡು, ಮಹಿಳೆಯರು ಅಧೋಗತಿಗೆ ಒಳಗಾಗಿದ್ದರೂ ಪ್ರಧಾನಿ ಮೋದಿ ಇದುವರೆಗೂ ಮಣಿಪುರಕ್ಕೆ ಭೇಟಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ, ಆರ್‌ಎಸ್‌ಎಸ್ ಮುಖಂಡ ಮೋಹನ್ ಭಾಗವತ್ ಅವರು ‘ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಮೋದಿ ಸರ್ಕಾರದ ಭದ್ರತೆಯ ವೈಫಲ್ಯವೇ ಕಾರಣ’ ಎಂದು ಟೀಕಿಸಿದ್ದಾರೆ. ‘ಚುನಾವಣೆ ವಿಜಯೋತ್ಸವದ ಸಂಭ್ರಮ ಸಾಕು. ಮಣಿಪುರ ಶಾಂತಿಗಾಗಿ ಕಾಯುತ್ತಿದೆ’ ಎಂದು ಟೀಕಿಸಿದ್ದಾರೆ.

ಬೀದಿಗೆ ಬಂದ ಆರ್‌ಎಸ್‌ಎಸ್-ಬಿಜೆಪಿ ಘರ್ಷಣೆ ಇನ್ನೂ ತೀವ್ರವಾಗುತ್ತದೆಯೇ ಅಥವಾ ಕಡಿಮೆಯಾಗುತ್ತದೆಯೇ? ಕಾಲವೇ ಉತ್ತರಿಸಬೇಕು.

ಲೇಖನ

ಡಿ.ಸಿ.ಪ್ರಕಾಶ್

2024ರ ಸಂಸತ್ ಚುನಾವಣೆಯಲ್ಲಿ ಬಿಜೆಪಿ ಏಕ ಬಹುಮತದೊಂದಿಗೆ ಸರ್ಕಾರ ರಚಿಸುವ ನಿರೀಕ್ಷೆ ಇತ್ತು. ಅಲ್ಲದೆ ಚುನಾವಣೋತ್ತರ ಸಮೀಕ್ಷೆ ಫಲಿತಾಂಶದಲ್ಲಿ ಬಿ.ಜೆ.ಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಲಿದೆ ಎಂದು ವರದಿಯಾಗಿತ್ತು. ಆದರೆ, ಸಮೀಕ್ಷೆಯ ಫಲಿತಾಂಶವನ್ನು ಸಂಪೂರ್ಣವಾಗಿ ಸುಳ್ಳಾಗಿಸಿ, ಬಿಜೆಪಿ 240 ಸ್ಥಾನಗಳನ್ನು ಮಾತ್ರ ಗೆದ್ದುಕೊಂಡಿತು.

ಬಿಜೆಪಿ, ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ ನೇತೃತ್ವದಲ್ಲಿ ಬಹುಮತ ಗಳಿಸಿದ್ದು, ಮತ್ತೆ ಸರ್ಕಾರ ರಚಿಸುವ ಕೆಲಸದಲ್ಲಿ ತೊಡಗಿದೆ. 2014 ಮತ್ತು 2019ರ ಸಂಸತ್ ಚುನಾವಣೆ ಫಲಿತಾಂಶಕ್ಕೆ ಹೋಲಿಸಿದರೆ ಪ್ರಸಕ್ತ ಚುನಾವಣೆಯಲ್ಲಿ ಬಿಜೆಪಿ ಕೆಲವೆಡೆ ಮಾತ್ರ ಗೆದ್ದಿದೆ. ಇದರಿಂದಾಗಿ ಮೈತ್ರಿ ಪಕ್ಷಗಳ ಬೆಂಬಲದೊಂದಿಗೆ ಬಿಜೆಪಿ ಮೂರನೇ ಬಾರಿಗೆ ಸರ್ಕಾರ ರಚಿಸಲಿದೆ.

ಈ ಹಿನ್ನೆಲೆಯಲ್ಲಿ, ನಡೆದಿರುವ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಲು ವಿಫಲವಾಗಿರುವುದರಿಂದ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗವುದನ್ನು ಆರ್‌ಎಸ್‌ಎಸ್ ಬಯಸುತ್ತಿಲ್ಲ ಎಂದು ಶಿವಸೇನೆಯ ಸಂಜಯ್ ರಾವತ್ ಹೇಳಿದ್ದಾರೆ. ಮತ್ತು ಮೋದಿ ಬದಲು ಮತ್ತೊಬ್ಬರನ್ನು ಪ್ರಧಾನಿಯನ್ನಾಗಿ ನೇಮಿಸುವ ಬಗ್ಗೆಯೂ ಸಮಾಲೋಚನೆ ನಡೆಸುತ್ತಿರುವುದಾಗಿ ತಿಳಿಸಿದರು.

ಭಾರತದ ಮುಂದಿನ ಪ್ರಧಾನಿಯಾಗಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಮಾಜಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಅವರ ಹೆಸರನ್ನು ಪರಿಶೀಲಿಸಲಾಯಿತು. ಆದರೆ, ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎನ್ನಲಾಗಿದೆ.

2024ರ ಸಂಸತ್ತಿನ ಚುನಾವಣಾ ಫಲಿತಾಂಶಗಳು ನರೇಂದ್ರ ಮೋದಿಯವರ ವಿರುದ್ಧವಾಗಿರುವುದರಿಂದ ನರೇಂದ್ರ ಮೋದಿ ಅವರು ಸ್ವಯಂಪ್ರೇರಿತರಾಗಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕಿತ್ತು. ಇದಕ್ಕೆ ವ್ಯತಿರಿಕ್ತವಾಗಿ, ಅವರು ಸರ್ಕಾರವನ್ನು ರಚಿಸಲು ಪ್ರಯತ್ನಿಸುತ್ತಿದ್ದಾರೆ. ಇದು ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಸಂಜಯ್ ರಾವತ್ ಹೇಳಿದ್ದಾರೆ.

