ಶಿಕ್ಷಣ Archives » Dynamic Leader
October 18, 2024
Home Archive by category ಶಿಕ್ಷಣ

ಶಿಕ್ಷಣ

ಶಿಕ್ಷಣ

ಇನ್ನು ಮುಂದೆ ವೈದ್ಯಕೀಯ ಸಂಸ್ಥೆಗಳಲ್ಲಿ ಪದವಿ ಪ್ರದಾನ ಸಮಾರಂಭದಲ್ಲಿ ಕಪ್ಪು ಬಟ್ಟೆ ಧರಿಸಬಾರದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ನವದೆಹಲಿ: ಕಲೆ, ವಿಜ್ಞಾನ, ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಪದವಿ ಪ್ರದಾನ ಸಮಾರಂಭಕ್ಕೆ ವಿದ್ಯಾರ್ಥಿಗಳು ಕಪ್ಪು ಗೌನ್ ಮತ್ತು ಕಪ್ಪು ಟೋಪಿ ಧರಿಸುವುದು ವಾಡಿಕೆ.

ಈ ಹಿನ್ನೆಲೆಯಲ್ಲಿ, ಕೇಂದ್ರ ಆರೋಗ್ಯ ಸಚಿವಾಲಯವು ತನ್ನ ನಿಯಂತ್ರಣದಲ್ಲಿರುವ ಎಲ್ಲಾ ವೈದ್ಯಕೀಯ ಕಾಲೇಜುಗಳು ಮತ್ತು ವೈದ್ಯಕೀಯ ಶಿಕ್ಷಣ ಸಂಸ್ಥೆಗಳಿಗೆ ಇನ್ನು ಮುಂದೆ ಪದವಿ ಸಮಾರಂಭದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಕಪ್ಪು ಬಟ್ಟೆ ಧರಿಸುವ ಅಗತ್ಯವಿಲ್ಲ ಎಂದು ಆದೇಶ ಹೊರಡಿಸಿದೆ.

ಪದವಿ ಪ್ರದಾನ ಸಮಾರಂಭದಲ್ಲಿ ಕಪ್ಪು ಬಟ್ಟೆ ಧರಿಸುವುದು ಐರೋಪ್ಯ ರಾಷ್ಟ್ರಗಳಲ್ಲಿ ಆರಂಭವಾದ ಸಂಸ್ಕೃತಿಯಾಗಿದ್ದು, ಬ್ರಿಟಿಷರು ತಮ್ಮ ವಸಾಹತುಶಾಹಿ ರಾಷ್ಟ್ರಗಳಲ್ಲಿ ಈ ಪದ್ಧತಿಯನ್ನು ಜಾರಿಗೆ ತಂದಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಆದ್ದರಿಂದ, ಈ ವಸಾಹತು ಪದ್ಧತಿಯನ್ನು ಬದಲಾಯಿಸಬೇಕು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇನ್ನು ಮುಂದೆ ಪದವಿ ಪ್ರದಾನ ಸಮಾರಂಭದಲ್ಲಿ ಕಪ್ಪುಬಣ್ಣದ ಬದಲು ಸಾಂಪ್ರದಾಯಿಕ ಭಾರತೀಯ ಬಟ್ಟೆಗಳನ್ನು ಧರಿಸಬಹುದೆಂದು ಹಾಗೂ ವೈದ್ಯಕೀಯ ಸಂಸ್ಥೆಗಳು ನೆಲೆಗೊಂಡಿರುವ ರಾಜ್ಯದ ಸಂಪ್ರದಾಯದ ಪ್ರಕಾರ, ಪದವಿ ಸಮಾರಂಭದ ಉಡುಪನ್ನು ನಿರ್ಧರಿಸಿಕೊಳ್ಳಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಉದ್ಯೋಗ ದೇಶ ಶಿಕ್ಷಣ

ಚೆನ್ನೈ: ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯವನ್ನು ದುರ್ಬಲಗೊಳಿಸುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ. ಅಲ್ಲದೇ ಸರ್ಕಾರದ ಆಡಳಿತವನ್ನು ಆರ್‌ಎಸ್‌ಎಸ್‌ ಅಧೀನಕ್ಕೆ ನೀಡವ ಬಿಜೆಪಿ ಸರ್ಕಾರದ ಷಡ್ಯಂತ್ರವನ್ನು ವಿಫಲಗೊಳಿಸಬೇಕು” ಎಂದು ಎಂಡಿಎಂಕೆ ಪ್ರಧಾನ ಕಾರ್ಯದರ್ಶಿ ವೈಕೋ ಹೇಳಿದ್ದಾರೆ.

ಈ ಕುರಿತು, ಅವರು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, “ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ, ಸಾಮಾಜಿಕ ನ್ಯಾಯವನ್ನು ದುರ್ಬಲಗೊಳಿಸುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ. ಸರ್ಕಾರಿ ಆಡಳಿತದಲ್ಲಿ ಆರ್‌ಎಸ್‌ಎಸ್‌ ಹಿನ್ನೆಲೆಯಿಂದ ಬಂದ ಖಾಸಗಿ ಕಂಪನಿಗಳ ಉನ್ನತ ಅಧಿಕಾರಿಗಳನ್ನು ಸರ್ಕಾರಿ ಕಾರ್ಯದರ್ಶಿಗಳಾಗಿ, ಮತ್ತು ಉನ್ನತ ಅಧಿಕಾರಿಗಳಾಗಿ ನೇಮಕ ಮಾಡಿಕೊಳ್ಳುವ ಯೋಜನೆಯನ್ನು ಜಾರಿಗೊಳಿಸುತ್ತಿದೆ.

ಖಾಸಗಿ ವಲಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳನ್ನು (CEO) ನೇರವಾಗಿ ಐಎಎಸ್ ಅಧಿಕಾರಿಗಳಾಗಿ ನೇಮಿಸಿಕೊಳ್ಳುವ ಯೋಜನೆಯನ್ನು 2018ರಲ್ಲಿ ಪರಿಚಯಿಸಲಾಯಿತು. ಈ ಯೋಜನೆಯಲ್ಲಿ ಇದುವರೆಗೆ 63 ಜನರನ್ನು ನೇಮಿಸಲಾಗಿದೆ. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಇತ್ತೀಚೆಗೆ ಇದೇ ಯೋಜನೆಯಡಿಯಲ್ಲಿ ಇನ್ನೂ 45 ಜನರನ್ನು ನೇಮಿಸಿಕೊಳ್ಳಲು ಜಾಹೀರಾತನ್ನು ಬಿಡುಗಡೆ ಮಾಡಿದೆ.

ಈ ಯೋಜನೆಯು ಕಾನೂನು ಉಲ್ಲಂಘನೆ ಮಾತ್ರವಲ್ಲ, ಸಂವಿಧಾನದ ಮೇಲಿನ ಕ್ರೂರ ದಾಳಿಯೂ ಆಗಿದೆ. ಈ ಮೂಲಕ ಸರ್ಕಾರದ ಆಡಳಿತವನ್ನು ಸಂಪೂರ್ಣವಾಗಿ ಆರ್‌ಎಸ್‌ಎಸ್‌ ಅಧೀನಕ್ಕೆ ಕೊಡಲು ಸಂಚು ರೂಪಿಸುತ್ತಿರುವುದು ಅತ್ಯಂತ ಖಂಡನೀಯವಾದದ್ದು. ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಲ್ಲಿನ ಪ್ರಮುಖ ಹುದ್ದೆಗಳಿಗೆ ‘ಲ್ಯಾಟರಲ್ ಎಂಟ್ರಿ’ ಮೂಲಕ ಮಾಡುತ್ತಿರುವ ನೇಮಕಾತಿಯಿಂದ SC, ST, OBC ಪಂಗಡದ ಮೀಸಲಾತಿಯನ್ನು ಕೇಂದ್ರ ಸರ್ಕಾರ ಬಹಿರಂಗವಾಗಿ ಕಿತ್ತುಕೊಳ್ಳುತ್ತಿದೆ.

ದೇಶದ ಅತ್ಯುನ್ನತ ಅಧಿಕಾರ ಸೇರಿದಂತೆ ಎಲ್ಲ ಉನ್ನತ ಹುದ್ದೆಗಳಲ್ಲಿ ಪರಿಶಿಷ್ಟ ವರ್ಗದವರಿಗೆ ಸೂಕ್ತ ಪ್ರಾತಿನಿಧ್ಯ ನೀಡುತ್ತಿಲ್ಲ ಎಂದು ಹೇಳುತ್ತಲೇ ಬಂದಿದ್ದೇನೆ. ಇದನ್ನು ಸುಧಾರಿಸುವ ಬದಲು, ‘ಲ್ಯಾಟರಲ್ ಎಂಟ್ರಿ’ ಮೂಲಕ ಪರಿಶಿಷ್ಟ ವರ್ಗದವರನ್ನು ಉನ್ನತ ಸ್ಥಾನಗಳಿಂದ ಇನ್ನಷ್ಟು ದೂರ ತಳ್ಳಲಾಗುತ್ತಿದೆ.

ಈ ಕಾರ್ಯವು UPSC ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಪ್ರತಿಭಾವಂತ ಯುವಕರ ಹಕ್ಕುಗಳನ್ನು ಕಿತ್ತುಕೊಳ್ಳುವ ಕಾರ್ಯವಾಗಿದೆ. ಮತ್ತು ‘ಇದು ತುಳಿತಕ್ಕೊಳಗಾದವರ ಸಾಮಾಜಿಕ ನ್ಯಾಯದ ಮೇಲೆ ಕೇಂದ್ರ ಸರ್ಕಾರದ ದಾಳಿಯಾಗಿದೆ’ ಎಂದು ಕಾಂಗ್ರೆಸ್ ಪಕ್ಷದ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿರುವುದು ಗಮನಿಸಬೇಕಾದ ಸಂಗತಿ.

“ಇಂಡಿಯಾ ಮೈತ್ರಿಕೂಟ”ದ ಪಕ್ಷಗಳು ಮತ್ತು ಪ್ರಜಾಸತ್ತಾತ್ಮಕ ಶಕ್ತಿಗಳು, ಒಗ್ಗಟ್ಟಿನಿಂದ ಹೋರಾಡುವ ಮೂಲಕ, ಸರ್ಕಾರದ ಆಡಳಿತವನ್ನು ಆರ್‌ಎಸ್‌ಎಸ್‌ ಅಧೀನಕ್ಕೆ ನೀಡಲು ಮುಂದಾಗುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ಷಡ್ಯಂತ್ರವನ್ನು ವಿಫಲಗೊಳಿಸಬೇಕು” ಎಂದು ಹೇಳಿದ್ದಾರೆ.

