ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ತೀರ್ಪು Archives » Dynamic Leader
October 18, 2024
Home Posts tagged ತೀರ್ಪು
ದೇಶ

ನವದೆಹಲಿ: ಖನಿಜ ಸಂಪನ್ಮೂಲಗಳ ಮೇಲೆ ತೆರಿಗೆ ವಿಧಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. 8 ನ್ಯಾಯಾಧೀಶರು ಸರ್ವಾನುಮತದ ತೀರ್ಪು ನೀಡಿದ್ದು, ಒಬ್ಬ ನ್ಯಾಯಾಧೀಶರು ಮಾತ್ರ ಅಸಮ್ಮತಿ ವ್ಯಕ್ತಪಡಿಸಿದ್ದಾರೆ.

ಗಣಿ ಮತ್ತು ಖನಿಜಗಳ ಮೇಲೆ ಕೇಂದ್ರ ಸರ್ಕಾರ ಇಲ್ಲಿಯವರೆಗೆ ವಿಧಿಸಿರುವ ತೆರಿಗೆಯನ್ನು ವಸೂಲಿ ಮಾಡುವ ಕುರಿತು ರಾಜ್ಯ ಸರ್ಕಾರಗಳು ಸುಪ್ರೀಂ ಕೋರ್ಟ್‌ನಿಂದ ಸ್ಪಷ್ಟನೆ ಕೇಳಿತ್ತು. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ 9 ನ್ಯಾಯಾಧೀಶರ ಪೀಠ ಈ ಬಗ್ಗೆ ತನಿಖೆ ನಡೆಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಅದರಲ್ಲಿ ಡಿ.ವೈ.ಚಂದ್ರಚೂಡ್ ಸೇರಿದಂತೆ 8 ನ್ಯಾಯಾಧೀಶರು ಒಂದೇ ರೀತಿಯ ತೀರ್ಪು ನೀಡಿದ್ದಾರೆ. ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಭಿನ್ನಾಭಿಪ್ರಾಯದ ತೀರ್ಪು ನೀಡಿದ್ದಾರೆ.

8 ನ್ಯಾಯಾಧೀಶರು ನೀಡಿದ ತೀರ್ಪನ್ನು ಓದಿ ಹೇಳಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು, “ಸಂವಿಧಾನದ ನಿಬಂಧನೆಗಳ ಅಡಿಯಲ್ಲಿ ಖನಿಜ ಸಂಪನ್ಮೂಲಗಳಿಗೆ ತೆರಿಗೆ ವಿಧಿಸಲು ಸಂಸತ್ತಿಗೆ ಯಾವುದೇ ಅಧಿಕಾರವಿಲ್ಲ. 1989ರಲ್ಲಿ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶರ ಪೀಠವು ಖನಿಜ ಸಂಪನ್ಮೂಲಗಳ ಮೇಲಿನ ರಾಯಧನವು ತೆರಿಗೆ ಎಂದು ಹೇಳಿದ್ದ ತೀರ್ಪು ತಪ್ಪಾಗಿದೆ. ಖನಿಜ ಸಂಪನ್ಮೂಲಗಳು ಮತ್ತು ಖನಿಜ ಸಮೃದ್ಧ ಭೂಮಿಗಾಗಿ ಕೇಂದ್ರ ಸರ್ಕಾರದಿಂದ ಪಡೆಯುವ ರಾಯಧನವನ್ನು ತೆರಿಗೆ ಎಂದು ಪರಿಗಣಿಸಲಾಗದು.