ಮುಂದುವರಿದು ಮಾತನಾಡಿದ ಅವರು, ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗುವುದು ಆರ್‌ಎಸ್‌ಎಸ್‌ಗೆ ಇಷ್ಟವಿಲ್ಲದೆ, ಬೇರೊಬ್ಬ ವ್ಯಕ್ತಿಯನ್ನು ಪ್ರಧಾನಿಯನ್ನಾಗಿ ಮಾಡಲು ಪ್ರಯತ್ನಿಸಿದೆ. ಇದರ ಹೊರತಾಗಿಯೂ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವತ್ತ ಗಮನಹರಿಸಿದ್ದಾರೆ. ಎನ್‌ಡಿಎ ಭಾಗವಾಗಿರುವ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಈ ಹಿಂದೆ ಮೋದಿ ಮತ್ತು ಅಮಿತ್ ಶಾ ಅವರಿಂದ ಹೆಚ್ಚು ನೋವನ್ನು ಅನುಭವಿಸಿದ್ದಾರೆ. ಇದರಿಂದ ಯಾವಾಗ ಏನು ಬೇಕಾದರೂ ಆಗಬಹುದು ಎಂದು ಅವರು ಹೇಳಿದ್ದಾರೆ.

ಚುನಾವಣೆಯಲ್ಲಿ ಗೆದ್ದ ನಂತರ ಪ್ರತಿ ಪಕ್ಷಗಳು ತಮ್ಮ ಸಂಸದರನ್ನು ಕರೆಸಿ ಸಮಾಲೋಚನೆ ನಡೆಸುವುದು ವಾಡಿಕೆ. ಈ ಸಮಾಲೋಚನಾ ಸಭೆಯಲ್ಲಿ ಆ ಪಕ್ಷದ ಸಂಸದೀಯ ನಾಯಕರನ್ನು ಆಯ್ಕೆ ಮಾಡಲಾಗುತ್ತದೆ. ನಂತರ ಇತರ ವಿಷಯಗಳ ಬಗ್ಗೆಯೂ ಚರ್ಚೆ ನಡೆಯುತ್ತದೆ.

ಆದರೆ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ನರೇಂದ್ರ ಮೋದಿ ಅವರು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಸಮಾಲೋಚನಾ ಸಭೆಯನ್ನು ಕರೆದು, ತಮ್ಮನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ.

ಇದರ ಬೆನ್ನಲ್ಲೇ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ನೂತನ ಸಂಸತ್ ಸದಸ್ಯರ ಸಭೆ ದೆಹಲಿಯಲ್ಲಿ ನಡೆಯಿತು. ಈ ಸಭೆಯಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಲು ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್ ಬೆಂಬಲ ವ್ಯಕ್ತಪಡಿಸಿ ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿದರು.

ಇದರ ಬೆನ್ನಲ್ಲೇ ಮೋದಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾದರು. ಅಲ್ಲದೇ ದೇಶದ ಮುಂದಿನ ಪ್ರಧಾನಿಯಾಗಿ ನರೇಂದ್ರ ಮೋದಿಯವರನ್ನು ಪ್ರಸ್ತಾಪಿಸುವುದಾಗಿ ಮಾಜಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿದರು.

ತರುವಾಯ, ಅಮಿತ್ ಶಾ ಮತ್ತು ನಿತಿನ್ ಗಡ್ಕರಿ ಇಬ್ಬರೂ ಮೋದಿಯನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ನಿರ್ಧಾರವನ್ನು ಪ್ರಸ್ತಾಪಿಸಿದರು. ನಂತರ ಮೋದಿ ಪ್ರಧಾನಿಯಾಗಿ ಆಯ್ಕೆಯಾಗಿದ್ದನ್ನು ಅಧಿಕೃತವಾಗಿ ಘೋಷಿಸಲಾಯಿತು.

ಸಂಸತ್ ಚುನಾವಣೆಯ ಫಲಿತಾಂಶ ಪ್ರಕಟವಾದ ಮೂರು ದಿನಗಳಲ್ಲಿ ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಪುನರಾಯ್ಕೆಯಾಗಿದ್ದಾರೆ. ಈ ಬಾರಿ ಸಮ್ಮಿಶ್ರ ಸರ್ಕಾರ ರಚನೆಯಾದ ನಂತರ ಹೊಸ ಸರ್ಕಾರ ಎಷ್ಟು ದಿನ ಇರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಲೇಖನ

ಜಾಗತಿಕ ರೈತರು ಕ್ವಿಂಟಾಲ್ ಗೋಧಿಯನ್ನು 3,000 ರಿಂದ 4,000 ರೂ.ಗೆ ಮಾರಾಟ ಮಾಡುತ್ತಿರುವಾಗ, ಭಾರತೀಯ ರೈತರಿಗೆ ಸಿಗುವುದು ಕೇವಲ 2,400 ರಿಂದ 2,600 ರೂ. ಮಾತ್ರ!

“ರೈತರು ಬದುಕಬಾರದು” ಎಂಬುದಕ್ಕಾಗಿ ಭಾರತದಲ್ಲಿ ಒಬ್ಬ ವ್ಯಕ್ತಿ ದಣಿವರಿಯದೇ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರೆ, ಅವರು ಬೇರೆ ಯಾರೂ ಅಲ್ಲ; ಅವರೇ ನಮ್ಮ ‘ದೇವಮಾನವ’ ಭಾರತದ ಪ್ರಧಾನಿ ಮೋದಿ!