ರಾಜ್ಯ ಶಿಕ್ಷಣ

ಭಾಗ:2

ಕಾಂ.ನವೀನ್ ಸೂರಿಂಜೆ ಅವರೇ, ನೀವು ಅಥವಾ ಈಗಿನ ‘ಕನ್ನಡ ಅಭಿವೃದ್ಧಿ ಪ್ರಾಧಿಕಾರದ – ಮದರಸಗಳಲ್ಲಿ ಕನ್ನಡಕಲಿಕೆ’  ನಿಲುವನ್ನು ಒಪ್ಪದಿರುವ ಎಡಪಂತಿಯ ಅಥವಾ ಜಾತ್ಯತೀತ ಕಾಂಗ್ರೆಸ್ಸಿಗರ ಗಮನಕ್ಕೆ ಈ ಒಂದು ಪ್ರತಿಕ್ರಿಯೆ!

ನವೀನ್ ಸೂರಿಂಜೆಯ ಅಭಿಪ್ರಾಯ: ಮದರಸಾದಲ್ಲಿ ‘ಕನ್ನಡ ಕಲಿಕೆ’ ಎಂಬ ಸರ್ಕಾರಿ ಕಾರ್ಯಕ್ರಮ ಯೋಜನೆಯನ್ನು ಕನ್ನಡ ಅಭಿವೃದ್ದಿ ಪ್ರಾಧಿಕಾರ ಏಕೆ ಕೈಬಿಟ್ಟಿತ್ತು ಎಂಬುದನ್ನು ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆಯವರು ಸ್ಪಷ್ಟವಾಗಿ ಹೇಳಬೇಕಿತ್ತು.

ಖಾಸಿಂ ಸಾಬ್ ಅವರ ಪ್ರತಿಕ್ರಿಯೆ: ಕೈ ಬಿಟ್ಟಿದ್ದಕ್ಕೆ ಕಾರಣ ಹಾಳಾಗಿ ಹೋಗಲಿ. ಮದರಸಾದಲ್ಲಿ ‘ಕನ್ನಡ ಕಲಿಕೆ’ ಎಂಬ ಸರ್ಕಾರಿ ಕಾರ್ಯಕ್ರಮ ಯೋಜನೆಯನ್ನು ಕನ್ನಡ ಅಭಿವೃದ್ದಿ ಪ್ರಾಧಿಕಾರ ಯಾಕೆ ಕೈಗೆತ್ತಿಕೊಂಡಿತು. ಈ ಕಾನ್ಸೆಪ್ಟ್, ಪ್ಲಾನ್ ಯೋಜನೆ ಪ್ರಾಧಿಕಾರಕ್ಕೆ ಬಂದಿದ್ದಾದರು ಯಾವಾಗ? ಹೇಗೆ? ಯಾರು ಈ ಪ್ರಾಧಿಕಾರಕ್ಕೆ ಮನವಿ ಮಾಡಿದ್ದರು. ಅಲ್ಲದೆ, ಈ ಯೋಜನೆಯನ್ನು ಕೈಬಿಡುವ ಮೊದಲು ಇದರ ಕುರಿತು ಸೌಜನ್ಯಕ್ಕಾದರೂ ಒಂದಷ್ಟು ಮುಸ್ಲಿಂ ಸಮುದಾಯದ ಪ್ರತಿನಿದಿಗಳ ಜೊತೆ ಚರ್ಚೆ, ಸಂವಾದ ನಡೆಸಬಹುಗಾಗಿತ್ತು. ಇದನ್ನು ಪ್ರಾಧಿಕಾರ ಮಾಡಲಿಲ್ಲ. ಇದು ತಪ್ಪಲ್ಲವೇ?

ನಿಮ್ಮ ಅಭಿಪ್ರಾಯ: “ವಿರೋಧ ಪ್ರಕಟವಾದ್ದರಿಂದ ಆ ವಿಷಯವನ್ನು ಕೈ ಬಿಡಲಾಗಿದೆ.”

ನಮ್ಮ ಪ್ರತಿಕ್ರಿಯೆ: ಇಂತಹ ಆರ್ಥ ಪೂರ್ಣ, ಮುಸ್ಲಿಂ ಸಮುದಾಯಕ್ಕೆ ಕನಿಷ್ಠ ಈ ಒಂದು ಕ್ಷೇತ್ರದಲ್ಲಾದರೂ ನ್ಯಾಯ, ಅವಕಾಶ ಸಿಗಬಹುದಾದ ಈ  ಯೋಜನೆಯನ್ನು ಖಂಡಿತವಾಗಿಯೂ ‘ಸಾಮಾಜಿಕ ನ್ಯಾಯ’ ಬಯಸುವ ಮುಸ್ಲಿಮರು ವಿರೋಧಿಸುತ್ತಿರಲಿಲ್ಲ. ಅಂದಹಾಗೆ ನಿಜವಾಗಿಯೂ ಇದಕ್ಕೆ ವಿರೋಧ ಪ್ರಕಟವಾಯಿತ? ಇದನ್ನು ವಿರೋಧಿಸಿದ ಒಂದಷ್ಟು ಮುಸ್ಲಿಂ ಸಂಘ / ಸಂಸ್ಥೆ / ಜಮಾಮ್ / ಗುಂಪು/ ಬರಹಗಾರರ / ಬುದ್ಧಿಜೀವಿಗಳ ಹೆಸರುಗಳನ್ನು ಹೇಳಿ? ಏಕೆಂದರೆ, ನಾನು ಸಹ ಒಬ್ಬ ಕರ್ನಾಟಕದ ಮುಸ್ಲಿಂ ಸೋಶಿಯಲ್ ಆಕ್ಟಿವಿಸ್ಟ್, ನಾನು ವಿರೋಧ ಮಾಡಲಿಲ್ಲ. ನನ್ನಂತಹ ನೂರಾರು ಕನ್ನಡಿಗ ಮುಸ್ಲಿಂ ಸುಮುದಾಯ ಪ್ರತಿನಿಧಿಗಳು ಈ ಪ್ರಾಧಿಕಾರದ ನಿಲುವಿನ ಪರವಾಗಿದ್ದೆವು. ಕೊನೆಗೂ ಇಂತಹ ಒಂದು ಮುಸ್ಲಿಮರ ಸಾಮಾಜಿಕ ನ್ಯಾಯದ ಸಣ್ಣ ಮಟ್ಟದ ಆಪರ್ಚೂನಿಟಿಯನ್ನು ಪ್ರಾಧಿಕಾರ ಮಿಸ್ ಮಾಡಿದೆ.

ನಿಮ್ಮ ಅಭಿಪ್ರಾಯ: “ಇದು ಅತಿಯಾಯ್ತು. ಕನ್ನಡ ಕಲಿಯುವುದಕ್ಕೂ ಮುಸ್ಲೀಮರ ವಿರೋಧವೇ?” ಎಂಬ ಪ್ರಶ್ನೆ / ಹೊಸ ಆರೋಪವನ್ನು ಮುಸ್ಲಿಮರು ಎದುರಿಸಬೇಕಾಗುತ್ತದೆ.

ನಮ್ಮ ಪ್ರತಿಕ್ರಿಯೆ: ಇದು ಒಂದು ಭೂತ. ಇಂತಹ ನೂರಾರು ಭೂತ, ಬೊಂಬೆಗಳನ್ನು ಕರ್ನಾಟಕದ ಜಾತ್ಯತೀತ / ಜನಪರ / ಪ್ರಗತಿಪರ / ಕ್ರಾಂತಿಕಾರಿ ಸಂಘಟನೆಗಳು ಮುಸ್ಲಿಮರಿಗೆ ನೀಡಿವೆ. ಇಲ್ಲೂ ಕೂಡು ಅದೇ ಮತ್ತೆ ಪರಿವರ್ತನೆಯಾಗಿದೆ. ಇಂತಹವುಗಳು ಬೇಡ. ಇಂತಹ ನಾಡಪರ ಯೋಜನೆಗಳಿಗೂ “ಮುಸ್ಲಿಮರ ವಿರೋಧವೇ?” ಅನ್ನುವ ಕೋಮುವಾದಿಗಳ ಪ್ರಶ್ನೆಗೆ ನಿಮ್ಮ ಈ ಗುಮಾನಿ ಸರಿಯಾಗಿದೆ. ಇದರ ನಡುವೆ ಒಂದಷ್ಟು ತಾಳ್ಮೆಯಿಂದ ಜಾತ್ಯತೀತ ಮನಸ್ಥರು ಒಂದನ್ನು ಯೋಚಿಸಬೇಕಿತ್ತು. ಮುಸ್ಲಿಮರ ಸ್ವಂತ ಅಭಿಪ್ರಾಯಗಳನ್ನು ಪಡೆಯದೆ ಇದರ ಸಾದಕ – ಬಾದಕಗಳ ನಿರ್ಣಯ, ಅಂಗಿಕಾರ, ತಿರಸ್ಕಾರಗಳನ್ನು ಮಾಡುವುದು ‘ಆರೋಗ್ಯಕರ ಸಮಾಜದ ಬುದ್ದಿಜೀವಿ’ಗಳ ಲಕ್ಷಣವಲ್ಲ. ಜೊತೆಗೆ, ಇಂತಹ ‘ಹೊಸ ಆರೋಪ’ಗಳು ಅಥವಾ ‘ಹಳೆಯ ಆರೋಪ’ಗಳು ಕರ್ನಾಟಕದ ಮುಸ್ಲಿಮರಿಗೆ ಹೊಸದಲ್ಲ. ಇಂತಹ ಕಲ್ಪಿತ ವಿರೋಧಿ – ಶತೃತ್ವಗಳು ಹೊರತಾಗಿಯೂ ನಾಡಿನ ಮುಸ್ಲಿಮರು ಅಭಿವೃದ್ಧಿ, ಸಮಾನ ಪಾಲು, ಸಮಾನ ಭಾಗವಹಿಸುವಿಕೆಗಳ ಕುರಿತು ಹೆಚ್ಚು ಚಿಂತಿತರಾಗಿದ್ದಾರೆ.

ನಿಮ್ಮ ಅಭಿಪ್ರಾಯ: ಮದರಸದಲ್ಲಿ ಸರ್ಕಾರಿ ಪ್ರಾಯೋಜಿತ ಕನ್ನಡ ಕಲಿಕಾ ಕಾರ್ಯಕ್ರಮವು ಈ ಕೆಳಕಂಡ ಅಪಾಯ / ಅಪ್ರಸ್ತುತೆಗಳನ್ನು ಎದುರಿಸಬೇಕಾಗುತ್ತದೆ ಎಂಬ ಕಾರಣಕ್ಕಾಗಿ ಪ್ರಾಧಿಕಾರವು ಕಾರ್ಯಕ್ರಮವನ್ನು ರದ್ದುಗೊಳಿಸಿದೆ ಎಂದು ನಾವು ಭಾವಿಸುತ್ತೇವೆ.

ನಮ್ಮ ಪ್ರತಿಕ್ರಿಯೆ: ಅಪಾಯ / ಅಪ್ರಸ್ತುತೆಗಳನ್ನು ಎದುರಿಸಬೇಕಾಗುತ್ತದೆ ಅಂತ ಹೇಳಿದ್ದೀರಿ. ಯಾರಿಗೆ ಆಪಾಯ? ಹೇಗೆ?  ಮದರಸಗಳಲ್ಲಿ ಕನ್ನಡಕಲಿಕೆಯಿಂದ ಮುಸ್ಲಿಂ ಸಮುದಾಯಕ್ಕೆ, ಈ ಮಕ್ಕಳ ಭವಿಷ್ಯದಲ್ಲಿ ಆಗಬಹುದಾದ ಬದಲಾವಣೆ, ಸಿಗಬಹುದಾದ ಅವಕಾಶಗಳ ಕುರಿತು ನಿಮಗೂ ಜೊತೆಗೆ ಪ್ರಾಧಿಕಾರದ ಅಧ್ಯಕ್ಷರ ಗಮನಕ್ಕೂ ಇಲ್ಲ ಅಂತ ಕಾಣುತ್ತೆ. ಕರ್ನಾಟಕದ ಮದರಸಗಳಲ್ಲಿ ಕನ್ನಡ ಕಲಿಸಬಾರದೆ…!? ಇದು ಸಹ ಒಂದು ರೀತಿಯ ಸರ್ಕಾರದ ಪಾಲಿದಾರಿಕೆಯಲ್ಲಿನ ವಂಚನೆಯಲ್ಲವೇ?

ಇದನ್ನೂ ಓದಿ: Part-1: ಕರ್ನಾಟಕದ ಮದರಸಗಳಲ್ಲಿ ಕನ್ನಡ ಕಲಿಸಬಾರದೆ..!? – ಖಾಸಿಂ ಸಾಬ್ ಎ.

ನವೀನ್ ಸೂರಿಂಜೆ.., ನಾನು ಇಷ್ಟು ಹೇಳಿದ ನಂತರ ನೀವು ನೀಡಿದ ಎಂಟು ಕಾರಣ – ಸಮರ್ಥನೆಗಳಿಗೆ ನಾನು ಉತ್ತರಿಸುವುದು ಅಪ್ರಸ್ತುತ ಎಂಬುದು ನನ್ನ ಭಾವನೆ. ಅಲ್ಲದೆ, ಕರ್ನಾಟಕದ ಮದರಸಗಳು ಮೊದಲು ಅಧಿಕೃತವಾಗಿ ದಾಖಲಾಗಬೇಕು(ನೋಂದಣಿ ). ಅಲ್ಲಿ ಓದಿದ ವಿದ್ಯಾರ್ಥಿಗಳ ಅಂಕ ಪಟ್ಟಿ (Marks Card) ಎಲ್ಲಾ ಸರ್ಕಾರಿ ಉದ್ಯೋಗಗಳಿಗೆ ಅನ್ವಯವಾಗಬೇಕು. ಕರ್ನಾಟಕ ಮದರಸಗಳ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಬೇಕು. ಮದರಸಗಳ ಆಧುನೀಕರಣದ ಜೊತೆಗೆ ಪಠ್ಯ ಪುಸ್ತಕಗಳನ್ನು ಸರ್ಕಾರವೇ ನಿರ್ಧರಿಸಬೇಕು ಎಂಬುದು ನನ್ನ ಅಭಿಪ್ರಾಯ.

ಮುಸ್ಲಿಂ ವಿರೋಧಿ ಕೋಮುಶಕ್ತಿಗಳು ಮದರಸ ಮೇಲೆ ಸವಾರಿ ಮಾಡುವುದು ಇದು ಮೊದಲಲ್ಲ; ಕೊನೆಯೂ ಅಲ್ಲ. ಕೋಮುವಾದಿ ಬುದ್ದಿಗೆ ತನ್ನ ಅಜೆಂಡ ಜಾರಿಗೊಳಿಸಲು ನೆಪಗಳೇ ಬೇಕಾಗಿಲ್ಲ. 2b ಮುಸ್ಲಿಂ ಒಬಿಸಿ ಮೀಸಲಾತಿಯನ್ನು ಯಾವುದೆ ಪೂರ್ವ ಯೋಜನೆ ಇಲ್ಲದೆಯೆ ಒಂದೇ ದಿನದಲ್ಲಿ ಕಿತ್ತುಕೊಂಡವರಿಗೆ ಮದರಸ ಒಂದು ಲೆಕ್ಕವಲ್ಲ. ಕೋಮುವಾದಿಗಳು ಮುಂದೊಂದುದಿನ ಇದನ್ನು ದುರ್ಬಳಕೆಮಾಡಿ ಕೊಂಡಿಯಾರು ಎಂಬ ಗುಮಾನಿಗಳಿಗೆ ಯಡೆಮಾಡಿಕೊಟ್ಟರೆ ಬಹುಶಃ ಮುಸ್ಲಿಂ ಸಮುದಾಯ ನಾಡಿನಲ್ಲಿ ಸಾಮಾಜಿಕ ನ್ಯಾಯ – ಸಮಪಾಲು ವಡೆಯುವುದು ಅಸಾಧ್ಯ. ಕೋಮುವಾದಿಗಳು ಸಹ ಇದನ್ನೇ ಬಯಸುತ್ತಿದ್ದಾರೆ, ಸರ್ಕಾರದ ನಿಗಮ / ಮಂಡಳಿ / ಪ್ರಾಧಿಕಾರಗಳು ಸಹ ಪರೋಕ್ಷವಾಗಿ ಈ ನೀತಿಗಳ ಜಾರಿಯಲ್ಲಿಯೇ ಇವೆ.

ಸಾಧ್ಯವಾದರೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ತಂಡವು ಕರ್ನಾಟಕದ ಮದರಸಗಳ ಕುರಿತು ಸಮೀಕ್ಷೆ ನಡೆಸಿ ಕನ್ನಡ ಕಲಿಕೆಯ ಅಗತ್ಯ, ಭವಿಷ್ಯದ ಉದ್ಯೋಗಗಳ ಆದ್ಯತೆ, ಸಾಧ್ಯತೆ, ಈ ಮೂಲಕ ಅವಕಾಶಗಳ ಕುರಿತು ಒಂದು ಸಮಗ್ರ ಅಧ್ಯಯನ ನಡೆಸಲಿ. ಆ ಬಳಿಕ ನಿರ್ಧಾರ ಕೈಗೊಳ್ಳಲಿ. ಅದು ಬಿಟ್ಟು ಏಕಾ-ಏಕಿ ಮದರಸಗಳಲ್ಲಿ ಕಡ್ಡಾಯ ಕನ್ನಡ ಕಲಿಕೆ ಆದೇಶ ಜಾರಿ, ಇದರ ಬೆನ್ನಲ್ಲೆ ಈ ಆದೇಶವನ್ನು ಹಿಂಪಡೆದದ್ದು, ಇಂತಹ ಊಹಾ-ಪೋಹ ಚಲ್ಲಾಟಗಳು, ಕಲ್ಪಿತ ಸತ್ಯ-ಸುಳ್ಳುಗಳ ಆಧಾರದ ಯೋಜನೆಗಳನ್ನು ಹಮ್ಮಿಕೊಳ್ಳುವುದು ಬೇಡ.

ಮೊದಲು ಸಮೀಕ್ಷೆ ನಡೆಸಿ ಅದರ ಆಧಾರದ ಮೇಲೆ ಮದರಸಗಳಲ್ಲಿ ಕನ್ನಡ ಕಲಿಕೆಯ ಅಗತ್ಯವೋ, ಬೇಡವೋ ಎಂಬುದನ್ನು ನಿರ್ಧರಿಸಬೇಕು. ಸಂಸ್ಕೃತ, ಕ್ರಿಶ್ಚಿಯನ್, ಬುದ್ಧಿಸ್ಟ್ ಇತರೆ ಧಾರ್ಮಿಕ ಶಾಲೆಗಳಲ್ಲಿ  ಕನ್ನಡವನ್ನು ಕಲಿಸಲಾಗುತ್ತಿದೆಯೇ? ಇಂಗ್ಲಿಷ್ ಮೀಡಿಯಂ ಶಾಲೆಗಳಲ್ಲಿ ಕನ್ನಡ ಕಲಿಸ್ತಾರಾ? ಎಂಬ ವಿಷಯಗಳು, ಮದರಸದಲ್ಲಿ ಕನ್ನಡ ಕಲಿಸಬಾರದು ಎಂಬುದಕ್ಕೆ ಆಧಾರವಾಗಬಾರದು. ಇಲ್ಲೆಲ್ಲಾ ಕನ್ನಡ ಕಲಿಸಲಾಗುತ್ತೋ ಇಲ್ಲವೋ ಎಂಬುದನ್ನು ನೋಡಿಕೊಂಡು ಮದರಸದಲ್ಲಿ ಕಲಿಸಬೇಕೋ ಬೇಡವೋ ಎಂಬುದನ್ನು ನಿರ್ಧರಿಸುವುದು ಸರಿಯಲ್ಲ.