ರಾಜ್ಯ ಸರ್ಕಾರಗಳಿಗೆ ತೆರಿಗೆ ವಿಧಿಸುವ ಹಕ್ಕಿದೆ. ರಾಜ್ಯಗಳಲ್ಲಿರುವ ಖನಿಜ ಸಂಪನ್ಮೂಲಗಳಿಗಾಗಿ ಕೇಂದ್ರ ಸರ್ಕಾರದಿಂದ ಪಡೆಯುವ ರಾಯಧನವನ್ನು ತೆರಿಗೆ ಎಂದು ಪರಿಗಣಿಸಲಾಗದು. ಇದು ಗುತ್ತಿಗೆ ಹಣವೇ. ಗಣಿ, ಖನಿಜಗಳ ಅಭಿವೃದ್ಧಿ ಮತ್ತು ನಿಯಂತ್ರಣ ಕಾಯ್ದೆಗಳು ರಾಜ್ಯಗಳ ಹಕ್ಕುಗಳನ್ನು ನಿರ್ಬಂಧಿಸುವ ಯಾವುದೇ ಷರತ್ತುಗಳನ್ನು ಹೊಂದಿಲ್ಲ” ಎಂದು ಹೇಳಿದ್ದಾರೆ.

ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ನೀಡಿರುವ ತಮ್ಮ ತೀರ್ಪಿನಲ್ಲಿ, “ಖನಿಜ ಸಂಪನ್ಮೂಲಗಳು ಮತ್ತು ಅವು ಇರುವ ಭೂಮಿಗೆ ತೆರಿಗೆ ವಿಧಿಸುವ ಹಕ್ಕು ರಾಜ್ಯ ಸರ್ಕಾರಗಳಿಗೆ ಇಲ್ಲ” ಎಂದು ಹೇಳಿದ್ದಾರೆ.

ರಾಜ್ಯ

ಡಿ.ಸಿ.ಪ್ರಕಾಶ್, ಸಂಪಾದಕರು

1,268 ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಕನ್ನಡ ಸೇರಿದಂತೆ ಇತರ ಭಾಷೆಗಳಿಗೆ ಅನುವಾದಿಸಿ ಪ್ರಕಟಿಸಲಾಗಿದೆ. ಇದೊಂದು ಐತಿಹಾಸಿಕವಾದ ಪ್ರಯತ್ನವಾಗಿದೆ. ಇದು ಕನ್ನಡ ಸೇರಿದಂತೆ ಇತರ ರಾಜ್ಯ ಭಾಷೆಗಳ ಹಕ್ಕುಗಳನ್ನು ಎತ್ತಿಹಿಡಿದಂತಾಗಿದೆ. ಈ ಮಹತ್ತರವಾದ ಕಾರ್ಯವನ್ನು ಮಾಡಲು ಇಷ್ಟು ವರ್ಷಗಳು ಕಾಯಬೇಕಿತ್ತೆ? ಎಂದು ಭಾವಿಸಿಕೊಂಡರು, ಅಂತಿಮವಾಗಿ ಆಗಿದೆ ಎಂಬುದೇ ನಮಗೆ ಸಂತೋಷ!

ಡಿ.ವೈ.ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಆದ ಪ್ರಮುಖ ಬದಲಾವಣೆ ಇದಾಗಿದೆ. ಈ ಹಿಂದೆ ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಖ್ಯ ನ್ಯಾಯಮೂರ್ತಿಗಳು, ‘ಸುಪ್ರೀಂ ಕೋರ್ಟ್ ತೀರ್ಪುಗಳನ್ನು ರಾಜ್ಯ ಭಾಷೆಗಳಲ್ಲಿ ಪ್ರಕಟಿಸಬೇಕು’ ಎಂದು ಬಹಿರಂಗವಾಗಿ ಹೇಳಿದ್ದರು. ಇದನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರ ಎಲ್ಲಾ ನಾಯಕರೂ ಸ್ವಾಗತಿಸಿದ್ದರು.

ತೀರ್ಪುಗಳನ್ನು ರಾಜ್ಯ ಭಾಷೆಗಳಿಗೆ ಭಾಷಾಂತರಿಸಲು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಎ.ಎಸ್.ಓಕಾ ನೇತೃತ್ವದಲ್ಲಿ ಆರು ಜನರ ಸಮಿತಿಯನ್ನು ರಚಿಸಲಾಗಿತ್ತು. ‘ಅವರೆಲ್ಲರು ತಮ್ಮ ಕೆಲಸವನ್ನು ಗಂಭೀರವಾಗಿ ಮಾಡಿದ್ದಾರೆ’ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹೇಳಿದ್ದರು.