ಈ ಹಿಂದೆ, ಭಾರತದ ರೈತರ ಆದಾಯವನ್ನು ದ್ವಿಗುಣಗೊಳಿಸುತ್ತೇನೆ ಎಂದು ಹೇಳುತ್ತಲೇ ಗೋಧಿಯನ್ನು ಆಮದು ಮಾಡಿಕೊಳ್ಳಲು ಅವಕಾಶ ನೀಡಿದ ನಿರ್ದಯಿ ಮಗುವೇ ಈ ದೇವಮಾನವ?

ಒಂದು ಕ್ವಿಂಟಲ್ ಗೋಧಿಯ ಅಂತಾರಾಷ್ಟ್ರೀಯ ಬೆಲೆ ರೂ.3,000 ಕ್ಕಿಂತ ಕಡಿಮೆ ಇಲ್ಲ. ಇದು ಗರಿಷ್ಠ 4,000 ರೂ.ಗೆ ಮಾರಾಟವಾಗುತ್ತದೆ. ವಿಶ್ವದಾದ್ಯಂತ ರೈತರು ಕ್ವಿಂಟಲ್ ಗೋಧಿಯನ್ನು 4,000 ರೂ.ಗೆ ಮಾರಾಟ ಮಾಡುವ ಮೂಲಕ ಲಾಭ ಗಳಿಸುತ್ತಿದ್ದಾರೆ. ಆದರೆ ಭಾರತದ ರೈತರಿಗೆ ಸಿಗುವುದು ಕೇವಲ 2,400 ರಿಂದ 2,600 ರೂ. ಮಾತ್ರ. ಭಾರತ ಸರ್ಕಾರವು ಒದಗಿಸಿದ ಕನಿಷ್ಠ ಬೆಂಬಲ ಬೆಲೆ (Minimum Support Price) ಕೇವಲ 2,275 ರೂ. ಮಾತ್ರ.

ಜಾಗತಿಕವಾಗಿ ಗೋಧಿಯ ಬೆಲೆ ಗಗನಕ್ಕೇರುತ್ತಿರುವಾಗ, ರಫ್ತು ಮಾಡಿದರೆ, ಭಾರತೀಯ ರೈತರಿಗೆ ಸ್ವಯವಾಗಿಯೇ ದುಪ್ಪಟ್ಟು ಆದಾಯ ಸಿಗುತ್ತವೆ. ಆದರೆ, ಇದನ್ನು ‘ದೇವಮಾನವ’ ಸಹಿಸಿಕೊಳ್ಳುತ್ತಿಲ್ಲ. ಕಳೆದ ಮೂರು ವರ್ಷಗಳಿಂದ ಗೋಧಿ ರಫ್ತನ್ನು ನಿಷೇಧಿಸಲಾಗಿದೆ.

‘ಉತ್ತಮ ಬೆಲೆ ಸಿಕ್ಕರೆ ರೈತರು ನಮ್ಮ ಮಾತು ಕೇಳುವುದಿಲ್ಲ. ನಿರ್ದಿಷ್ಟವಾಗಿ ಹೇಳುವುದಾದರೆ, ಬಹಳಷ್ಟು ಗೋಧಿಯನ್ನು ಉತ್ಪಾದಿಸುವವರು ಉತ್ತರದ ರೈತರು. ನಾವು ಅವರನ್ನು ಸದಾ ಸಾಲದಲ್ಲಿಟ್ಟರೆ, ಅವರು ಪ್ರಧಾನಮಂತ್ರಿಗಳ ಆರ್ಥಿಕ ನೆರವು ಯೋಜನೆಯ ಹೆಸರಿನಲ್ಲಿ ನಾವು ನೀಡುವ 6000 ರೂಪಾಯಿಗಾಗಿ ನಮ್ಮ ಪಾದಗಳನ್ನು ಕಾಯುತ್ತಾರೆ’ ಎಂದು ಮೋದಿ ಭಾವಿಸಿರಬಹುದು?

ಈ ದೇವಮಾನವರ ಯೋಜನೆಗಳ ಹೊರತಾಗಿಯೂ, ಪ್ರಕೃತಿ ಈ ವರ್ಷ ರೈತರಿಗೆ ಸ್ವಲ್ಪ ಹೆಚ್ಚುವರಿ ಬೆಲೆ ಪಡೆಯಲು ಸಹಾಯ ಮಾಡಿದೆ. ಹೆಚ್ಚಿನ ಹಾನಿ ಇಲ್ಲದೆ ಬೆಳೆದಿದೆ. ಗೋಧಿ ಆಮದಿಗೆ ಉತ್ತೇಜನ ನೀಡದಿದ್ದರೆ ಭಾರತೀಯ ರೈತರಿಗೆ ಹೆಚ್ಚಿನ ಬೆಲೆ ಸಿಗಲಿದೆ. ಆದರೆ ಮೋದಿ ರಷ್ಯಾದಿಂದ ಐದು ಮಿಲಿಯನ್ ಟನ್ ಗೋಧಿ ಆಮದು ಮಾಡಿಕೊಳ್ಳಲು ಅನುಮತಿ ನೀಡಿದ್ದಾರೆ.

ಸರಿ, ಆಮದು ಮಾಡಿಕೊಂಡು ಹೇಗಾದರೂ ತೊಲಗಲಿ ಎಂದರೂ ಭಾರತದ ಗೋಧಿ ರೈತರು ವಿಶ್ವದ ಗೋಧಿ ರೈತರೊಂದಿಗೆ ಪೈಪೋಟಿ ನಡೆಸುತ್ತಾರೆ ಎಂದು ಬಯಸಿದರೆ, ಆಮದು ಸುಂಕ ಮುಕ್ತಕ್ಕೆ ಅವಕಾಶ ನೀಡುವ ಮೂಲಕ ಮೋದಿ ಭಾರತೀಯ ರೈತರ ಹೊಟ್ಟೆಗೆ ಹೊಡೆದಿದ್ದಾರೆ.

