ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಎಫ್.ಎಸ್.ಎಲ್ ವರದಿ Archives » Dynamic Leader
October 24, 2024
Home Posts tagged ಎಫ್.ಎಸ್.ಎಲ್ ವರದಿ
ರಾಜ್ಯ

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವರದಿ ಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಡೆಗೂ ಜನಾಕ್ರೋಶಕ್ಕೆ ಮಣಿದು ಮೂರು ಆರೋಪಿಗಳನ್ನು ಬಂಧಿಸಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.

FSL ವರದಿಯಲ್ಲಿ ಘೋಷಣೆ ಕೂಗಿದ್ದು ಧೃಢಪಟ್ಟ ನಂತರವೇ ಈ ಮೂವರು ಆರೋಪಿಗಳ ಬಂಧನವಾಗಿರುವುದು ಸ್ಪಷ್ಟಾಗಿದ್ದರೂ, ಸರ್ಕಾರ ಇನ್ನೂ FSL ವರದಿ ಬಹಿರಂಗ ಮಾಡದಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಸರ್ಕಾರ ಏನನ್ನೂ ಮುಚ್ಚಿಡುತ್ತಿಲ್ಲ, ಯಾರನ್ನೂ ರಕ್ಷಿಸುತ್ತಿಲ್ಲ ಎನ್ನುವುದಾದರೆ ವರದಿ ಬಹಿರಂಗ ಮಾಡಲು ಹಿಂಜರಿಕೆ ಏಕೆ? ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಸರ್ಕಾರ ಈ ಮೂವರು ಆರೋಪಿಗಳನ್ನು ಬಂಧಿಸಿದರೆ ಸಾಲದು, ಇವರ ಮೇಲೆ IPC ಯ ಸೆಕ್ಷನ್ 124A ಅಡಿ ದೇಶದ್ರೋಹ ಪ್ರಕರಣ ದಾಖಲಿಸಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನೂ ಸಹ ಈ ಪ್ರಕರಣದಲ್ಲಿ ಶಾಮೀಲು ಮಾಡಬೇಕು. ಇದರ ಜೊತೆಗೆ 25 ಜನರಿಗೆ ಪಾಸ್ ನೀಡಿ ಸುಮಾರು ನೂರು ಜನ ಬೆಂಬಲಿಗರಿಗೆ ವಿಧಾನಸೌಧದ ಒಳಗೆ ಪ್ರವೇಶ ನೀಡಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ವಿಚಾರಣೆ ನಡೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

FSL ವರದಿ ಬರುವ ಮುನ್ನವೇ ಮಾಧ್ಯಮಗಳ ಮೇಲೆ ಪಕ್ಷಪಾತ, ವಿಡಿಯೋ ತಿರುಚಿರುವ ಆರೋಪ ಹೊರಿಸಿದರಲ್ಲ ಸಚಿವ ಪ್ರಿಯಾಂಕ್ ಖರ್ಗೆ ಅವರೇ ದೇಶ ವಿಭಜಕರ ಭಜನೆ ಮಾಡುವ ನಿಮಗೆ ಸಚಿವರಾಗಿ, ಶಾಸಕರಾಗಿ ಮುಂದುವರೆಯುವ ಯಾವ ಅರ್ಹತೆ, ನೈತಿಕತೆ, ಯೋಗ್ಯತೆ ಉಳಿದಿದೆ? ದೇಶದ ಸಾರ್ವಭೌಮತೆಯ ಬಗ್ಗೆ ನಿಷ್ಠೆ ಹೊಂದಿರುತ್ತೇನೆ, ರಕ್ಷಣೆ ಮಾಡುತ್ತೇನೆ ಎಂದು ಪ್ರಮಾಣ ವಚನ ಸ್ವೀಕರಿಸಿ ದೇಶದ್ರೋಹಿಗಳ ಪರ ವಹಿಸಿಕೊಳ್ಳುವ ತಾವು ಸಂವಿಧಾನ ದ್ರೋಹಿ, ದೇಶದ್ರೋಹಿ ಅಲ್ಲದೆ ಮತ್ತೇನು? ಎಂದು ಪ್ರಿಯಾಂಕ್ ಖರ್ಗೆ ಅವರನ್ನು ತರಟೆಗೆ ತೆಗೆದುಕೊಂಡಿದ್ದಾರೆ.

FSL ವರದಿ ಬರುವ ಮುನ್ನವೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿಯೇ ಇಲ್ಲ ಅಂತ ನಿಮ್ಮ ಬ್ರದರ್ಸ್ ಪರ ತೀರ್ಪು ಕೊಟ್ಟುಬಿಟ್ಟರಲ್ಲ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ದೇಶದ್ರೋಹಿಗಳನ್ನು ರಕ್ಷಿಸಲು ಹೆತ್ತ ತಾಯಿಯಂತಹ ಭಾರತ ಮಾತೆಗೇ ದ್ರೋಹ ಬಗೆಯುವುದು ಮಹಾ ಪಾಪವಲ್ಲವೇ? ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಇಡೀ ಪ್ರಕರಣ ಕಾಂಗ್ರೆಸ್ ಪಕ್ಷದ ದೇಶಪ್ರೇಮಕ್ಕೆ, ರಾಷ್ಟ್ರ ನಿಷ್ಠೆಗೆ ಒಂದು ಅಗ್ನಿ ಪರೀಕ್ಷೆಯಾಗಿದ್ದು, ಕಾಂಗ್ರೆಸ್ ಸರ್ಕಾರದ ನಡೆಯನ್ನ ಬರೀ ಕರ್ನಾಟಕ ಅಲ್ಲ, ಇಡೀ ದೇಶದ ಜನತೆ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.