ಸುಪ್ರೀಂ ಕೋರ್ಟ್‌ನ ಎಲೆಕ್ಟ್ರಾನಿಕ್ ವಿಭಾಗದ ಪರವಾಗಿ 34 ಸಾವಿರ ತೀರ್ಪುಗಳನ್ನು ಪ್ರತ್ಯೇಕವಾಗಿ ಸಿದ್ಧಪಡಿಸಲಾಗಿದೆ. ಈ ಎಲ್ಲಾ ತೀರ್ಪುಗಳನ್ನು ಸಾರ್ವಜನಿಕರ ಉಚಿತ ವೀಕ್ಷಣೆಗೆ ಲಭ್ಯವಾಗುವಂತೆ ಮಾಡಲಾಗಿದೆ. ಇದರಿಂದ ಮೊದಲ ಹಂತವಾಗಿ 1268 ತೀರ್ಪುಗಳು ಕನ್ನಡ ಸೇರಿದಂತೆ ಇತರ ರಾಜ್ಯ ಭಾಷೆಗಳಿಗೆ ಅನುವಾದ ಮಾಡಲಾಗಿದೆ. ಭಾರತದ ಸಂವಿಧಾನದ 8ನೇ ಶೆಡ್ಯೂಲ್‌ನಲ್ಲಿ ಪಟ್ಟಿ ಮಾಡಲಾದ 22 ಭಾಷೆಗಳಲ್ಲಿ ಅವುಗಳನ್ನು ಪ್ರಕಟಿಸಲಾಗುವುದು. ‘ಸುಪ್ರೀಂ ಕೋರ್ಟ್‌ನ ಎಲ್ಲಾ ತೀರ್ಪುಗಳನ್ನು ರಾಜ್ಯ ಭಾಷೆಗಳಲ್ಲಿ ಅನುವಾದಿಸಿ ಪ್ರಕಟಿಸಲಾಗುವುದು. ಆದ್ದರಿಂದ ವಕೀಲರು ಸುಪ್ರೀಂ ಕೋರ್ಟ್‌ಗೆ ಸಹಕರಿಸಬೇಕು’ ಎಂದು ಮುಖ್ಯ ನ್ಯಾಯಮೂರ್ತಿಗಳು ಕೇಳಿಕೊಂಡಿದ್ದಾರೆ. ಅದರಂತೆ ಗಣರಾಜ್ಯೋತ್ಸವದಂದು ತೀರ್ಪುಗಳನ್ನು ಪ್ರಕಟಿಸಲಾಗಿದೆ.

ಕಳೆದ ಏಪ್ರಿಲ್ ನಲ್ಲಿ ಮದ್ರಾಸ್ ಹೈಕೋರ್ಟ್ ನಲ್ಲಿ ನಡೆದ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಂದಿನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ‘ಪ್ರಾದೇಶಿಕ ಭಾಷೆಗಳನ್ನು ನ್ಯಾಯಾಲಯದ ಭಾಷೆಯನ್ನಾಗಿ ಮಾಡುವುದು ಮುಖ್ಯ. ಏಕೆಂದರೆ, ದಾವೆದಾರರು ನ್ಯಾಯದ ಆಡಳಿತದ ಪ್ರಕ್ರಿಯೆಯನ್ನು ಅರ್ಥಮಾಡಿಕೊಳ್ಳಬೇಕು. ಯಾರಿಗೂ ಅರ್ಥವಾಗದ ಮಂತ್ರ ಪಠಣದಂತೆ ಇರಬಾರದು’ ಎಂದರು. (It is important that regional languages are made languages of the court because the litigant must understand the process of administration of justice. It should not be like chanting of mantra that no one understands.)

ಈಗ ಮೊದಲ ಹಂತದಲ್ಲಿ ಕನ್ನಡ ಸೇರಿದಂತೆ ಇತರ ಭಾಷೆಗಳಲ್ಲಿ ತೀರ್ಪು ಪ್ರಕಟಿಸಲಾಗಿದೆ. ಭಾರತೀಯ ನ್ಯಾಯಾಂಗದ ಇತಿಹಾಸದಲ್ಲಿ ಇದು ಅತ್ಯಂತ ಮಹತ್ವವಾದದ್ದು.