ವಿಶ್ವ ವ್ಯಾಪಾರ ಸಂಸ್ಥೆ (WTO) ನಿಬಂಧನೆಗಳ ಪ್ರಕಾರ, ಭಾರತವು ವಿದೇಶದಿಂದ ಆಮದು ಮಾಡಿಕೊಳ್ಳುವ ಗೋಧಿಗೆ 40% ಸುಂಕವನ್ನು ವಿಧಿಸಬಹುದು. ಆದರೆ ಉದ್ಯಮಿಗಳಿಗಾಗಿ ಅವತರಿಸಿರುವ ‘ದೇವಮಾನವ’ ಹೇಗೆ ತೆರಿಗೆ ವಿಧಿಸುತ್ತಾರೆ? ಬಿಸ್ಕತ್ತು ತಯಾರಕರು ಮತ್ತು ಗೋಧಿ ಹಿಟ್ಟಿನ ಗಿರಣಿ ಮಾಲೀಕರಂತಹ ಕಾರ್ಪೊರೇಟ್ ಕಂಪನಿಗಳಿಗೆ ಲಾಭದಾಯಕವಾಗಲು ಅವರು ಗೋಧಿಯನ್ನು ಸುಂಕ ರಹಿತ ಆಮದು ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ.

ಅಂತಹ ಸುಂಕವಿಲ್ಲದೆ ವಿದೇಶಿ ಗೋಧಿ ಭಾರತದ ಮಾರುಕಟ್ಟೆಗೆ ಬರುವುದಾದರೇ ಇಲ್ಲಿ ಗೋಧಿ ಬೆಲೆ ಕ್ವಿಂಟಲ್‌ಗೆ 2000 ರೂಪಾಯಿಗಿಂತ ಕಡಿಮೆಯಾದರೂ ಆಶ್ಚರ್ಯವಿಲ್ಲ. ಇದುವೇ ಈ ‘ದೇವಮಾನವ’ ರೈತನ ಆದಾಯವನ್ನು ದ್ವಿಗುಣಗೊಳಿಸುವ ಯೋಗ್ಯತೆ.

ರೈತರಿಂದ 32 ಮಿಲಿಯನ್ ಟನ್ ಗೋಧಿಯನ್ನು ಖರೀದಿಸುವ ಬದಲು ಭಾರತ ಸರ್ಕಾರವು ಕೇವಲ 26 ಮಿಲಿಯನ್ ಟನ್ ಗೋಧಿಯನ್ನು ಮಾತ್ರ ಖರೀದಿಸಿದೆ.

ಭಾರತವು ವಿಶ್ವದಲ್ಲೇ ಎರಡನೇ ಅತಿ ದೊಡ್ಡ ಗೋಧಿ ಉತ್ಪಾದಕ ರಾಷ್ಟ್ರವಾಗಿದೆ. ಇದು 2024-25ರ ವಾರ್ಷಿಕ ಗುರಿ 112 ಮಿಲಿಯನ್ ಟನ್‌ಗಳಲ್ಲಿ ಸ್ವಲ್ಪ ಇಳಿಕೆಯಾಗಿದೆ. ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನವು ಇಳುವರಿ ಮೇಲೆ ದೊಡ್ಡ ರೀತಿಯಲ್ಲಿ ಪರಿಣಾಮ ಬೀರುತ್ತದೆ ಎಂದು ಪರಿಸರ ತಜ್ಞರು ಹೇಳುತ್ತಾರೆ. ಇತಿಹಾಸದಲ್ಲಿ ಮೊದಲ ಬಾರಿಗೆ ನವದೆಹಲಿಯಲ್ಲಿ ತಾಪಮಾನ 52.9C ಗೆ ಏರಿದರೆ, ಭವಿಷ್ಯದಲ್ಲಿ ಭಾರತವು ಇನ್ನೂ ಕೆಟ್ಟ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.

ಇದೆಲ್ಲದರ ಬಗ್ಗೆ ಯಾವುದೇ ಆಲೋಚನೆಯಿಲ್ಲದೆ, ‘ದೇವಮಾನವ’ ಕನ್ಯಾಕುಮಾರಿ ವಿವೇಕಾನಂದ ಬಂಡೆಯ ಮೇಲೆ ಕುಳಿತು ಧ್ಯಾನ ಮಾಡುತ್ತಾರೆ. ಇದಕ್ಕೆ ಕಾಲವೇ ಉತ್ತರಿಸಬೇಕು.

ಅವತಾರ ಪುರುಷನಾದ ಶ್ರೀಕೃಷ್ಣನು ತಾಯಿಯ ಗರ್ಭದಲ್ಲಿ ಜನಿಸಿದವರು. ಮತ್ತೊಂದು ಅವತಾರ ಪುರುಷನಾದ ಭಗವಾನ್ ಶ್ರೀರಾಮನು ಕೂಡ ತಾಯಿಯ ಗರ್ಭದಲ್ಲಿ ಜನಿಸಿದವರು. ಆದರೆ ನಮ್ಮ ‘ದೇವಮಾನವ’ ಮೋದಿಜಿ ತನ್ನ ತಾಯಿಯ ಗರ್ಭದಿಂದ ಹುಟ್ಟಿರುವುದನ್ನು ಒಪ್ಪಿಕೊಳ್ಳಲು ನಿರಾಕರಿಸಿ ‘ನಾನು ಆಕಾಶದಿಂದ ಜಿಗಿದವನು’ ಎನ್ನುತ್ತಾರೆ.

ಹೀಗೆ ತಲೆ ಬುರುಡೆ ಒಣಗಿ ಹೋದವರಬಳಿ ಮಾತನಾಡಿ ಏನು ಪ್ರಯೋಜನ? ಜೈ ಭಾರತ್.