ಇಂಗ್ಲಿಷ್ ಮಾಧ್ಯಮಗಳ ಹಾವಳಿಯಿಂದ ಕನ್ನಡ ಕಲಿಕೆ ದುಸ್ತರವಾಗಿರುವ ಈ ಕಾಲಘಟ್ಟದಲ್ಲಿ, ಮುಸ್ಲಿಂ ಸಮುದಾಯದ ಮಕ್ಕಳಿಗೆ ಕನ್ನಡ ದಕ್ಕುವುದರಿಂದ ಲಾಭ ಹೆಚ್ಚು. ಈ ಮಕ್ಕಳು ಇಂಗ್ಲಿಷ್ ಅಥವಾ ಉರ್ದು ಮೀಡಿಯಂ ಶಾಲೆಗೆ ಹೋದರೂ ಕನ್ನಡ ಪ್ಲಸ್ ಆಗಿ ಅವರಿಗೆ ದಕ್ಕುತ್ತದೆ. ಮದರಸದಲ್ಲಿ ಕನ್ನಡ ಕಲಿಸಬೇಡಿ ಎನ್ನುವುದಕ್ಕಿಂತ ಕನ್ನಡ ಮೀಡಿಯಂನಲ್ಲಿ ಕಲಿತವರಿಗೆ ಉದ್ಯೋಗದಲ್ಲಿ ಆದ್ಯತೆ ಸಿಗುವಂತೆ, ಮದರಸದಲ್ಲಿ ಕನ್ನಡ ಕಲಿತ ಮಕ್ಕಳಿಗೆ ಉದ್ಯೋಗಗಳಲ್ಲಿ ಆದ್ಯತೆಗಳನ್ನು ಕಲ್ಪಿಸಲು ಸಾಧ್ಯವೆ ಎಂಬ ನಿಟ್ಟಿನ ಆರೋಗ್ಯಕರ ಚಿಂತನೆ ಹೆಚ್ಚು ಉತ್ತಮ ವಾಗಬಹುದು.

ಮದರಸದಲ್ಲಿ ಕನ್ನಡ ಕಲಿಯುವುದರಿಂದ ಮುಸ್ಲಿಮರಿಗೆ ಕನ್ನಡ ಬರುವುದಿಲ್ಲ ಎಂಬ ಸಂದೇಹ ಹೋಗುತ್ತದೆ ಅಂತಲೋ ಅಥವಾ ಮುಂದೆ ಕೋಮುವಾದಿ ಪಕ್ಷಗಳು ಅಧಿಕಾರಕ್ಕೆ ಬಂದರೆ ಮದರಸಗಳ ಮೇಲೆ ಸವಾರಿ ಮಾಡಲು ಅವಕಾಶ ನೀಡಿದಂತ್ತಾಗುತ್ತದೆ ಎಂದು ಊಹಿಸಿಕೊಂಡು ಕರ್ನಾಟಕದ ಮದರಸಗಳಲ್ಲಿ ಕನ್ನಡ ಕಲಿಕೆ ವಿರೋಧಿಸುವುದು ಸೂಕ್ತವಲ್ಲ. ಅಲ್ಲದೆ ಇಂತಹ ಭಯದ ಗುಮಾನಿಗಳಿಂದ ಮುಸ್ಲಿಮರಿಗೆ ಸಿಗಬಹುದಾದ ಇಂತಹ ಕಿಂಚಿತ್ತು ಅವಕಾಶಗಳನ್ನು ಸಹ ಕಸಿದು ಕೊಳ್ಳುವುದು ಬೇಡ.

• ಖಾಸಿಂ ಸಾಬ್, ಬೆಂಗಳೂರು.

ರಾಜ್ಯ ಶಿಕ್ಷಣ

ನವೀನ್ ಸೂರಿಂಜೆ., ಕರ್ನಾಟಕದ ಮದರಸ – ಕನ್ನಡ ಕಲಿಕೆ – ಕೋಮುವ್ಯಾದಿ ನುಸುಳುವಿಕೆ ಕುರಿತು ನಿಮ್ಮ ನೀಲುವನ್ನು ಬದಲಾವಣೆ ಮಾಡಿಕೊಳ್ಳಲು, ನೀವು ಇತ್ತೀಚೆಗೆ ಪ್ರಕಟಿಸಿದ ಎರಡು ಲೇಖನಗಳ ಎರಡು ಭಾಗಗಳಿಗೆ ನನ್ನ ಪ್ರಶ್ನೆ – ಪ್ರತಿಕ್ರಿಯೆಗಳು!

 ‘ಮದರಸಗಳಲ್ಲಿ ಕನ್ನಡ ಜಾರಿ’  ಸುತ್ತೋಲೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು.

 ‘ವಿರೋಧ ಪ್ರಕಟವಾದ್ದರಿಂದ ಈ ವಿಷಯನ್ನು ಕೈ ಬಿಡಲಾಗಿದೆ’ ಕನ್ನಡ ಅಭಿವೃದ್ಧಿ ಪ್ರಾಧಿಕಾರ,  ಅಧ್ಯಕ್ಷರು, ಪುರುಷೋತ್ತಮ ಬಿಳಿಮಲೆ.

ಈ ಪ್ರಾಧಿಕಾರಕ್ಕೆ ಮನವಿಸಲ್ಲಿಸಿದ್ದು ಯಾರು? ಇದಕ್ಕೆ ವಿರೋಧವ್ಯಕ್ತ ಪಡಿಸಿದ್ದು ಯಾರು?

ನವೀನ್ ಸೂರಿಂಜೆ: ‘ಮದರಸದಲ್ಲಿ ಕನ್ನಡ ಜಾರಿ’ ಇದು ಸರ್ಕಾರವೊಂದು ಮಾಡಬೇಕಾದ ಆಧ್ಯತೆಯ ಕೆಲಸವಲ್ಲ. ಮದರಸ ಮಾತ್ರವಲ್ಲ, ಸಂಸ್ಕೃತ ವೇದ ಪಾಠ ಶಾಲೆ, ಕ್ರಿಶ್ಚಿಯನ್ನರ ಆರಾಧನೆ (Adoration) ಕೇಂದ್ರಗಳಲ್ಲೂ ಕನ್ನಡ ಕಡ್ಡಾಯ ಮಾಡುವುದು ಸರ್ಕಾರಿ ಪ್ರಾಧಿಕಾರದ ಕೆಲಸವಲ್ಲ.

ಖಾಸಿಂ ಸಾಬ್: ಮದರಸದಲ್ಲಿ, ಸಂಸ್ಕೃತ ವೇದ ಪಾಠ ಶಾಲೆ, ಕ್ರಿಶ್ಚಿಯನ್, ಬುದ್ಧಿಸ್ಟ್, ಪಾರ್ಸಿ, ಜೈನ್… ಇತರೆ ಧರ್ಮಗಳ ಆರಾಧನಾ ಧಾರ್ಮಿಕ ವಿದ್ಯಾಭ್ಯಾಸ ಕೇಂದ್ರಗಳಲ್ಲಿ ಕನ್ನಡ ಜಾರಿ ಏಕೆ ಆಗ ಬಾರದು?

ನವೀನ್ ಸೂರಿಂಜೆ: ಮುಸ್ಲೀಮರ ಮೇಲಿನ ಸಾವಿರಾರು ಆರೋಪಗಳಿಗೆ ಮದರಸ ಕಾರಣವಾಗಿರುವಂತೆ ಮುಸ್ಲೀಮರಿಗೆ ಕನ್ನಡ ಬರಲ್ಲ ಎಂಬ ಆರೋಪಕ್ಕೂ ಮದರಸಾವೇ ಕಾರಣವಾಗಿದೆ ಎಂದು ಕನ್ನಡ ಅಭಿವೃದ್ದಿ ಪ್ರಾಧಿಕಾರ ಕಂಡಿದ್ದು ವಿಪರ್ಯಾಸ!

ಖಾಸಿಂ ಸಾಬ್: ಮುಸ್ಲೀಮರ ಮೇಲಿನ ಸಾವಿರಾರು ಆರೋಪಗಳಿಗೆ ಮದರಸಾ ಕಾರಣವಾಗಿದೆ ಎಂದು ಯಾವ ವರದಿಗಳು ಹೇಳಿವೆ? ಮುಸ್ಲೀಮರಿಗೆ ಕನ್ನಡ ಬರಲ್ಲ ಎಂಬ ಆರೋಪಕ್ಕೂ ಮದರಸಾವೇ ಕಾರಣವಾಗಿ… ಎಂದು ಕನ್ನಡ ಅಭಿವೃದ್ದಿ ಪ್ರಾಧಿಕಾರ ಯಾವಾಗ ಹೇಳಿದ್ದು , ಅದನ್ನು ಅಧಿಕೃತವಾಗಿ ಹೇಳಿದ್ದು ಯಾರು, ಯಾವ ಸರ್ಕಾರ, ಯಾವ ಆಯೋಗ, ಯಾವ ಸಮಿತಿ?

ನವೀನ್ ಸೂರಿಂಜೆ: ಕನ್ನಡ ಅಭಿವೃದ್ದಿ ಪ್ರಾಧಿಕಾರದ ಪುರುಷೋತ್ತಮ ಬಿಳಿಮಲೆಯವರು ಇಂದು ಮದರಸದೊಳಗೆ ಕಾಳಜಿಯಿಂದ ನುಗ್ಗಿ ಕೆಲಸ ಮಾಡುತ್ತಾರೆ ಎಂದಿಟ್ಟುಕೊಳ್ಳೊಣಾ. ಮುಂದೆ ಬರುವ ಬಿಜೆಪಿ ಸರ್ಕಾರಕ್ಕೆ ಇದು ರಹದಾರಿ ಆಗಿರುವುದಿಲ್ಲವೇ?

ಖಾಸಿಂ ಸಾಬ್: ನಿಮ್ಮ ಈ ಗುಮಾನಿ ‘ಮುಸ್ಲಿಮರ ಕಲ್ಯಾಣದ ಕುರಿತಾದ ಮುಸ್ಲಿಂ ಏತರ ಜಾತ್ಯತೀತ ಬುದ್ದಿಜೀವಿಗಳ’ ಗುಮಾನಿಯೆ ಆಗಿದೆ. ಇಂತಹ ಬುದ್ದಿಜೀವಿಗಳ ಗುಮಾನಿಗಳಿಂದ ಮುಸ್ಲಿಂ ಸಮುದಾಯಕ್ಕೆ ಆದ ಲಾಭಕ್ಕಿಂತ ನಷ್ಟವೇ ಹೆಚ್ಚು.

