ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಇಮ್ರಾನ್ ಖಾನ್ Archives » Dynamic Leader
October 17, 2024
Home Posts tagged ಇಮ್ರಾನ್ ಖಾನ್
ವಿದೇಶ

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ವಿವಿಧ ಭ್ರಷ್ಟಾಚಾರ ಪ್ರಕರಣಗಳಲ್ಲಿ ಬಂಧಿತರಾಗಿ ಅಡಿಯಾಲಾ ಜೈಲಿನಲ್ಲಿದ್ದಾರೆ. ಅವರ ವಿರುದ್ಧದ ಪ್ರಕರಣಗಳ ವಿಚಾರಣೆ ಪೂರ್ಣಗೊಂಡು ಕಾಲಕಾಲಕ್ಕೆ ತೀರ್ಪುಗಳು ಹೊರಬೀಳುತ್ತಿವೆ.

ಆ ರೀತಿಯಲ್ಲಿ, ಇಸ್ಲಾಂ ಧರ್ಮ ವಿರೋಧಿ ವಿವಾಹ ಪ್ರಕರಣದಲ್ಲಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿಗೆ ನ್ಯಾಯಾಲಯ ಇಂದು ತಲಾ 7 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಬುಶ್ರಾ ಬೀಬಿಯ ಮೊದಲ ಪತಿ ಖಾವರ್ ಮನೇಕಾ ಪ್ರಕರಣವನ್ನು ದಾಖಲಿಸಿದ್ದರು. ಮರುಮದುವೆಗಾಗಿ ಕಡ್ಡಾಯ ಕಾಯುವ ಅವಧಿ (ಇದ್ದತ್) ಎಂಬ ಇಸ್ಲಾಮಿಕ್ ಪದ್ಧತಿಯನ್ನು ಉಲ್ಲಂಘಿಸಿದ್ದಾರೆ ಎಂದು ಅರ್ಜಿಯಲ್ಲಿ ಅವರು ಆರೋಪಿಸಿದ್ದರು. ಮದುವೆಗೆ ಮುನ್ನ ಅಕ್ರಮ ಸಂಭೋಗ ಕಲ್ಲೆಸೆಯುವಂಥ ಅಪರಾಧ ಎಂದೂ ಆರೋಪಿಸಿದ್ದರು.

ನಿನ್ನೆ ಅಡಿಯಾಲಾ ಜೈಲಿನಲ್ಲಿ ಅಂತಿಮ ವಿಚಾರಣೆ ಸುಮಾರು 14 ಗಂಟೆಗಳ ಕಾಲ ನಡೆಯಿತು. ವಿಚಾರಣೆಯ ಕೊನೆಯಲ್ಲಿ, ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿ ಇಬ್ಬರೂ ಇಸ್ಲಾಮಿಕ್ ಪದ್ಧತಿಯನ್ನು ಉಲ್ಲಂಘಿಸಿ ವಿವಾಹವಾಗಿದ್ದಾರೆ ಎಂಬುದು ದೃಢವಾಯಿತು. ಇದರಿಂದಾಗಿ ಇಬ್ಬರಿಗೂ ಶಿಕ್ಷೆಯಾಗಿದೆ.

ದೇಶ

ಶ್ರೀನಗರ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಂಧಿಸಿರುವ ಹಿನ್ನಲೆಯಲ್ಲಿ, ದೇಶದಲ್ಲಿ ಅವರ ಬೆಂಬಲಿಗರು ತೀವ್ರ ರೀತಿಯ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಕಲ್ಲು ತೂರಾಟದಂತಹ ಘಟನೆಗಳಿಂದ ಹಲವೆಡೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ‘ಅಸ್ಥಿರ ಪಾಕಿಸ್ತಾನ ನಮಗೆ ಅಪಾಯಕಾರಿ’ ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಭ್ರಷ್ಟಾಚಾರ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ‘ರೇಂಜರ್ಸ್’ ಎಂದು ಕರೆಯಲ್ಪಡುವ ಗಡಿ ಭದ್ರತಾ ಪಡೆಗಳು ನ್ಯಾಯಾಲಯದ ಕಿಟಕಿಯನ್ನು ಒಡೆದು ಒಳಗೆ ಪ್ರವೇಶಿಸಿ ಕ್ಷಿಪ್ರವಾಗಿ ಬಂಧಿಸಿತು. ಇದರಿಂದ ಕೆರಳಿದ ಇಮ್ರಾನ್ ಬೆಂಬಲಿಗರು, ದೇಶದ ಸೇನೆ ಹಾಗೂ ಐಎಸ್‌ಐ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಏಕಾಏಕಿ ಸೇನಾ ಪ್ರಧಾನ ಕಚೇರಿಯ ಮುಖ್ಯ ದ್ವಾರವನ್ನು ಮುರಿದು ಒಳ ಪ್ರವೇಶಿಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯನ್ನು ನಿಯಂತ್ರಿಸಲು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಲಾಗಿದೆ. ಇದರಿಂದ ಅಲ್ಲಿ ಕೋಲಾಹಲ ಉಂಟಾಗಿತ್ತು.

ಈ ನಿಟ್ಟಿನಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು, “ಅಸ್ಥಿರ ಪಾಕಿಸ್ತಾನ ನಮಗೆ ಅಪಾಯಕಾರಿಯಾಗಿದೆ, ನಮ್ಮ ಉಪಖಂಡದಲ್ಲಿರುವ ದೇಶವು ಶಾಂತಿಯುತ ಮತ್ತು ಸ್ಥಿರವಾಗಿರಬೇಕು. ಆ ದೇಶವು ಚೆನ್ನಾಗಿರಬೇಕೆಂದು ನಾನು ಬಯಸುತ್ತೇನೆ. ನಮ್ಮ ನೆರೆಯ ದೇಶದವರು ಉತ್ತಮ ಮತ್ತು ಶಾಂತಿಯುತ ಜೀವನವನ್ನು ಪಡೆಯುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದರು.