Uncategorized Archives » Dynamic Leader
October 22, 2024
Home Archive by category Uncategorized

Uncategorized

Uncategorized

ಮಣಿಪುರಕ್ಕೆ ಒಮ್ಮೆಯೂ ಭೇಟಿ ನೀಡದ ಮೋದಿ, ಮಣಿಪುರ ಗಲಭೆ ಆರಂಭವಾಗಿ ಮೊನ್ನೆಗೆ (03.05.2024) ಒಂದು ವರ್ಷ ಪೂರೈಸಿದೆ.

ನಾವು ದೇಶವನ್ನು ಮುಂದೆ ಕೊಂಡೊಯ್ಯುತ್ತಿದ್ದೇವೆ, ಮಹಿಳಾ ಸಬಲೀಕರಣಕ್ಕೆ ಪ್ರಾಮುಖ್ಯತೆ ನೀಡುತ್ತಿದ್ದೇವೆ ಎಂದು ತೋರ್ಪಡಿಸಿಕೊಳ್ಳುತ್ತಿರುವ ಮೋದಿ, ವಾಸ್ತವವಾಗಿ ಅದರ ಒಂದು ಭಾಗವನ್ನೂ ಮಾಡಲಿಲ್ಲ ಎಂಬುದು ಮಣಿಪುರ ಘಟನೆ ಬಹಿರಂಗಪಡಿಸಿದೆ.

ಕಳೆದ ವರ್ಷ ಮೇ 3 ರಂದು ಪ್ರಾರಂಭವಾದ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಸಂಘರ್ಷದಲ್ಲಿ ಇದುವರೆಗೆ 230ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 60,000ಕ್ಕೂ ಹೆಚ್ಚು ಜನರು ತಮ್ಮ ಮನೆಗಳನ್ನು ತೊರೆದು ನಿರಾಶ್ರಿತರಾಗಿದ್ದಾರೆ. ಸುಮಾರು 4000 ಮನೆಗಳು ಸುಟ್ಟು ಕರಕಲಾಗಿವೆ.

ಗಲಭೆ ಆರಂಭವಾಗಿ ಒಂದು ವರ್ಷ ಕಳೆದರೂ ಇನ್ನೂ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಅದಕ್ಕೆ ಮಣಿಪುರದ ಆಡಳಿತಾರೂಢ ಬಿಜೆಪಿ ಮತ್ತು ಒಕ್ಕೂಟ ಬಿಜೆಪಿ ಸರ್ಕಾರವು ಹಲವು ರೀತಿಯಲ್ಲಿ ಕಾರಣವಾಗಿವೆ. ಮಣಿಪುರಕ್ಕೆ ಮೋದಿ ಭೇಟಿ ಮಾಡದಿರುವುದು ಕೂಡ ಕಾರಣವೆ.

ದೇಶದ ಪ್ರಧಾನಿಯಾಗಿರುವ ವ್ಯಕ್ತಿ, ದೇಶದ ಅಭಿವೃದ್ಧಿಯ ವಿಚಾರದಲ್ಲಿ ಎಷ್ಟು ಹೆಮ್ಮೆಪಡುತ್ತಾರೋ ಅದಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿ, ದೇಶದಲ್ಲಿ ಉಂಟಾಗಬಹುದಾದ ಸಮಸ್ಯೆಗಳನ್ನು ಪರಿಹರಿಸುವತ್ತ ಗಮನಹರಿಸುವುದು ಕೂಡ ಅಷ್ಟೇ ಅಗತ್ಯವಾಗಿದೆ.