ನವೀನ್ ಸೂರಿಂಜೆ: ಉತ್ತರಾಖಂಡ ಸರ್ಕಾರ ಈಗಾಗಲೇ ಮದರಸಾದಲ್ಲಿ ಶ್ರೀರಾಮ ಕತೆ ಪಾಠ ಮಾಡಲು ವಕ್ಫ್ ಇಲಾಖೆಯ ಮೂಲಕ ಚಿಂತನೆ ನಡೆಸಿದೆ ಎಂಬ ಸುದ್ದಿ ಇದೆ. ಜನವರಿ 25, 2024 ರಂದು ಸುದ್ದಿಗೋಷ್ಠಿ ನಡೆಸಿರುವ ಉತ್ತರಾಖಂಡ ವಕ್ಫ್ ಅಧ್ಯಕ್ಷ ಶಾದಾಬ್ ಅವರು “ಮದರಸ ಆಧುನೀಕರಣ ಕಾರ್ಯಕ್ರಮದ ಭಾಗವಾಗಿ ಉತ್ತರಾಖಂಡ ವಕ್ಫ್ ಮಂಡಳಿಗೆ ಸಂಯೋಜಿತವಾಗಿರುವ ಮದರಸಗಳಿಗೆ ಭಗವಾನ್ ಶ್ರೀರಾಮನ ಅಧ್ಯಯನವನ್ನು ಹೊಸ ಪಠ್ಯಕ್ರಮದಲ್ಲಿ ಪರಿಚಯಿಸಲಾಗುವುದು” ಎಂದು ತಿಳಿಸಿದ್ದಾರೆ.

ಖಾಸಿಂ ಸಾಬ್: ಅಲ್ಲಿನ ರಾಜ್ಯ ಸರಕಾರ ಶ್ರೀರಾಮ ಕತೆ, ಹನುಮಾನ್ ಚಾಲೀಸಾ, ಸಂವಿಧಾನದ ಪೂರ್ವ ಪೀಠಿಕೆ, ಅಂಬೇಡ್ಕರ್ ಅವರ ಜೀವನ ಚರಿತ್ರೆ, ಟಿಪ್ಪುವಿನ ಹುತಾತ್ಮ ಕಥೆಗಳನ್ನು ಭೋದಿಸುತ್ತಿದೆಯೇ ಎಂಬುದು ಸಮಸ್ಯೆಯಲ್ಲ. ಅಲ್ಲಿ ಕಲಿತ ಮಕ್ಕಳಿಗೆ ಅವರು ಕಲಿಯುತ್ತಿರುರ ಅರೇಬಿಕ್ ಭಾಷೆಯಲ್ಲಿ ಆದುನಿಕ, ಕಾಂಪಿಟೇಟಿವ್ ವಿದ್ಯಾಭ್ಯಾಸದ ಜೊತೆಗೆ ನೇಟಿವ್ ಅಧಿಕೃತ ನಾಡ ಭಾಷೆ ಕಲಿಸಲಾಗುತ್ತಿದೆಯೇ ಎಂಬುದು ಮುಖ್ಯವಾಗಬೇಕು.

ನವೀನ್ ಸೂರಿಂಜೆ: ಕರ್ನಾಟಕ ಸರ್ಕಾರವೂ ಭವಿಷ್ಯದಲ್ಲಿ ಇಂತದ್ದೊಂದು ಕೃತ್ಯಕ್ಕೆ ಈಗಲೇ ಅಡಿಪಾಯ ಹಾಕಿಕೊಡುತ್ತದೆಯೇ?

ಖಾಸಿಂ ಸಾಬ್: ಇಲ್ಲಿ ಮುಖ್ಯವಾಗಬೇಕಾದದ್ದು ಕರ್ನಾಟಕದಲ್ಲಿ ಕೋಮುವಾದ ತಡೆಯುವ, ಅದು ನುಸುಳಲು ಅವಕಾಶವಿರುವ ಎಲ್ಲಾ ತೊರೆಗಳನ್ನು ಮುಚ್ಚುವ ಜವಾಬ್ದಾರಿ. ಅವಕಾಶಗಳಿಗಿಂತ, ಮದರಸಗಳಲ್ಲಿ ಓದಿ ಶಿಕ್ಷಣ / ಸರ್ಟಿಫಿಕೇಟ್ ಪಡೆದ ಮಕ್ಕಳ ಭವಿಷ್ಯ ಮುಖ್ಯವಾಗಬೇಕಿದೆ.

ನವೀನ್ ಸೂರಿಂಜೆ: ಮದರಸಾದಲ್ಲಿ ಕನ್ನಡ ಶಿಕ್ಷಣ ನೀತಿಯ ಕರಡು ಪ್ರತಿಯನ್ನು ಬಿಳಿಮಲೆ ಸಿದ್ದಗೊಳಿಸಿದ್ದಾರೆ?

ಖಾಸಿಂ ಸಾಬ್: ದಯವಿಟ್ಟು ಈ ನೀತಿಯ ಕರಡು ಪ್ರತಿಯನ್ನು ಬಹಿರಂಗ ಪಡಿಸಲಿ; ಇದರ ಆಗು-ಹೋಗುಗಳ ಕುರಿತು ಸಾರ್ವಜನಿಕ ಚರ್ಚೆಯಾಗಲಿ. ಪ್ರಮುಖವಾಗಿ ಮುಸ್ಲಿಂ ಏತರ ಜಾತ್ಯತೀತ ಬುದ್ದಿಜೀವಿಗಳು ಇದರಲ್ಲಿ ಹೆಚ್ಚು ಪಾತ್ರ ವಹಿಸುವುದು ಬೇಡ. ಒಟ್ಟಾರೆ ಸಮಗ್ರ ಮುಸ್ಲಿಂ ಸಮುದಾಯದ ನಡುವೆ ಚರ್ಚೆ, ಅಭಿಪ್ರಾಯಕ್ಕೆ ಬಿಡಿ.

ನವೀನ್ ಸೂರಿಂಜೆ: ನೀತಿಯ ಕರಡು ಪ್ರತಿಯ ಮದರಸ ಧಾರ್ಮಿಕ ಶಿಕ್ಷಣದಲ್ಲಿ ಕಡ್ಡಾಯ ಕಲಿಕೆ ಎನ್ನುವುದು ಸರ್ಕಾರಿ ನೀತಿಯಾದರೆ ಮುಂದೊಂದು ದಿನ ಬಿಜೆಪಿ ಸರ್ಕಾರ ಬಂದಾಗ ‘ಮದರಸಾ ಕೇಸರಿಕರಣದ ವಿರುದ್ದ ಹೋರಾಟ’ ಎಂದು ಮುಸ್ಲಿಂ ಮಕ್ಕಳು ಹೊಸ ಸಂಘರ್ಷ ಎದುರಿಸಲು ಸಿದ್ದರಾಗಬೇಕು.

ಖಾಸಿಂ ಸಾಬ್: ಹೊಸ ಸಂಘರ್ಷ ಹುಟ್ಟುತ್ತದೆ ಎಂಬ ಕಾರಣಕ್ಕೆ ಅವಕಾಶ, ಸವಲತ್ತು, ನ್ಯಾಯಗಳನ್ನು ಕಳೆದು ಕೊಳ್ಳಲು ಸಾಧ್ಯವಿಲ್ಲ. ಹೋರಾಟ ಮಾಡೋಣ ಇದನ್ನು ಎದುರಿಸಲು ನಿಮ್ಮಂತ ಜಾತ್ಯತೀತ ವ್ಯಕ್ತಿಗಳು ಹೇಗೂ ಇರುತ್ತಿರಿ.

ನವೀನ್ ಸೂರಿಂಜೆ: ಮುಸ್ಲೀಮರಿಗೆ ಕನ್ನಡ ಬರಲ್ಲ ಎನ್ನುವುದಕ್ಕೂ ಮದರಸಕ್ಕೂ ಏನು ಸಂಬಂಧ? ಕನ್ನಡ ಬಾರದೇ ಇರುವ ಮುಸ್ಲಿಮರು ಇದ್ದಾರೆ ಎಂದರೆ ಅದಕ್ಕೆ ಕಾರಣ ಶಿಕ್ಷಣದ ಕೊರತೆಯೇ ಹೊರತು ಮದರಸಾವಲ್ಲ. ಕನ್ನಡ ಬಾರದ ತುಳುವರೂ, ಹಿಂದೂಗಳೂ, ಕ್ರಿಶ್ಚಿಯನ್ನರೂ ಅಷ್ಟೇ ಸಂಖ್ಯೆಯಲ್ಲಿ ಇದ್ದಾರೆ. ಭಯೋತ್ಪಾದನೆ, ಹವಾಲ ಹಣ, ಲವ್ ಜಿಹಾದ್, ಆಯುಧ ಸಂಗ್ರಹ, ಕೋಮುಗಲಭೆ ಹೀಗೆ ಎಲ್ಲದಕ್ಕೂ ಮದರಸ ಕಾರಣ ಎಂಬ ಆರೋಪದ ಬಳಿಕ ಈಗ ಮುಸ್ಲಿಮರಿಗೆ ಕನ್ನಡ ಬರಲ್ಲ ಎಂಬ ಆರೋಪಕ್ಕೂ ಮದರಸವೇ ಕಾರಣ ಎಂದು ಪ್ರಾಧಿಕಾರ ಘೋಷಿಸಿದಂತಿದೆ.

ಖಾಸಿಂ ಸಾಬ್: ನಿಜಕ್ಕೂ ಇದನ್ನು ಪ್ರಧಿಕಾರ ಘೋಷಣೆ ಮಾಡಿದೆಯೇ…!?

ನವೀನ್ ಸೂರಿಂಜೆ: ಧಾರ್ಮಿಕ ವಿಚಾರಗಳಲ್ಲಿ ಸರ್ಕಾರ ಅನಗತ್ಯ ಮೂಗು ತೂರಿಸಿ ರಾಡಿ ಎಬ್ಬಿಸಬಾರದು.

ಖಾಸಿಂ ಸಾಬ್: ಮದರಸ (.. ಅಥವಾ ಸಂಸ್ಕೃತ ವೇದ ಪಾಠ ಶಾಲೆ, ಕ್ರಿಶ್ಚಿಯನ್ ಧಾರ್ಮಿಕ ಪಾಠ ಶಾಲೆ) ಗಳ ಶೈಕ್ಷಣಿಕ ವ್ಯವಸ್ಥೆ, ವಿದ್ಯಾರ್ಥಿಗಳ ಭವಿಷ್ಯ, ಸ್ಕಿಲ್ ಡೆವಲಪ್ಮೆಂಟ್, ಮಾಡ್ರನ್ ಎಜುಕೇಶನ್ ಸಿಸ್ಟಮ್, ಕನ್ನಡ, ಇಂಗ್ಲಿಷ್ ಕಲಿಕೆ ಮುಂತಾದ ಮೂಲ ಭೂತ ವಿಶೇಷಗಳಲ್ಲಿ ಸರ್ಕಾರ ಮಧ್ಯ ಪ್ರವೇಶ ಮಾಡುವುದರಲ್ಲಿ ತಪ್ಪೇನು.