ಅಂಕಣಕಾರ: ದೂರನ್ ನಂಬಿ
ಮೂಲ: ವಿಕಟನ್.ಕಾಂ
ಕನ್ನಡಕ್ಕೆ: ಡಿ.ಸಿ.ಪ್ರಕಾಶ್

ಲೇಖನ

ಯಾವುದೇ ವಿಷಯವಾಗಿರಲಿ, ಅವುಗಳಲ್ಲಿ ಅತ್ಯಂತ ಅಪರೂಪದ ಒಂದು ವಿಶೇಷತೆ ಇರುತ್ತದೆ. ನಮ್ಮ ದೇಹದಲ್ಲಿ ಹರಿಯುವ ರಕ್ತಕ್ಕೆ ಸಂಬಂಧಿಸಿದ ಅಪರೂಪದ ಅಂಶವೊಂದು ಇಲ್ಲಿದೆ… ರಕ್ತದಲ್ಲಿ ಅದೇನು ಅಪುರೂಪ? ಇಲ್ಲಿದೆ ನೋಡೋಣ.

ರಕ್ತ
ಇದು ಮಾನವ ದೇಹದ ಚಲನೆಗೆ ದೇಹದಾದ್ಯಂತ ಹರಿಯುವ ಜೀವ ಮೂಲವಾಗಿದೆ. ರಕ್ತದ ಪ್ರಕಾರಗಳನ್ನು ಸಾಮಾನ್ಯವಾಗಿ A ಗುಂಪು, B ಗುಂಪು, O ಗುಂಪು, AB ಗುಂಪು ಮತ್ತು ಧನಾತ್ಮಕ (Positive), ಋಣಾತ್ಮಕ (Negative) ಎಂದು ಕರೆಯಲಾಗುತ್ತದೆ. ಇವೆಲ್ಲವನ್ನೂ ಮೀರಿ ಇನ್ನೊಂದು ರಕ್ತದ ಗುಂಪು ಇದೆ. ಇದರ ಬಗ್ಗೆ ಹಲವರಿಗೆ ತಿಳಿದಿರಲು ಸಾಧ್ಯವಿಲ್ಲ.

ಬಾಂಬೆ ಬ್ಲಡ್ ಗ್ರೂಪ್
ಈ ರಕ್ತದ ಗುಂಪಿನ ಹೆಸರು ‘BOMBAY BLOOD GROUP’ ವೈದ್ಯಕೀಯ ಜಗತ್ತಿನಲ್ಲಿ ಈ ಪ್ರಕಾರವನ್ನು ‘H’ ಗ್ರೂಫ್ ಎಂದು ಕರೆಯಲಾಗುತ್ತದೆ. ಈ ಬಾಂಬೆ ಗ್ರೂಪನ್ನು ಮೊದಲು ಬಾಂಬೆಯಲ್ಲಿ ಗುರುತಿಸಲಾಯಿತು, ಹಿಂದಿನ ಬಾಂಬೆಯನ್ನು ಇದೀಗ ಮುಂಬೈ ಎಂದು ಕರೆಯಲಾಗುತ್ತದೆ. ಅದಕ್ಕಾಗಿಯೇ ‘ಬಾಂಬೆ ಬ್ಲಡ್ ಗ್ರೂಪ್’ ಎಂಬ ಹೆಸರು ಬಂದಿತು.

1952ರಲ್ಲಿ ಡಾ.ಪೆಂಡೆ ಎಂಬುವವರು ಇದನ್ನು ಪತ್ತೆಹಚ್ಚಿದರು. ಭಾರತದಲ್ಲಿ 60,000 ಜನರಲ್ಲಿ ಒಬ್ಬರಿಗೆ ಮಾತ್ರ ಈ ರೀತಿಯ ರಕ್ತವಿರುತ್ತದೆ ಎಂದು ವೈದ್ಯರು ಹೇಳುತ್ತಾರೆ. ಅಷ್ಟರ ಮಟ್ಟಿಗೆ ಈ ರಕ್ತ ಅಪರೂಪವಾದದ್ದು. ಬಾಂಬೆ ಬ್ಲಡ್ ಗ್ರೂಪ್ ಗೆ ಸೇರಿದ ಜನರೇ ಯುನಿವರ್ಸಲ್ ಡೋನರ್ (UNIVERSAL DONOR).

ವಿಶೇಷವೇನು?
ಈ ರಕ್ತದ ಗುಂಪು ಹೊಂದಿರುವ ಜನರು, ಎಲ್ಲಾ ರೀತಿಯ ರಕ್ತ ಹೊಂದಿರುವವರಿಗೆ ರಕ್ತದಾನ ಮಾಡಬಹುದು. ಆದರೆ, ಬಾಂಬೆ ಬ್ಲಡ್ ಗ್ರೂಪಿನವರಿಗೆ ಅದೇ ಗ್ರೂಪ್ ರಕ್ತವೇ ಬೇಕು. ಬಾಂಬೆ ಬ್ಲಡ್ ಗ್ರೂಪ್ ಭಾರತದಲ್ಲಿ ಅಪರೂಪವಾಗಿರುವುದರಿಂದ, ಅದೇ ಗ್ರೂಪಿನ ಜನರಿಗೆ ಮಾತ್ರ ರಕ್ತದಾನ ಮಾಡುವ ಸ್ಥಿತಿ ಇದೆ.

ಇದು ಬಾಂಬೆ ರಕ್ತದ ಗುಂಪಿನ ವಿಶೇಷತೆಯೂ ಹೌದು. ಅದೇ ಸಂದರ್ಭದಲ್ಲಿ ಸಮಸ್ಯೆಯೂ ಆಗಿದೆ. ಬಾಂಬೆ ಬ್ಲಡ್ ಗ್ರೂಪ್ ನ ಪುರುಷ ಮತ್ತು ಮಹಿಳೆ ಮದುವೆಯಾದರೆ ಹುಟ್ಟುವ ಮಕ್ಕಳು ಆರೋಗ್ಯದಿಂದ ಇರುತ್ತಾರೆ. ದಂಪತಿಗಳಲ್ಲಿ ಒಬ್ಬರು ಬೇರೆ ಗುಂಪಿಗೆ ಸೇರಿದವರಾಗಿದ್ದರೆ ಹುಟ್ಟುವ ಮಗುವಿಗೆ ಆಸ್ತಮಾ ಬರುವ ಸಾಧ್ಯತೆ ಹೆಚ್ಚು ಎನ್ನುತ್ತಾರೆ ವೈದ್ಯರು.