ಆದರೆ ಭಾರತದ ಪ್ರಧಾನಿ, ಬೇರೆ ಬೇರೆ ದೇಶಗಳಿಗೆ ಪ್ರವಾಸ ಮಾಡುವುದು, ಚುನಾವಣೆಗೆ ಮತ ಸಂಗ್ರಹಿಸಲು ಊರಿಂದ ಊರಿಗೆ ಅಲೆದಾಡುವುದು, ವಿರೋಧಪಕ್ಷಗಳನ್ನು ಹಿಯ್ಯಾಳಿಸಿ ದ್ವೇಷ ಭಾಷಣ ಮಾಡುವುದರಲ್ಲೇ ಹೆಚ್ಚು ಗಮನ ಹರಿಸುತ್ತಿದ್ದಾರೆ.

ಮಣಿಪುರ ಗಲಭೆ ಆರಂಭವಾದಾಗಿನಿಂದ ಮೋದಿ ಅಧಿಕೃತ ಪ್ರವಾಸಗಳಲ್ಲಿ ಭಾರತದ ವಿವಿಧ ರಾಜ್ಯಗಳಿಗೆ 162 ಬಾರಿ ಭೇಟಿ ನೀಡಿದ್ದಾರೆ. ಆದಾಗ್ಯೂ, ಆ 162ರಲ್ಲಿ ಮಣಿಪುರಕ್ಕೆ ಒಂದು ಬಾರಿಯೂ ಮೀಸಲಿಡಲು ಅವರಿಂದ ಸಾದ್ಯವಾಗಿಲ್ಲ. ಆದರೆ ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ಈ ವರ್ಷ 8 ಬಾರಿ, ಮೋದಿ ತವರು ಗುಜರಾತ್ ಗೆ 10 ಬಾರಿ ಹಾಗೂ ಸಂಸತ್ತಿನಲ್ಲಿ ಅತಿ ಹೆಚ್ಚು ಲೋಕಸಭಾ ಸದಸ್ಯರನ್ನು ಹೊಂದಿರುವ ಉತ್ತರ ಪ್ರದೇಶಕ್ಕೆ 17 ಬಾರಿ ಭೇಟಿ ನೀಡಿದ್ದಾರೆ.

ಇವುಗಳಲ್ಲದೆ ಮೋದಿಯವರು ಭಾರತ ಬಿಟ್ಟು 14 ಬಾರಿ ವಿದೇಶ ಪ್ರವಾಸ ಮಾಡಿದ್ದಾರೆ. ಒಮ್ಮೆ ಅವರು ದೇವಾಲಯದ ಉದ್ಘಾಟನೆಗೆಂದು ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ಹೋಗಿದ್ದರು. ಇದರಿಂದ ಜನರ ಬಗ್ಗೆ ಯೋಚಿಸದ ಮೋದಿಯವರ ಕಾರ್ಯವೈಖರಿಯಿಂದ ಕಂಗೆಟ್ಟಿರುವ ಮಣಿಪುರದ ಜನತೆ ಮೋದಿ ನಾಪತ್ತೆ ಎಂಬ ಪೋಸ್ಟರ್‌ಗಳನ್ನು ಅಂಟಿಸುವ ಮಟ್ಟಕ್ಕೆ ಹೋಗಿದ್ದಾರೆ.

ಆ ಪೋಸ್ಟರ್‌ನಲ್ಲಿ, ಹೆಸರು: ನರೇಂದ್ರ ಮೋದಿ; ಎತ್ತರ: 5 ಅಡಿ 6 ಇಂಚು; ಎದೆ: 56 ಇಂಚು; ದೃಷ್ಟಿಹೀನರು; ಕಿವುಡು, ಕಳೆದ ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಈ ಕುರಿತು ನೆಟ್ಟಿಗರು, ಪೋಸ್ಟರ್‌ನಲ್ಲಿರುವ ಮಾಹಿತಿ ಹಾಸ್ಯಾಸ್ಪದವಾಗಿದ್ದರೂ, ಅದರಲ್ಲಿ ಉಲ್ಲೇಖಿಸಿರುವಂತೆ ಪ್ರಧಾನಿ ಮೋದಿಯವರ ನಡೆ ಅತ್ಯಂತ ಖಂಡನೀಯ ಎಂದು ಹೇಳುತ್ತಿದ್ದಾರೆ.