ನವೀನ್ ಸೂರಿಂಜೆ: ಧಾರ್ಮಿಕ ಸಂಸ್ಥೆಗಳು ಸಂವಿಧಾನ ಬದ್ದವಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂದು ಖಾತ್ರಿ ಪಡಿಸಿಕೊಳ್ಳುವುದಷ್ಟೇ ಸರ್ಕಾರದ ಕೆಲಸವೇ ಹೊರತು ಅವರ ಮೂಲಭೂತ ಹಕ್ಕುಗಳನ್ನು ಕಸಿಯುವುದಲ್ಲ.

ಖಾಸಿಂ ಸಾಬ್: ಮದರಸ ಎಂಬುದು ಒಂದು ಸಂಪೂರ್ಣ ಧಾರ್ಮಿಕ ಸಂಸ್ಥೆಯಲ್ಲ; ಅದು ಧಾರ್ಮಿಕ ಸಂಸ್ಥೆಯ ಒಂದು ಭಾಗವಾದ ಕಲಿಕಾ ಅಂಗ. ಎಜುಕೇಶನಲ್ ವಿಂಗ್ ಅಷ್ಟೇ. ಮದರಸವೇ ಮುಸ್ಲಿಮರ ಎಲ್ಲವನ್ನೂ ತೀರ್ಮಾನಿಸುವ ಕೇಂದ್ರವಲ್ಲ. ಖಾತ್ರಿ – ಗ್ಯಾರಂಟಿ ಪಡಿಸಿಕೊಳ್ಳುವುದಷ್ಟೇ ಸರ್ಕಾರದ ಕೆಲಸವೇ… ಇವುಗಳ ಪ್ರಗತಿ – ಅಭಿವೃದ್ಧಿ – ಆದುನಿಕರಣಗಳು ಬೇಡವೇ. ಇದು ಸರ್ಕಾರದ ಹೊಣೆಗಾರಿಕೆ ಅಲ್ಲವೇ?

ನವೀನ್ ಸೂರಿಂಜೆ: ಸಂಸ್ಕೃತ ವೇದ ಪಾಠ ಶಾಲೆಯನ್ನು ಬಿಟ್ಟು ಮದರಸಾವನ್ನೇ ಗುರಿ ಮಾಡಿರುವ ಹಿಂದೆ ‘ಅವರು ಲೆಫ್ಟಿಸ್ಟ್, ಕಾಂಗ್ರೆಸ್ ಆದರೂ ಮುಸ್ಲೀಮರನ್ನೂ ಬಿಟ್ಟಿಲ್ಲ ಮಾರಾಯ್ರೆ’ ಎಂದು ಅನ್ನಿಸಿಕೊಳ್ಳುವ ಇರಾದೆಗಳು ಮುಸ್ಲೀಮರನ್ನು ಭವಿಷ್ಯದಲ್ಲಿ ಅಪಾಯಕ್ಕೆ ದೂಡುತ್ತದೆ.

ಖಾಸಿಂ ಸಾಬ್: ಕರ್ನಾಟಕ ರಾಜ್ಯ ಸರ್ಕಾರದ ಈ ನಿಲುವಿನಿಂದ ರಾಜ್ಯ ಮದರಸಗಳಿಗೆ ಯಾವುದೇ ಇರಾದೆಗಳು, ಗುಮಾನಿಗಳು ಇಲ್ಲ ಮಾರಾಯ್ರೆ.

ನವೀನ್ ಸೂರಿಂಜೆ: ಮದರಸಾಗಳು ಕನ್ನಡ ಸೇರಿದಂತೆ ಯಾವ ಭಾಷೆಯನ್ನಾದರೂ ಕಲಿಸಲಿ. ಪ್ರಾಧಿಕಾರಕ್ಕೆ ಆಸಕ್ತಿ ಇದ್ದರೆ ಅಂತಹ ಮದರಸಾಗಳಿಗೆ ಅನುದಾನ, ಪ್ರೋತ್ಸಾಹ, ಪ್ರಶಸ್ತಿ ನೀಡಲಿ. ಬದಲಾಗಿ, ಸರ್ಕಾರವೇ ನೀತಿಯ ಮೂಲಕವಾಗಿ ಮದರಸ ಪ್ರವೇಶ ಮಾಡುವುದು ಮುಸ್ಲೀಮರ ಭವಿಷ್ಯದ ದೃಷ್ಟಿಯಿಂದ ಅಪಾಯಕಾರಿ.

ಖಾಸಿಂ ಸಾಬ್: ಇದು ಹೇಗೆ ಮುಸ್ಲಿಮರ ಭವಿಷ್ಯದ ದೃಷ್ಟಿಯಿಂದ ಅಪಾಯಕಾರಿಯೋ,..ಅರ್ಥವಾಗುತ್ತಿಲ್ಲ.

ಈ ಚರ್ಚೆಯ ಸಾರಾಂಶ: ಕರ್ನಾಟಕ ರಾಜ್ಯದಲ್ಲಿನ ಎಲ್ಲ ಮದರಸಗಳಲ್ಲಿ ಕನ್ನಡ ಕಲಿಕೆ ಜಾರಿಯಾಗಲಿ ಎಂಬುದಷ್ಟೇ ಆಗಿದೆ!

ಖಾಸಿಂ ಸಾಬ್ ಎ. ಬೆಂಗಳೂರು.

ರಾಜ್ಯ ಶಿಕ್ಷಣ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಜೀಂ ಪ್ರೇಮ್‌ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

“ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ. ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್‌ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ. ಅವರಿಗೆ ಧನ್ಯವಾದಗಳು” ಎಂದು ಹೇಳಿದರು.

“ವೈಜ್ಞಾನಿಕವಾಗಿ, ವೈಚಾರಿಕವಾಗಿ ಮಕ್ಕಳು ವಿಕಾಸ ಹೊಂದಬೇಕು. ಆಗ ಮಾತ್ರ ಸಮಾಜಮುಖಿ ಆಗಲು ಸಾಧ್ಯ. ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೆ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ” ಎಂದು ಹೇಳಿದರು.

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೂಜ್ ಖಾನ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಶಿಕ್ಷಣ

ಡಿ.ಸಿ.ಪ್ರಕಾಶ್

ದೇಶಾದ್ಯಂತ ವೈದ್ಯಕೀಯ ಕೋರ್ಸ್‌ಗಳಿಗೆ ನಡೆಸಲಾಗುವ ನೀಟ್ ಪರೀಕ್ಷೆ 2017 ರಿಂದ ನಡೆಸಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ವೈದ್ಯಕೀಯ ಕೋರ್ಸ್‌ಗಳಿಗೆ ಸೇರಲು ಅನುವು ಮಾಡಿಕೊಡಲು ನೀಟ್ ಪರೀಕ್ಷೆಯನ್ನು ಪರಿಚಯಿಸಲಾಗಿದೆ ಎಂದು ಕೇಂದ್ರ ಬಿಜೆಪಿ ಸರ್ಕಾರ ವಿವರಿಸಿದೆ. ಆದರೆ, ಗ್ರಾಮೀಣ ಬಡ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಶಾಲೆಯಲ್ಲಿ ಓದಿದವರು ವೈದ್ಯರಾಗುವ ಅವಕಾಶ ಕಳೆದುಕೊಳ್ಳುತ್ತಾರೆ ಎಂದು ತಮಿಳುನಾಡು ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದೆ.

ಈ ಹಿನ್ನೆಲೆಯಲ್ಲಿ, ಈ ವರ್ಷ ನಡೆದ ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ವಿಚಾರ ದೇಶಾದ್ಯಂತ ಸಂಚಲನ ಮೂಡಿಸಿದೆ. ಕಳೆದ ಮೇನಲ್ಲಿ ನೀಟ್ ಪರೀಕ್ಷೆ ನಡೆದಾಗ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಫಲಿತಾಂಶ ಪ್ರಕಟವಾದ ನಂತರ 67 ವಿದ್ಯಾರ್ಥಿಗಳು ಹಿಂದೆಂದೂ ಕಾಣದ ರೀತಿಯಲ್ಲಿ ಪೂರ್ಣ ಅಂಕಗಳನ್ನು ಪಡೆದಿದ್ದರು, ಅದೇ ಕೇಂದ್ರದಲ್ಲಿ ಸತತವಾಗಿ ಹಾಜರಾದ ವಿದ್ಯಾರ್ಥಿಗಳೂ ಪೂರ್ಣ ಅಂಕಗಳನ್ನು ಪಡೆದರು, ನಿರ್ದಿಷ್ಟ ವಿದ್ಯಾರ್ಥಿಗಳಿಗೆ ಮಾತ್ರ ಕೃಪಾಂಕ ನೀಡಲಾಗಿದೆ.

ಇವೆಲ್ಲವೂ ವಿವಾದಕ್ಕೆ ಎಡೆಮಾಡಿಕೊಟ್ಟು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣಗಳು ದಾಖಲಾದವು. ಆದರೆ ಆರಂಭದಿಂದಲೂ ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ನಿರಾಕರಿಸಿತ್ತು. ಬಿಹಾರದಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರ ಇತ್ತೀಚೆಗೆ ಬೆಳಕಿಗೆ ಬಂದಿದ್ದು ಆಘಾತವನ್ನು ಉಂಟುಮಾಡಿತ್ತು.

ಇದರಿಂದ ನೀಟ್ ಪರೀಕ್ಷೆ ನಡೆಸುವ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮುಖ್ಯಸ್ಥರನ್ನು ಬದಲಿಸುವುದನ್ನು ಬಿಟ್ಟು ಬಿಜೆಪಿಗೆ ಬೇರೆ ದಾರಿಯೇ ಇರಲಿಲ್ಲ. ಅಲ್ಲದೆ, ನೀಟ್ ಪರೀಕ್ಷಾ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಗೂ ಆದೇಶಿಸಿದೆ. ಜೊತೆಗೆ ಇಂದು ನಡೆಯಬೇಕಿದ್ದ ಸ್ನಾತಕೋತ್ತರ ನೀಟ್ ಪರೀಕ್ಷೆಯನ್ನೂ ಕೇಂದ್ರ ಸರ್ಕಾರ ಮುಂದೂಡಿದೆ.

