ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಆರ್‌ಟಿಐ ಕಾರ್ಯಕರ್ತ Archives » Dynamic Leader
October 16, 2024
Home Posts tagged ಆರ್‌ಟಿಐ ಕಾರ್ಯಕರ್ತ
ದೇಶ

ಚೆನ್ನೈ: ಸನಾತನ ಧರ್ಮದ ಕುರಿತು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರ ಹೇಳಿಕೆಗೆ ಸಂಬಂಧಿಸಿದಂತೆ, ಮಾಹಿತಿ ಹಕ್ಕು ಕಾಯ್ದೆಯಡಿ ವಿವರಗಳನ್ನು ಕೋರಿ ಸಲ್ಲಿಸಿದ ಅರ್ಜಿಗೆ 8 ವಾರಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ರಾಜಭವನದ ಸಾರ್ವಜನಿಕ ಮಾಹಿತಿ ಮೇಲ್ಮನವಿ ಅಧಿಕಾರಿಗೆ ಮದ್ರಾಸ್ ಹೈಕೋರ್ಟ್ ಸೂಚಿಸಿದೆ.

ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಭಾಗವಹಿಸುತ್ತಿದ್ದ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ, ಸನಾತನ ಧರ್ಮದ ಶ್ರೇಯಸ್ಸನ್ನು ವಿವರಿಸುತ್ತಾ, ಅದನ್ನು ಅನುಸರಿಸುವುದು ಮುಖ್ಯ ಎಂದು ನಿರಂತರವಾಗಿ ಹೇಳುತ್ತಿದ್ದರು. ಸನಾತನ ಧರ್ಮದ ಉಲ್ಲೇಖಗಳ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ, ಚೆನ್ನೈ ಮೂಲದ ಹಿರಿಯ ವಕೀಲ ಎಸ್.ದುರೈಸ್ವಾಮಿ ಅವರು ರಾಜ್ಯಪಾಲ ಆರ್.ಎನ್.ರವಿ ಅವರಿಗೆ ಅರ್ಜಿ ಸಲ್ಲಿಸಿ, ಸನಾತನ ಧರ್ಮದ ಬಗ್ಗೆ ಮಾಹಿತಿ ಒದಗಿಸುವಂತೆ ಕೋರಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ತಮಿಳುನಾಡು ರಾಜಭವನ ಕಚೇರಿಯ ಮಾಹಿತಿ ಅಧಿಕಾರಿ, ‘ವಕೀಲರು ಎತ್ತಿರುವ ಪ್ರಶ್ನೆಗಳು ಆರ್‌ಟಿಐ ಕಾಯ್ದೆಯಡಿ ಬರುವುದಿಲ್ಲ. ಅದಕ್ಕೆ ಸಂಬಂಧಪಟ್ಟ ಮಾಹಿತಿ ತಮ್ಮ ಕಛೇರಿಯಲ್ಲಿ ಲಭ್ಯವಿಲ್ಲ’ ಎಂಬ ಮಾಹಿತಿಯನ್ನು ಒದಗಿಸಿದ್ದರು.

ಸಾರ್ವಜನಿಕ ಮಾಹಿತಿ ಅಧಿಕಾರಿ ನೀಡಿದ ಅಪೂರ್ಣವಾದ ಮಾಹಿತಿಯ ವಿರುದ್ಧ, ವಕೀಲ ಎಸ್.ದುರೈಸ್ವಾಮಿ ಅವರು ಕಳೆದ ವರ್ಷ ನವೆಂಬರ್ 3 ರಂದು ರಾಜಭವನದ ಸಾರ್ವಜನಿಕ ಮಾಹಿತಿ ಮೇಲ್ಮನವಿ ಅಧಿಕಾರಿಗೆ ಸಕ್ಷನ್ 19(1) ರಡಿಯಲ್ಲಿ ಮೇಲ್ಮನವಿ ಸಲ್ಲಿಸಿದರು.

ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ

 ಅರ್ಜಿಯಲ್ಲಿ, ‘ರಾಜಕೀಯ ವ್ಯವಸ್ಥೆಯಲ್ಲಿ ಉನ್ನತ ಸ್ಥಾನದಲ್ಲಿರುವ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ಸೂಕ್ತ ಉತ್ತರ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಅವರು ಸನಾತನ ಧರ್ಮದ ಬಗ್ಗೆ ಮಾತನಾಡಲು ಆಧಾರವೇನು ಎಂಬುದನ್ನು ತಿಳಿಸಬೇಕು’ ಎಂದು ಕೋರಿದ್ದರು.

ಈ ಮೇಲ್ಮನವಿಯ ಮೇಲೆ ರಾಜಭವನದ ಸಾರ್ವಜನಿಕ ಮಾಹಿತಿ ಮೇಲ್ಮನವಿ ಅಧಿಕಾರಿ ಕ್ರಮ ಕೈಗೊಳ್ಳದ ಕಾರಣ, ವಕೀಲ ದುರೈಸ್ವಾಮಿ ಅವರು ಮದ್ರಾಸ್ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದರು. ನ್ಯಾಯಮೂರ್ತಿ ಎಂ.ತಂಡಪಾಣಿ ಅವರ ಮುಂದೆ ಪ್ರಕರಣ ವಿಚಾರಣೆಗೆ ಬಂದಿತ್ತು.ಅರ್ಜಿದಾರರ ಪರವಾಗಿ ವಕೀಲ ಇಳಂಗೋವನ್ ವಾದ ಮಂಡಿಸಿದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ‘ವಕೀಲ ದುರೈಸ್ವಾಮಿ ಅವರ ಮೇಲ್ಮನವಿ ಕುರಿತು ರಾಜಭವನದ ಸಾರ್ವಜನಿಕ ಮಾಹಿತಿ ಮೇಲ್ಮನವಿ ಅಧಿಕಾರಿ 8 ವಾರಗಳಲ್ಲಿ ತೀರ್ಮಾನ ಕೈಗೊಳ್ಳಬೇಕು’ ಎಂದು ಆದೇಶಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದ್ದಾರೆ.

The Madras High Court has directed the appellant authority of Tamil Nadu Raj Bhavan to take action against the RTI application seeking an explanation about the Sanatan Dharma quotes used by the Governor during his speeches, within 8 weeks.