Uncategorized

ಬೆಳಗಾವಿ: ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೃಣಾಳ್ ಹೆಬ್ಬಾಳ್ಕರ್ ಅವರನ್ನು ಗೆಲ್ಲಿಸಿಕೊಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತದಾರರಲ್ಲಿ ಮನವಿ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯೇತರ ಪಕ್ಷಗಳು ದಲಿತರ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ನೀಡಲಿದೆ ಎಂದು ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ. ಕಾಂಗ್ರೆಸ್ ಎಂದಿಗೂ ಸಂವಿಧಾನಕ್ಕೆ ವಿರುದ್ಧವಾಗಿ ಕೆಲಸ ಮಾಡದೇ, ಸಾಮಾಜಿಕ ನ್ಯಾಯದ ಪರವಾಗಿದೆ ಎನ್ನುವುದು ಇಡೀ ವಿಶ್ವಕ್ಕೆ ಗೊತ್ತಿದೆ. ಮೋದಿಯವರ ಮಾತು ನಂಬಲು ಜನ ಮೂರ್ಖರಲ್ಲ ಎಂದು ಹೇಳಿದರು.

ನಾವು ಸರ್ಕಾರಿ ನೌಕರರ ಸಂಬಳವನ್ನು ಎಂದಿಗೂ ನಿಲ್ಲಿಸಿಲ್ಲ. ಅಭಿವೃದ್ಧಿ ಜೊತೆಗೆ ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಗ್ಯಾರಂಟಿಗಳಿಗೆ ರೂ.52,009 ಕೋಟಿ, ರೂ.1,20,000 ಕೋಟಿ ಅಭಿವೃದ್ಧಿಗೆ ನೀಡಲಾಗಿದೆ. ಅನ್ನಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಶಕ್ತಿ ಹಾಗೂ ಯುವನಿಧಿ ಗ್ಯಾರಂಟಿಗಳನ್ನು ಜನರಿಗೆ ನೀಡಲಾಗಿದೆ. ಸರ್ಕಾರಿ ಅಧಿಕಾರಿಗಳಿಗೆ ಸಂಬಳ ಕೊಡಲು ದುಡ್ಡಿಲ್ಲ. ಕರ್ನಾಟಕ ಸರ್ಕಾರದ ಖಜಾನೆ ಖಾಲಿಯಾಗಿದೆ ಎಂಬುದು ಅಪ್ಪಟ ಸುಳ್ಳು ಎಂದು ಹೇಳಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲಗಳನ್ನು ಪೂರ್ಣವಾಗಿ ಮನ್ನಾ ಮಾಡಲಾಗುವುದು. 25 ಲಕ್ಷದವರೆಗೆ ಆರೋಗ್ಯ ವಿಮೆ ಸೌಲಭ್ಯ ನೀಡಲಾಗುವುದು. ಸಾಮಾಜಿಕ ನ್ಯಾಯ ತರಲು ದೇಶದಾದ್ಯಂತ ಜಾತಿ ಸಮೀಕ್ಷೆಯನ್ನು ಕೈಗೊಳ್ಳಲಾಗುವುದು. ಆದ್ದರಿಂದ ಜನರಿಗೆ ಅನುಕೂಲ ಮಾಡಿಕೊಡುವ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕೇ? ಅಥವಾ ಸುಳ್ಳು ಹೇಳುವ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರಬೇಕೇ? ಎಂಬುದನ್ನು ಯೋಚಿಸಿ ನಿರ್ಧರಿಸಿ ಎಂದು ಹೇಳಿದರು.