ಈ ಹಿನ್ನೆಲೆಯಲ್ಲಿ, ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ, “ಸದ್ಯ ನೀಟ್‌ ಸ್ನಾತಕೋತ್ತರ ಪರೀಕ್ಷೆಯನ್ನೂ ಮುಂದೂಡಲಾಗಿದೆ. ನರೇಂದ್ರ ಮೋದಿ ಆಡಳಿತದಲ್ಲಿ ಶಿಕ್ಷಣ ವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಇದು ಮತ್ತೊಂದು ಕೆಟ್ಟ ಉದಾಹರಣೆಯಾಗಿದೆ. ಬಿಜೆಪಿ ಆಡಳಿತದಲ್ಲಿ ವಿದ್ಯಾರ್ಥಿಗಳನ್ನು ಓದುವಂತೆ ಒತ್ತಾಯಿಸದೆ ತಮ್ಮ ಭವಿಷ್ಯವನ್ನು ಉಳಿಸಲು, ಸರಕಾರದೊಂದಿಗೆ ಹೋರಾಟ ನಡೆಸಬೇಕಾದ ಅನಿವಾರ್ಯತೆ ಇದೆ” ಎಂದು ಕಿಡಿಕಾರಿದ್ದಾರೆ.

ಅಲ್ಲದೆ, “ಪ್ರತಿ ಬಾರಿಯೂ ಈ ಘಟನೆಗಳನ್ನು ಮೌನವಾಗಿ ನೋಡುತ್ತಿದ್ದ ಮೋದಿ, ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಮತ್ತು ಶಿಕ್ಷಣ ಮಾಫಿಯಾದ ಮುಂದೆ ಸಂಪೂರ್ಣವಾಗಿ ನಿಷ್ಕ್ರಿಯರಾಗಿದ್ದಾರೆ ಎಂಬುದು ಈಗ ಸ್ಪಷ್ಟವಾಗಿದೆ. ಮೋದಿಯವರ ಅಸಮರ್ಥ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯಕ್ಕೆ ದೊಡ್ಡ ಗಂಡಾಂತರವಾಗಿದೆ. ಅದರಿಂದ ದೇಶದ ಭವಿಷ್ಯವನ್ನು ನಾವು ಉಳಿಸಬೇಕಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ

ಪುತ್ತೂರು (ದಕ್ಷಿಣ ಕನ್ನಡ): 2025ನೇ ಸಾಲಿನಲ್ಲಿ ನೀಟ್ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಅಂತಿಮ ಹಂತದ ಪ್ರಕ್ರಿಯೆ ಪುತ್ತೂರು ಕಮ್ಯೂನಿಟಿ ಸೆಂಟರ್‌ನಲ್ಲಿ ನಡೆಯಿತು.

ದ್ವಿತೀಯ ಪಿಯುಸಿ ಮುಗಿಸಿ ಲಾಂಗ್ ಟರ್ಮ್ ನೀಟ್ ಮತ್ತು ಹತ್ತನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ಇಂಟಿಗ್ರೆಟೆಡ್ ನೀಟ್‌ಗೆ ತರಭೇತಿಗಾಗಿ ಕಮ್ಯೂನಿಟಿ ಸೆಂಟರ್ ಈ ಬಾರಿ 50 ವಿದ್ಯಾರ್ಥಿಗಳಿಗೆ ವಿಶೇಷ ಕೊಡುಗೆಗಳನ್ನು ಘೋಷಿಸಿತ್ತು. ಮೊದಲ ಹಂತದಲ್ಲಿ ವಿದ್ಯಾರ್ಥಿಗಳ ಅಂಕವನ್ನು ಆದರಿಸಿ 65 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿತ್ತು. ಅನಂತರ ಕೌನ್ಸಿಲಿಂಗ್ ನಡೆಸಿ ಅವರಲ್ಲಿ ಎಲ್ಲರಿಗೂ ಸೆಂಟರಿನ ಅರ್ಹತಾ ಪರೀಕ್ಷೆಗೆ ಅವಕಾಶ ನೀಡಲಾಯಿತು.

ಭಾನುವಾರದಂದು ನಡೆದ ಸೆಂಟರಿನ ಅರ್ಹತಾ ಪರೀಕ್ಷೆಯಲ್ಲಿ 35 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು. ಈ ಮೊದಲು ಹದಿನೈದು ವಿದ್ಯಾರ್ಥಿಗಳು ಸೆಂಟರಿನ ದಾಖಲಾತಿ ಇರುವವರಿಗಾಗಿ ಮೀಸಲು ನೀಡಲಾಗಿತ್ತು. ಪರೀಕ್ಷೆಯಲ್ಲಿ ಆಯ್ಕೆಯಾಗದ ಉಳಿದ ವಿದ್ಯಾರ್ಥಿಗಳಿಗೆ ಸೆಂಟರ್ ವಿದ್ಯಾರ್ಥಿ ವೇತನ ನೀಡಲಿದೆ.

ಮುಂದಿನ ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕಳೆದ ಬಾರಿ ನೀಟ್‌ನಲ್ಲಿ ಸಾದನೆ ಮಾಡಿ ವಿವಿಧ ಮೆಡಿಕಲ್ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳು ಪ್ರೇರಣಾ ಶಿಭಿರ ನಡೆಸಿದರು. ಅನಂತರ ವಿದ್ಯಾರ್ಥಿಗಳೊಂದಿಗೆ ಎಂ.ಬಿ.ಬಿ.ಎಸ್ ಕಲಿಯುತ್ತಿರುವ ಸೆಂಟರಿನ ವಿದ್ಯಾರ್ಥಿಗಳು ಸಮಾಲೋಚಿಸಿ, ಅವರಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ಈ ಮೊದಲು ಸಾದನೆ ಮಾಡಿದವರು ಮುಂದೆ ಸಾದನೆ ಮಾಡಲಿರುವ ವಿದ್ಯಾರ್ಥಿಗಳಿಗೆ ಅಗತ್ಯ ಸಂದರ್ಭದಲ್ಲಿ ನಿರಂತರ ನೆರವು ನೀಡುವುದಾಗಿ ಧೈರ್ಯ ತುಂಬಿದರು.

ಸಿ.ಆರ್.ಡಿ.ಎಫ್ ನ ಉಪಾಧ್ಯಕ್ಷರಾದ ಅಬ್ದುಲ್ಲಾ ಶೇಕ್ ರವರು ವಿದ್ಯಾರ್ಥಿಗಳ ಸಾಮರ್ಥ್ಯ ಪರೀಕ್ಷೆ ನಡೆಸಿಕೊಟ್ಟರು. ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳಾದ ನಸ್ವೀಫ್, ಅಮಿಷಾ ಹಾಗೂ ಈ ಬಾರಿ ನೀಟ್‌ನಲ್ಲಿ ಅತ್ಯುತ್ತಮ ಸಾದನೆ ಮಾಡಲಿರುವ ಅನಸ್ ರವರು ಮಾರ್ಗದರ್ಶನ ನೀಡಿದರು. ಫಿಸಿಕ್ಸ್ ನಲ್ಲಿ ಉನ್ನತ ಪದವಿ ಮಾಡುತ್ತಿರುವ ಸೆಂಟರಿನ ವಿದ್ಯಾರ್ಥಿನಿ ಅಮ್ನಾಝ್ ರವರು ಸಬ್ಜೆಕ್ಟ್ ಕಲಿಯುವ ಸುಲಭ ವಿದಾನದ ಬಗ್ಗೆ ಮಾಹಿತಿ ನೀಡಿದರು.

ಮುಂದಿನ ದಿನದಲ್ಲಿ ನೀಟ್‌ನಲ್ಲಿ 400 ಅಂಕಕ್ಕಿಂತ ಹೆಚ್ಚು ಬರುವ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತ ಕೋಚಿಂಗ್ ನೀಡುವ ಹೊಸ ಯೋಜನೆಯನ್ನು ಈ ಸಂದರ್ಭ ಸೆಂಟರಿನ ಟ್ರಸ್ಟಿ ಇಮ್ತಿಯಾಝ್ ರವರು ವಿವರಿಸಿದರು.

ಶಿಕ್ಷಣ

ಮಹಾರಾಷ್ಟ್ರದಲ್ಲಿ ಶಾಲಾ ಮಕ್ಕಳ ಕರಡು ಪಠ್ಯಕ್ರಮದಲ್ಲಿ ಭಗವದ್ಗೀತೆ ಮತ್ತು ಮನುಸ್ಮೃತಿಯನ್ನು ಸೇರಿಸಿರುವುದು ವಿವಾದಕ್ಕೆ ಕಾರಣವಾಗಿದೆ!

ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಲ್ಪಸಂಖ್ಯಾತರ ಮೇಲೆ ಪ್ರತಿದಿನ ದಾಳಿಗಳು ನಡೆಯುತ್ತಲೇ ಇವೆ. CAAಯಂತಹ ಕಠಿಣ ಕಾನೂನುಗಳನ್ನು ತರುವ ಮೂಲಕ ಭಾರತದಿಂದ ಅಲ್ಪಸಂಖ್ಯಾತರನ್ನು ಪ್ರತ್ಯೇಕಿಸಲು ಬಿಜೆಪಿ ಪ್ರಯತ್ನಿಸುತ್ತಿದೆ.

ಇನ್ನೊಂದೆಡೆ ಹಿಂದೂ ಸಂಘಟನೆಗಳನ್ನು ಬಲಪಡಿಸುವ ಮೂಲಕ ದೇಶವನ್ನು ಧಾರ್ಮಿಕ ಉಗ್ರರಿಗೆ ನೀಡುವ ಪ್ರಯತ್ನಗಳು ನಡೆಯುತ್ತಿವೆ. ಅದರಂತೆ ಬಿಜೆಪಿಯು ಹಿಂದೂಗಳನ್ನು ಸರ್ಕಾರದ ವಿವಿಧ ಸಂಘಟನೆಗಳಿಗೆ ಸೇರಿಸಿಕೊಳ್ಳುವ ಯೋಜನೆಯೊಂದಿಗೆ ಕೆಲಸ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. ಇಂತಹ ಪ್ರವೇಶಿಗಳು ಶಾಲಾ ಪಠ್ಯಕ್ರಮದಲ್ಲಿ ಹಿಂದೂ ವಿಚಾರಗಳನ್ನು ಹೇರುತ್ತಿದ್ದಾರೆ ಎಂದು ನಂಬಲಾಗುತ್ತಿದೆ.

ಆ ಮೂಲಕ ಮಹಾರಾಷ್ಟ್ರದಲ್ಲಿ ಶಾಲಾ ಮಕ್ಕಳ ಕರಡು ಪಠ್ಯಕ್ರಮದಲ್ಲಿ ಭಗವದ್ಗೀತೆ ಮತ್ತು ಮನುಸ್ಮೃತಿಯನ್ನು ಸೇರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಮಹಾರಾಷ್ಟ್ರದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಆಧರಿಸಿ 3ನೇ ತರಗತಿಯಿಂದ 12ನೇ ತರಗತಿವರೆಗಿನ ಶಾಲಾ ಮಕ್ಕಳಿಗಾಗಿ ಕರಡು ಪಠ್ಯಕ್ರಮವನ್ನು ಪ್ರಕಟಿಸಲಾಗಿದೆ.