ಲೇಖನ

ಡಿ.ಸಿ.ಪ್ರಕಾಶ್

ಮಡೆ ಸ್ನಾನ ಮಾಡಿ ದೇವರಿಗೆ ಹರಕೆ ಅರ್ಪಿಸುವುದರ ಮೇಲಿನ ನಿಷೇಧವನ್ನು ರದ್ದುಗೊಳಿಸಿರುವ ಚೆನ್ನೈ ಹೈಕೋರ್ಟ್ ಮಧುರೈ ಪೀಠದ ನ್ಯಾಯಾಧೀಶ ಜಿ.ಆರ್.ಸ್ವಾಮಿನಾಥನ್ ಅವರ ತೀರ್ಪು ಆಘಾತಕಾರಿಯಾಗಿದೆ. ‘ಸಮುದಾಯ ಔತಣ’ದಲ್ಲಿ ಪಾಲ್ಗೊಳ್ಳುವ ಭಕ್ತರು, ಬಿಟ್ಟುಹೋದ ಬಾಳೆ ಎಲೆಗಳ ಮೇಲೆ ಉರುಳು ಹಾಕುವುದರಿಂದ ಆಧ್ಯಾತ್ಮಿಕ ಲಾಭವಾಗುತ್ತದೆ ಎಂಬ ನಂಬಿಕೆಯು, ವ್ಯಕ್ತಿಯ ಆಧ್ಯಾತ್ಮಿಕ ಆಯ್ಕೆಯಾಗಿದೆ ಎಂದು ತೀರ್ಪು ಹೇಳಿದೆ.

ಭಾರತೀಯ ಸಂವಿಧಾನವು ಒಬ್ಬರ ಧಾರ್ಮಿಕ ನಂಬಿಕೆಯನ್ನು ಅನುಸರಿಸಲು ಅಥವಾ ಯಾವುದೇ ಧರ್ಮವನ್ನು ಅನುಸರಿಸದಿರಲು ಸಂಪೂರ್ಣ ಹಕ್ಕನ್ನು ನೀಡುತ್ತದೆ. ಅದನ್ನು ಸಂರಕ್ಷಿಸಬೇಕು ಎಂಬುದಕ್ಕೆ ಪರ್ಯಾಯ ಅಭಿಪ್ರಾಯವಿರಲಾರದು. ಆದರೆ ಎಲ್ಲವನ್ನೂ ಧಾರ್ಮಿಕ ನಂಬಿಕೆ, ಆಧ್ಯಾತ್ಮಿಕ ಭಾವನೆ ಎಂದು ಸಮರ್ಥಿಸಿ ಅದು ಅವರ ವೈಯಕ್ತಿಕ ಹಕ್ಕು ಎಂದು ಹೇಳಿಕೊಳ್ಳುವುದು ಸೂಕ್ತವಲ್ಲ.

ಕರ್ನಾಟಕದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಾಹ್ಮಣರು ಆಹಾರವನ್ನು ಸೇವಿಸಿದ ನಂತರ, ಭಕ್ತರು ಆ ಬಾಳೆ ಎಲೆಗಳ ಮೇಲೆ ಉರುಳುವ ಮಡೆ ಸ್ನಾನ ಪದ್ಧತಿ ಇತ್ತು. ಇದು ಅಸ್ಪೃಶ್ಯತೆ ಆಧಾರಿತ ಪ್ರಕರಣವಾಗಿದೆ ಎಂದು ಹೇಳಿ, ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ವಜಾಮಾಡಿತ್ತು. 2014ರಲ್ಲಿ, ಈ ತೀರ್ಪಿನ ವಿರುದ್ಧ ಕರ್ನಾಟಕ ಸರ್ಕಾರ ಮೇಲ್ಮನವಿ ಸಲ್ಲಿಸಿದಾಗ ಲಾಲಾರಸದ (ಎಂಜಲು) ಎಲೆಗಳ ಮೇಲೆ ಉರುಳಿ ಹರಕೆ ಅರ್ಪಿಸುವುದಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿತು.

2015ರಲ್ಲಿ, ತಮಿಳುನಾಡಿನಲ್ಲಿ ಇದೇ ವಿಷಯದ ಮೇಲೆ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ನ್ಯಾಯಾಧೀಶ ಮಣಿಕುಮಾರ್ ಸೇರಿದಂತೆ ದ್ವಿಸದಸ್ಯ ಪೀಠವು ಈ ಆಚರಣೆಯನ್ನು ನಿಷೇಧಿಸಿದೆ.

ಬಾಲ್ಯ ವಿವಾಹ, ಸತಿ ಪದ್ಧತಿ, ವಿಧವಾ ಪುನರ್ವಿವಾಹದ ನಿರಾಕರಣೆ, ದೇವದಾಸಿ ಪದ್ಧತಿಯಂತಹ ಪ್ರತಿಗಾಮಿ ಪದ್ಧತಿಗಳನ್ನು ತಮ್ಮ ಧಾರ್ಮಿಕ ನಂಬಿಕೆ ಎಂದು ಸಮರ್ಥಿಸಿಕೊಂಡಿದ್ದ ಈ ದೇಶದಲ್ಲಿ, ದೊಡ್ಡ ಪ್ರಮಾಣದಲ್ಲಿ ಸಮಾಜ ಸುಧಾರಣಾ ಚಳವಳಿಗಳ ಹೋರಾಟದಿಂದಾಗಿ ಪರಿಸ್ಥಿತಿಯು ಭಾಗಶಃ ಬದಲಾಗಿದೆ.