ಚುನಾವಣೆಯ ಮೂಲಕ ಜನತೆ ಕೊಡುವ ತೀರ್ಪು ದೇಶದ ಭವಿಷ್ಯವನ್ನು ರೂಪಿಸಲಿದೆ. ಯಾವ ಪಕ್ಷ ಅಧಿಕಾರದಲಿದ್ದರೆ ಈ ದೇಶದ ದಲಿತರ, ಹಿಂದುಳಿದವರ, ಅಲ್ಪಸಂಖ್ಯಾತರ ಅಭಿವೃದ್ಧಿಯಾಗುತ್ತದೆ? ದೇಶದ ಸರ್ವತೋಮುಖ ಅಭಿವೃದ್ಧಿಗೆ ಯಾರು ಅಧಿಕಾರದಲ್ಲಿರಬೇಕೆಂದು ಜನರು ತೀರ್ಮಾನ ಮಾಡಬೇಕಾಗುತ್ತದೆ.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಇಡಿ ದೇಶದ ರೈತರ ಸಾಲ ಮನ್ನಾ ಮಾಡಿದ್ದರು. ಅವರು ಈ ದೇಶದ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದರು. ಆಹಾರ ಭದ್ರತಾ ಕಾಯ್ದೆಯನ್ನು, ಉದ್ಯೋಗ ಖಾತ್ರಿ ಅಧಿನಿಯಮ, ಮಾಹಿತಿ ಹಕ್ಕು ಅಧಿನಿಯಮ, ಶಿಕ್ಷಣದ ಹಕ್ಕು ಇವುಗಳನ್ನು ಜಾರಿಗೆ ತಂದವರು ಮನಮೋಹನ್ ಸಿಂಗ್ ಅವರು. ಸಾಮಾನ್ಯ ಜನರ ಸಮಸ್ಯೆಗಳನ್ನು ಬಗೆಹರಿಸುವ ಕಾನೂನುಗಳು ಇವು ಎಂದು ಅರ್ಥ ಮಡಿಕೊಳ್ಳಬೇಕು. ಆಹಾರ ಭದ್ರತಾ ಕಾಯ್ದೆ ಇಲ್ಲದೇ ಹೋಗಿದ್ದರೆ ಬಡವರಿಗೆ ಉಚಿತ ಅಕ್ಕಿ ಕೊಡಲು ಸಾಧ್ಯವಾಗುತ್ತಿರಲಿಲ್ಲ. ಇದನ್ನು ಜಾರಿ ಮಾಡಿದ್ದು ನರೇಂದ್ರ ಮೋದಿ ಅಲ್ಲ. ಅದರ ಶ್ರೇಯಸನ್ನು ಪಡೆಯಲು ಮೋದಿ ಅವರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

Uncategorized

ಬೆಂಗಳೂರು: ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್‌ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ.

ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಿಕೊಳ್ಳಲು ಕಳಿಸಿಕೊಡಬೇಕು ಎಂದು‌ ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.

ಬಂಧಿಸಿರುವುದು ಮಧ್ಯಪ್ರದೇಶದ ಸರ್ಕಾರವಾದರೂ ಈ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮೆದುಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಎನ್ನುವುದು ಸ್ಪಷ್ಟ ಎಂದು ಹೇಳಿದ್ದಾರೆ.

ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು. ಶಾಂತಿ-ಸುವ್ಯವಸ್ಥೆಯ‌ ಕಾಳಜಿಯನ್ನು ಕೇಂದ್ರ ಸರ್ಕಾರ ಹೊಂದಿದ್ದರೆ ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸಬೇಕೇ ಹೊರತು ಈ ರೀತಿ ದಮನ-ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ ಎಂದು ಕಿಡಿಕಾರಿದ್ದಾರೆ.