ಪಠ್ಯಕ್ರಮದಲ್ಲಿ ಧಾರ್ಮಿಕ ಗ್ರಂಥಗಳು, ಆರ್ಯಭಟ, ಸಾಗಾ, ಯೋಗ, ಭಾರತೀಯ ಋಷಿಗಳು ಇತ್ಯಾದಿ ವಿಭಾಗಗಳಿವೆ. ಪುರಾತನ ಸಂಪ್ರದಾಯವನ್ನು ಉಳಿಸುವ ಹೆಸರಿನಲ್ಲಿ ಭಗವದ್ಗೀತೆ, ಮನುಸ್ಮೃತಿ ಮತ್ತು ಹಿಂದೂ ಸಂತ ರಾಮದಾಸ್ ಸ್ವಾಮಿ ಮುಂತಾದವರಿಗೆ ಸಂಬಂಧಿಸಿದ ವಿಷಯಗಳನ್ನು ಅಳವಡಿಸಲಾಗುವುದು ಎಂದೂ ಹೇಳಲಾಗುತ್ತಿದೆ.

ಮಹಾರಾಷ್ಟ್ರ ಸರ್ಕಾರದ ಈ ಘೋಷಣೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕುರಿತು ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ ಪ್ರಕಟಣೆ ಹೊರಡಿಸಿದ್ದು, ಅಂತಿಮ ಪಠ್ಯಕ್ರಮ ಸಿದ್ಧಪಡಿಸುವ ಮುನ್ನ ಪಠ್ಯಕ್ರಮವನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದೆ.

ಶಿಕ್ಷಣ

ರಾಜಸ್ಥಾನದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.

ಹೇಮಲತಾ ಭೈರ್ವಾ, ರಾಜಸ್ಥಾನದ ಬರನ್ ಜಿಲ್ಲೆಯ ಕಿಶನ್‌ಗಂಜ್ ಪ್ರದೇಶದ ಲಕ್ಡಾಯ್ ಗ್ರಾಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ಜನವರಿ 26 ರಂದು ಸರಸ್ವತಿ ದೇವಿಯ ಫೋಟೋ ವಿಚಾರವಾಗಿ ಅವರಿಗೂ ಸ್ಥಳೀಯರಿಗೂ ವಿವಾದ ಹುಟ್ಟಿಕೊಂಡಿದೆ. ಅಂದು ಕಾರ್ಯಕ್ರಮದ ವೇದಿಕೆಯಲ್ಲಿ ಮಹಾತ್ಮ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸರಸ್ವತಿ ದೇವಿಯ ಭಾವಚಿತ್ರ ಹಾಕಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಆಗ ಶಿಕ್ಷಕಿ ಹೇಮಲತಾ ಭೈರ್ವಾ, ಇಬ್ಬರು ನಾಯಕರ ಜೊತೆ ಸರಸ್ವತಿ ದೇವಿಯ ಫೋಟೋ ಹಾಕಲು ನಿರಾಕರಿಸಿದ್ದಾರೆ. ಇದರಿಂದ ಎರಡೂ ಕಡೆಯವರ ನಡುವೆ ವಾಗ್ವಾದ ನಡೆದಿದೆ. ಈ ಸಂದರ್ಭದಲ್ಲಿ ಕುಪಿತಗೊಂಡ ಶಿಕ್ಷಕಿ, “ಸರಸ್ವತಿ ದೇವಿ ಶಿಕ್ಷಣಕ್ಕೆ ಏನನ್ನೂ ಕೊಡುಗೆ ನೀಡಲಿಲ್ಲ” ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ, ಮೊನ್ನೆ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.

ರಾಜಸ್ಥಾನದ ಶಿಕ್ಷಣ ಸಚಿವ ಮದನ್ ದಿಲಾವರ್ ಅವರು ಕಳೆದ ಗುರುವಾರ ಬರನ್ ಜಿಲ್ಲೆಯ ಕಿಶನ್‌ಗಂಜ್ ಪ್ರದೇಶದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಆ ಸಮಯದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ‘ಶಾಲೆಗಳಲ್ಲಿ ಸರಸ್ವತಿ ದೇವಿಯ ಪಾತ್ರವೇನು ಎಂದು ಕೆಲವರು ಕೇಳುತ್ತಿದ್ದಾರೆ. ಹೇಳಿದವರು ಯಾರೇ ಆದರೂ ಅವರನ್ನು ಅಮಾನತು ಮಾಡುತ್ತೇನೆ’ ಎಂದು ಹೇಳಿ ಹೋಗಿದ್ದಾರೆ.

ಶಿಕ್ಷಣ ಸಚಿವರ ಈ ಘೋಷಣೆಯ ನಂತರ ಬರನ್ ಜಿಲ್ಲಾ ಪ್ರಾಥಮಿಕ ಶಿಕ್ಷಣಾಧಿಕಾರಿಗಳು ಶಿಕ್ಷಕಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಆರೋಪದ ಬಗ್ಗೆ ಪ್ರಾಥಮಿಕ ತನಿಖೆ ಪೂರ್ಣಗೊಂಡ ಬಳಿಕವೇ ಅಮಾನತು ಆದೇಶ ಹೊರಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಜಿಲ್ಲಾ ಶಿಕ್ಷಣಾಧಿಕಾರಿ, “ಗ್ರಾಮಸ್ಥರೊಂದಿಗೆ ಸಂಧಾನ ಮಾಡಿಕೊಂಡು, ವೇದಿಕೆಯ ಮೇಲೆ ಸರಸ್ವತಿ ದೇವಿಯ ಭಾವಚಿತ್ರ ಹಾಕಿ, ಯಾವುದೇ ಅಡ್ಡಿಯಿಲ್ಲದೆ ಗಣರಾಜ್ಯೋತ್ಸವ ನಡೆಯುವುದನ್ನು ಶಿಕ್ಷಕಿ ಖಚಿತಪಡಿಸಿಕೊಳ್ಳಬಹುದಿತ್ತು. ಬದಲಾಗಿ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ” ಎಂದು ಹೇಳಿದ್ದಾರೆ.   

ಶಿಕ್ಷಣ

ಮಂಗಳೂರು: (ಅಡ್ಡೂರು) ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಕ್ಷೇತ್ರದಲ್ಲಿ ಸಬಲೀಕರಣದ ಉದ್ದೇಶವನ್ನಿಟ್ಟುಕೊಂಡು, ಅದಕ್ಕಾಗಿ ವಿವಿಧ ಕಾರ್ಯ ಯೋಜನೆಗಳನ್ನು ರೂಪಿಸಿಕೊಂಡು ಕಾರ್ಯನಿರ್ವಹಿಸುತ್ತಿರುವ ‘ಅಡ್ಡೂರು ಸೆಂಟ್ರಲ್ ಕಮಿಟಿ’ಯು ಇದೀಗ ಅಡ್ಡೂರು ಗ್ರಾಮದ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿಯನ್ನು ಪ್ರಾರಂಭಿಸಿರುವುದು ನಿಜಕ್ಕೂ ಪ್ರಶಂಸನೀಯ ಎಂದು ಅಬೂ ಅಲ್ಫಾಝ್ ಅಡ್ಡೂರು ಹೇಳಿದ್ದಾರೆ.

ಕಮ್ಯುನಿಟಿ ಸೆಂಟರ್‌ನಲ್ಲಿ ತರಬೇತಿ ಪಡೆಯುವ ವಿದ್ಯಾರ್ಥಿಗಳು, ಪರೀಕ್ಷೆಯ ಸಂದರ್ಭದಲ್ಲಿ ಉತ್ತಮ ಅಂಕಗಳಿಸಬೇಕೆಂಬ ಉದ್ದೇಶದಿಂದ 9ನೇ ತರಗತಿ, 10ನೇ ತರಗತಿ (ಎಸ್‌ಎಸ್‌ಎಲ್‌ಸಿ) ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಂಜೆ 5 ರಿಂದ 8 ಗಂಟೆಯವರೆಗೆ ನುರಿತ ಶಿಕ್ಷಕರಿಂದ ಟ್ಯೂಷನ್ ತರಬೇತಿಯನ್ನು ನೀಡಲಾಗುತ್ತಿದೆ. ಅಡ್ಡೂರು ಆಸುಪಾಸಿನ ಸುಮಾರು ಶೇ.60ರಷ್ಟು ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ. ಇದು ಅಡ್ಡೂರು ಸೆಂಟ್ರಲ್ ಕಮಿಟಿಯ ಕನಸಿನ ಯೋಜನೆಯಾಗಿದೆ.

ಇದಲ್ಲದೇ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ (Incentive Money), ವಿದ್ಯಾರ್ಥಿವೇತನ (Scholarship), ವೃತ್ತಿ ಮಾರ್ಗದರ್ಶನ (Career Guidance), ಸಂಪನ್ಮೂಲ ವ್ಯಕ್ತಿಗಳಿಂದ ಸಮಾಲೋಚನೆ (Counseling by resource persons), ಮಾರ್ಗದರ್ಶನ (Guidance) ಮುಂತಾದ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ.

ಅಕ್ಷರದ ಅರಿವಿನ ಜ್ಞಾನವನ್ನು ನೀಡಿ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಣವು ಪ್ರಮುಖ ಪಾತ್ರ ವಹಿಸುತ್ತದೆ. ಅಂತಹ ಒಂದು ಉತ್ತಮವಾದ ಕಾರ್ಯಕ್ಕೆಅಡ್ಡೂರು ಸೆಂಟ್ರಲ್ ಕಮಿಟಿ ಮುಂದಾಗಿರುವುದು ಶ್ಲಾಘನೀಯ. ಮುಂದೆ ಇನ್ನಷ್ಟು ಶೈಕ್ಷಣಿಕ ಕ್ರಾಂತಿಯು ತಮ್ಮಿಂದ ಅಡ್ಡೂರು ಗ್ರಾಮದಲ್ಲಿ ನಡೆಯಲಿ ಎಂದು ಆಶಿಸುತ್ತೇನೆ ಎಂದು ಅಬೂ ಅಲ್ಫಾಝ್ ಅಡ್ಡೂರು ಹೇಳಿದ್ದಾರೆ.