ಮನುಷ್ಯ ಮನುಷ್ಯನನ್ನು ಅವಮಾನಿಸುವ ಅಸ್ಪೃಶ್ಯತೆಯನ್ನು ಸಮರ್ಥಿಸಿಕೊಳ್ಳಲು, ಧಾರ್ಮಿಕ ಪುರಾವೆಗಳನ್ನು ತರುವ ದಡ್ಡ ಶಿಖಾಮಣಿಗಳು ಇಂದಿಗೂ ನಮ್ಮಲ್ಲಿ ಇದ್ದಾರೆ. ನ್ಯಾಯಾಂಗದ ತೀರ್ಪುಗಳು ಸಮಾಜವನ್ನು ಮುನ್ನಡೆಸಬೇಕೇ ಹೊರತು ಹಿಂದಕ್ಕೆ ಎಳೆಯಬಾರದು.

ಸುಪ್ರೀಂ ಕೋರ್ಟ್ ನಿಷೇಧ ಹಾಗೂ ಹೈಕೋರ್ಟ್ ದ್ವಿಸದಸ್ಯ ಪೀಠದ ಹಿಂದಿನ ಆದೇಶಗಳಿಗೆ ವ್ಯತಿರಿಕ್ತವಾಗಿ ಹೈಕೋರ್ಟ್ನ ಮಧುರೈ ಶಾಖೆಯ ಏಕ ನ್ಯಾಯಾಧೀಶರು ನೀಡಿರುವ ತೀರ್ಪು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಈ ತೀರ್ಪಿನ ವಿರುದ್ಧ ತಮಿಳುನಾಡು ಸರ್ಕಾರ ಕೂಡಲೇ ಮೇಲ್ಮನವಿ ಸಲ್ಲಿಸಬೇಕು.

ಲೇಖನ

ಡಿ.ಸಿ.ಪ್ರಕಾಶ್

ಚುನಾವಣಾ ಆಯೋಗದ ಹೊಸ ಶೇಕಡಾವಾರು ಲೆಕ್ಕಾಚಾರದ ಪ್ರಕಾರ, ಮತದಾರರ ಸಂಖ್ಯೆ ಇದ್ದಕ್ಕಿದ್ದಂತೆ ಒಂದು ಕೋಟಿಯಷ್ಟು ಹೆಚ್ಚಾಗಿದೆ.!

ದೇಶಾದ್ಯಂತ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿದೆ. ಇದರಲ್ಲಿ 4 ಹಂತದ ಚುನಾವಣೆ ಮುಗಿದಿದೆ. ಹಲವು ರಾಜ್ಯಗಳಲ್ಲಿ ಚುನಾವಣೆ ವೇಳೆ ನಾನಾ ಅಕ್ರಮಗಳು ನಡೆದಿರುವ ಆರೋಪ ಕೇಳಿಬಂದಿತ್ತು. ಏತನ್ಮಧ್ಯೆ, ಚುನಾವಣಾ ಆಯೋಗದ ಕಾರ್ಯವೈಖರಿಯಲ್ಲಿ ವಿಶ್ವಾಸಾರ್ಹತೆಯ ಕೊರತೆಯಿದೆ ಎಂದು ಟೀಕಿಸಲಾಗುತ್ತಿದೆ.

ಅದರಲ್ಲೂ ಚುನಾವಣೆ ಘೋಷಣೆಯಾದಾಗಿನಿಂದಲೂ ಕೇವಲ ಇಂಡಿಯಾ ಮೈತ್ರಿಕೂಟದ ನಾಯಕರು ಹಾಗೂ ಅಭ್ಯರ್ಥಿಗಳನ್ನೇ ಗುರಿಯಾಗಿಸಿಕೊಂಡು ಅಡ್ಡಿಪಡಿಸುವ ರೀತಿಯಲ್ಲಿ ಚುನಾವಣಾ ಆಯೋಗ ವರ್ತಿಸುತ್ತಿದೆ ಎನ್ನಲಾಗಿತ್ತು. ಇದಲ್ಲದೇ ಮತದಾನದ ವಿವರ ಪ್ರಕಟಿಸುವಲ್ಲಿ ನಾನಾ ಅಕ್ರಮಗಳು ನಡೆದಿವೆ ಎಂದು ಹೇಳಲಾಗುತ್ತಿದೆ.

ಮೊದಲ ಹಂತ ಹಾಗೂ ಎರಡನೇ ಹಂತದ ಮತದಾನ ಮುಗಿದಮೇಲೆ, ಚುನಾವಣಾ ಆಯೋಗವು ತಕ್ಷಣದ ಮತದಾನದ ಶೇಕಡಾವಾರು ಪ್ರಮಾಣವನ್ನು ಬಿಡುಗಡೆ ಮಾಡದೆ ವಿಳಂಬ ಮಾಡಿ, ಮೊದಲು ಒಂದುರೀತಿಯ ಅಂಕಿಅಂಶವನ್ನು, ನಂತರ ಮತ್ತೊಂದು ಅಂಕಿಅಂಶವನ್ನು ಬಿಡುಗಡೆ ಮಾಡಿ ಗೊಂದಲವನ್ನು ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮತದಾನದ ವಿವರ ಬಿಡುಗಡೆಗೆ ವಿಳಂಬ ಮಾಡಿರುವುದು ಎಲ್ಲರಲ್ಲೂ ಅನುಮಾನ ಮೂಡಿಸಿದೆ.

ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಚುನಾವಣಾ ಮತದಾನದ ಶೇಕಡಾವಾರು ಮತ್ತು ಮತದಾರರ ಸಂಖ್ಯೆಯನ್ನು ತಕ್ಷಣವೇ ಪ್ರಕಟಿಸಬೇಕೆಂದು ಒತ್ತಾಯಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದಾರೆ. ಇದಲ್ಲದೆ, ಪ್ರಕರಣವನ್ನು ತುರ್ತಾಗಿ ವಿಚಾರಿಸುವಂತೆ ಮನವಿ ಮಾಡಿದ ನಂತರ, ಚುನಾವಣಾ ಆಯೋಗವು ತನ್ನ ಅಭಿಪ್ರಾಯವನ್ನು ತಕ್ಷಣವೇ ತಿಳಿಸಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಈ ವೇಳೆ ಚುನಾವಣಾ ಆಯೋಗ ಇತ್ತೀಚೆಗೆ ಬಿಡುಗಡೆ ಮಾಡಿರುವ ಹೊಸ ಶೇಕಡಾವಾರು ಲೆಕ್ಕಾಚಾರದ ಪ್ರಕಾರ ಮತದಾನ ಮಾಡಿದವರ ಸಂಖ್ಯೆ ಹಠಾತ್ತನೆ ಒಂದು ಕೋಟಿ ಏರಿಕೆಯಾಗಿದೆ. ನಾಲ್ಕು ಹಂತದ ಮತದಾನದಲ್ಲಿ ಚುನಾವಣಾ ಆಯೋಗವು ಆರಂಭದಲ್ಲಿ 65.4% ಮತದಾನವಾಗಿದೆ ಎಂದು ವರದಿ ಮಾಡಿದೆ. ನಂತರ ಮೊನ್ನೆ ಬಿಡುಗಡೆ ಮಾಡಿರುವ ಹೊಸ ವರದಿ ಪ್ರಕಾರ ಶೇ.66.9ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಈ ಲೆಕ್ಕಗಳ ಪ್ರಕಾರ ಒಂದು ಕೋಟಿ ಮತಗಳು (1.07 ಕೋಟಿ) ಹೆಚ್ಚಿರುವುದು ಬೆಳಕಿಗೆ ಬಂದಿದೆ.

ಅಂದರೆ ಪ್ರತಿ ಕ್ಷೇತ್ರಕ್ಕೆ ಸರಾಸರಿ 28,000 ಮತಗಳ ಹೆಚ್ಚಳವಾಗಿದೆ. ಈ ಕುರಿತು ವಿಶ್ಲೇಷಣೆ ನಡೆಸಿದಾಗ ಮೊದಲ ಹಂತದಲ್ಲಿ 18 ಲಕ್ಷ, ಎರಡನೇ ಹಂತದಲ್ಲಿ 32 ಲಕ್ಷ, ಮೂರನೇ ಹಂತದಲ್ಲಿ 22 ಲಕ್ಷ ಹಾಗೂ ನಾಲ್ಕನೇ ಹಂತದಲ್ಲಿ 34 ಲಕ್ಷ ಮತಗಳು ಹೆಚ್ಚಳವಾಗಿದೆ ಎಂದು ತಿಳಿದುಬಂದಿದೆ.

ಅಸ್ಸಾಂ ನಲ್ಲಿ ಪ್ರತಿ ಕ್ಷೇತ್ರಕ್ಕೆ ಗರಿಷ್ಠ ಸರಾಸರಿ 73,000 ಮತಗಳು ಹೆಚ್ಚಳವಾಗಿದೆ. ಆಂಧ್ರಪ್ರದೇಶದಲ್ಲಿ ಪ್ರತಿ ಕ್ಷೇತ್ರಕ್ಕೆ 69,000 ಮತಗಳು ಹೆಚ್ಚಿವೆ. ಕೇರಳದಲ್ಲಿ ಪ್ರತಿ ಕ್ಷೇತ್ರಕ್ಕೆ 57 ಸಾವಿರ, ಕರ್ನಾಟಕದಲ್ಲಿ 51 ಸಾವಿರ ಮತ್ತು ಮಹಾರಾಷ್ಟ್ರದಲ್ಲಿ 48 ಸಾವಿರ ಮತಗಳು ಪ್ರತಿ ಕ್ಷೇತ್ರದಲ್ಲೂ ಸರಾಸರಿ ಏರಿಕೆಯಾಗಿದೆ.

ಮತದಾನ ಮುಗಿದ ಕೂಡಲೇ ಚಲಾವಣೆಯಾದ ಮತಗಳ ಸಂಖ್ಯೆಯನ್ನು ಪ್ರಕಟಿಸಬೇಕು ಎಂದು ರಾಜಕೀಯ ಪಕ್ಷಗಳು ಮತ್ತು ಸಾಮಾಜಿಕ ಸಂಘಟನೆಗಳು ಒತ್ತಾಯಿಸುತ್ತಲೇ ಇವೆ. ಆದರೆ ಮತದಾನ ಮಾಡಿದವರ ಸಂಖ್ಯೆಯನ್ನು ಬಹಿರಂಗಪಡಿಸಲು ಚುನಾವಣಾ ಆಯೋಗ ನಿರಾಕರಿಸುತ್ತಿದೆ. ಈ ಪರಿಸ್ಥಿತಿಯಲ್ಲಿ ನಾಲ್ಕು ಹಂತದ ಚುನಾವಣೆಯ ನಂತರ ಮತದಾನದ ಪ್ರಮಾಣ ಹೆಚ್ಚಾಗಿರುವುದು ನಾನಾ ಅನುಮಾನಗಳಿಗೆ ಕಾರಣವಾಗಿದೆ ಎಂದು ರಾಜಕೀಯ ಪಕ್ಷಗಳು ಹೇಳುತ್ತಿವೆ. ಇದರಲ್ಲಿ ಮೋದಿ ಸರ್ಕಾರದ ಷಡ್ಯಂತ್ರವೇನು? ಎಂದು ಇಂಡಿಯಾ ಮೈತ್ರಿಕೂಟದ ನಾಯಕರು ಪ್ರಶ್ನೆ ಎತ್ತಿದ್ದಾರೆ.

SOURCE: kalaignarseithigal.com