ಕೇಂದ್ರದಲ್ಲಿ ಇರಲಿ, ರಾಜ್ಯಗಳಲ್ಲಿ ಇರಲಿ‌ ಬಿಜೆಪಿ ಕೈಗೆ ಅಧಿಕಾರ ಬಂದ ಕೂಡಲೇ ಅವರು ಮೊದಲು ದಂಡ ಪ್ರಯೋಗ ಮಾಡುವುದು ಅನ್ನದಾತರ ಮೇಲೆ‌ ಎನ್ನುವುದಕ್ಕೆ ಇತಿಹಾಸ ಸಾಕ್ಷಿ. ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಸರ್ಕಾರ, ಗೊಬ್ಬರ ಕೇಳಿದ್ದ ರೈತರನ್ನು ನಿರ್ದಯವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಗುಂಡಿಕ್ಕಿ ಕೊಂದಿತ್ತು ಎಂದು ಹೇಳಿದ್ದಾರೆ

ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ದೆಹಲಿ ಮತ್ತು ಉತ್ತರಪ್ರದೇಶಲ್ಲಿ ಪ್ರತಿಭಟನಾನಿರತ ರೈತರ ಮೇಲೆ ನಡೆಸಿದ್ದ ದೌರ್ಜನ್ಯದಲ್ಲಿ ಹಲವಾರು ರೈತರು ಸಾವಿಗೀಡಾಗಿದ್ದರು. ನರೇಂದ್ರ ಮೋದಿ ಅವರ ಸರ್ಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ‌ ಮಾಡುವುದೇ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.

Uncategorized

ದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದೆ. ದೆಹಲಿ ಸರ್ಕಾರದ ಮದ್ಯ ನೀತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ಇಲಾಖೆ ಅಕ್ರಮ ಹಣ ವರ್ಗಾವಣೆ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಪ್ರಕರಣ ದಾಖಲಿಸಿದೆ. ಪ್ರಕರಣದಲ್ಲಿ ಹಾಜರಾಗುವಂತೆ ಹಲವು ಬಾರಿ ನೋಟಿಸ್ ನೀಡಿದರೂ ಕೇಜ್ರಿವಾಲ್ ಹಾಜರಾಗಲಿಲ್ಲ.

ಈ ಹಿನ್ನಲೆಯಲ್ಲಿ, ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರ ಮನೆ ಮೇಲೆ ಜಾರಿ ಇಲಾಖೆ ಇಂದು ದಾಳಿ ನಡೆಸುತ್ತಿದೆ. ಅದೇ ರೀತಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕರ ಮನೆ ಮೇಲೂ ದಾಳಿ ನಡೆಸಲಾಗುತ್ತಿದೆ.

ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್

ಇದಕ್ಕೂ ಮುನ್ನ ಇಂದು ಬೆಳಗ್ಗೆ 10 ಗಂಟೆಗೆ ಜಾರಿ ಇಲಾಖೆಯನ್ನು ಬಹಿರಂಗಪಡಿಸುತ್ತೇವೆ ಎಂದು ಆಮ್ ಆದ್ಮಿ ಪಕ್ಷದ ಸಚಿವೆ ಅತಿಶಿ ಮರ್ಲೆನಾ ಹೇಳಿದ್ದ ಹಿನ್ನಲೆಯಲ್ಲಿ, ಇಂದು ಪಕ್ಷದ ಪದಾಧಿಕಾರಿಗಳ ಮನೆ ಮೇಲೆ ಜಾರಿ ಇಲಾಖೆ ದಾಳಿ ನಡೆಸಿರುವ ಘಟನೆ ಸಂಚಲನ ಮೂಡಿಸಿದೆ.

ಆಪರೇಷನ್ ಕಮಲ ನಡೆಸುವ ಹೊಣೆಯನ್ನು ಬಿಜೆಪಿ ತನಿಖಾ ಸಂಸ್ಥೆಗಳಿಗೆ ವಹಿಸಿದೆ ಎಂದು ತಟಸ್ಥವಾದ ಮಾಧ್ಯಮಗಳು ವಿಮರ್ಶಿಸುತ್ತಿದೆ. ಮತ್ತು ಕೆಲಸ ಮಾಡದ ಮಾಧ್ಯಮಗಳಿಗೂ ಈ ಯೋಜನೆಯನ್ನು ವಿಸ್ತರಿಸಲಾಗಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.